AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಸಭೆಯಲ್ಲಿ ಕಳ್ಳನ ಕೈಚಳ: 40 ಸಾವಿರ ರೂ. ಎಗರಿಸಿದವನಿಗೆ ಭರ್ಜರಿ ಗೂಸಾ

ಜೆಡಿಎಸ್​​ ಸಭೆಯಲ್ಲಿ ಕಾರ್ಯಕರ್ತ ಜೇಬಿನಲ್ಲಿದ್ದ ಕಳ್ಳ 40 ಸಾವಿರ ರೂ. ಕಳ್ಳತನ ಮಾಡಿರುವಂತಹ ಘಟನೆ ರಾಮನಗರ ಬಿಡದಿ ತೋಟದಲ್ಲಿ ನಡೆದಿದೆ. ಕುಂದಾಪುದ ಜೆಡಿಎಸ್ ಕಾರ್ಯಕರ್ತನ ಜೇಬಿಗೆ ಕೈ ಹಾಕಿ 40 ಸಾವಿರ ರೂ. ಕಳ್ಳತನ ಮಾಡಲಾಗಿದೆ. ತಕ್ಷವೇ ಎಚ್ಚೆತ್ತುಕೊಂಡ ಕಾರ್ಯಕರ್ತರು ಕಳ್ಳನನ್ನ ಹಿಡಿದಿದ್ದಾರೆ. ಕುಮಾರಸ್ವಾಮಿ ಗನ್ ಮ್ಯಾನ್​ಗಳಿಂದ ಖದೀಮನಿಗೆ ಗೂಸಾ ಕೊಡಲಾಗಿದೆ. 

ಜೆಡಿಎಸ್ ಸಭೆಯಲ್ಲಿ ಕಳ್ಳನ ಕೈಚಳ: 40 ಸಾವಿರ ರೂ. ಎಗರಿಸಿದವನಿಗೆ ಭರ್ಜರಿ ಗೂಸಾ
ಜೆಡಿಎಸ್ ಸಭೆಯಲ್ಲಿ ಕಳ್ಳ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Oct 01, 2023 | 5:12 PM

Share

ರಾಮನಗರ, ಅಕ್ಟೋಬರ್​ 01: ಜೆಡಿಎಸ್​​ ಸಭೆಯಲ್ಲಿ ಕಾರ್ಯಕರ್ತ ಜೇಬಿನಲ್ಲಿದ್ದ ಕಳ್ಳ 40 ಸಾವಿರ ರೂ. ಕಳ್ಳತನ (Theft) ಮಾಡಿರುವಂತಹ ಘಟನೆ ರಾಮನಗರ ಬಿಡದಿ ತೋಟದಲ್ಲಿ ನಡೆದಿದೆ. ಜೆಡಿಎಸ್ ಹಾಲಿ ಮತ್ತು ಮಾಜಿ ಶಾಸಕರ ಸಭೆ ಮಾಡಲಾಗಿದ್ದು, ಈ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿಸುವ ವೇಳೆ‌ ಕುಂದಾಪುದ ಜೆಡಿಎಸ್ ಕಾರ್ಯಕರ್ತನ ಜೇಬಿಗೆ ಕೈ ಹಾಕಿ 40 ಸಾವಿರ ರೂ. ಕಳ್ಳತನ ಮಾಡಲಾಗಿದೆ. ತಕ್ಷವೇ ಎಚ್ಚೆತ್ತುಕೊಂಡ ಕಾರ್ಯಕರ್ತರು ಕಳ್ಳನನ್ನ ಹಿಡಿದಿದ್ದಾರೆ. ಕುಮಾರಸ್ವಾಮಿ ಗನ್ ಮ್ಯಾನ್​ಗಳಿಂದ ಖದೀಮನಿಗೆ ಗೂಸಾ ಕೊಡಲಾಗಿದೆ.

ರಾತ್ರಿ ನಿಲ್ಲಿಸಿ ಬೆಳಗ್ಗೆ ನೋಡೋಷ್ಟರಲ್ಲಿ ಮಾಯವಾಗುತ್ತಿವೆ ಬೈಕ್​ಗಳು

ದೇವನಹಳ್ಳಿ: ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ರಾತ್ರಿ ನಿಲ್ಲಿಸಿ ಬೆಳಗ್ಗೆ ನೋಡೋಷ್ಟರಲ್ಲಿ ಬೈಕ್​ಗಳು ಮಾಯವಾಗಿವೆ. ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸದ್ಯ ಕಳ್ಳರು ಬೈಕ್​ಗಳನ್ನು ಖದೀಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ರಾಯಚೂರು: ಡಿಜೆ ಸೌಂಡಿಗೆ 19 ದಿನದ ಹಸುಗೂಸು ಸಾವನ್ನಪ್ಪಿತೇ? ವೈದ್ಯರು ಹೇಳುವುದೇನು? ಇಲ್ಲಿದೆ ವಿವರ

ಒಂದು ತಿಂಗಳಿನಿಂದ ಡಿಯೋ , ಪಲ್ಸರ್, ಎವಿ ಡ್ಯೂಟಿ, ಯಮಹಾ ಸೇರಿದಂತೆ ಹಲವು ಬೈಕ್​ಗಳು ಕಳವು ಮಾಡಲಾಗಿದೆ. ರಾತ್ರಿ ವೇಳೆ ಬೈಕ್​ಗಳು ಕಾಣೆಯಾಗುತ್ತಿರುವುದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ನಾಲ್ಕೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಕದಿಯುತ್ತಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮನೆಯ ಪಾಯಾ ತೆಗೆಯುವಾಗ ಸಿಕ್ತು ಎಂದು ನಕಲಿ ಚಿನ್ನ ನೀಡಿ ವಂಚನೆ; ಹಣ ಕಳೆದುಕೊಂಡು ಕಂಗಾಲಾದ ಗುತ್ತಿಗೆದಾರ

ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದ್ದು, ಬೈಕ್ ಕಳ್ಳರನ್ನ ಹಿಡಿಯಲು ಪೊಲೀಸರು ನಿರ್ಲಕ್ಷ ವಹಿಸಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಮನ ಬೇರೆಡೆ ಸೆಳೆದು 20 ಸಾವಿರ ರೂ. ಕಳ್ಳತನ  

ನೆಲಮಂಗಲ: ಮೊಬೈಲ್ ರಿಪೇರಿ ಅಂಗಡಿಯಲ್ಲಿ ಮಾಲೀಕನಿಗೆ ಮಂಕುಬೂದಿ ಎರಚಿ ಗಮನ ಬೇರೆಡೆಗೆ ಸೆಳೆದು 20 ಸಾವಿರ ರೂ. ಕಳ್ಳತನ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲು ಘಟನೆ ನಡೆದಿದೆ. ಓರ್ವ ವ್ಯಕ್ತಿ, ಇಬ್ಬರು ಮಹಿಳೆಯರಿಂದ ಕೃತ್ಯವೆಸಗಲಾಗಿದೆ. ಹೇಮಂತ್ ಹಣ ಕಳೆದುಕೊಂಡ ಅಂಗಡಿ ಮಾಲೀಕ.

ಮಗನ ಸ್ಕೂಲ್ ಫೀಜ್ ಕಟ್ಟಲೆಂದು ಹಣ ತೆಗೆದಿಟ್ಟಿದ್ದರು. ದುಷ್ಕರ್ಮಿಗಳ ಕೃತ್ಯ ಸಿಸಿಕ್ಯಾಮೆರಾದಲ್ಲಿ ಸೆರೆ ಆಗಿದೆ. ಅಪರಿಚಿತರನ್ನು ಬಂಧಿಸುವಂತೆ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು