ಜೆಡಿಎಸ್ ಸಭೆಯಲ್ಲಿ ಕಳ್ಳನ ಕೈಚಳ: 40 ಸಾವಿರ ರೂ. ಎಗರಿಸಿದವನಿಗೆ ಭರ್ಜರಿ ಗೂಸಾ

ಜೆಡಿಎಸ್​​ ಸಭೆಯಲ್ಲಿ ಕಾರ್ಯಕರ್ತ ಜೇಬಿನಲ್ಲಿದ್ದ ಕಳ್ಳ 40 ಸಾವಿರ ರೂ. ಕಳ್ಳತನ ಮಾಡಿರುವಂತಹ ಘಟನೆ ರಾಮನಗರ ಬಿಡದಿ ತೋಟದಲ್ಲಿ ನಡೆದಿದೆ. ಕುಂದಾಪುದ ಜೆಡಿಎಸ್ ಕಾರ್ಯಕರ್ತನ ಜೇಬಿಗೆ ಕೈ ಹಾಕಿ 40 ಸಾವಿರ ರೂ. ಕಳ್ಳತನ ಮಾಡಲಾಗಿದೆ. ತಕ್ಷವೇ ಎಚ್ಚೆತ್ತುಕೊಂಡ ಕಾರ್ಯಕರ್ತರು ಕಳ್ಳನನ್ನ ಹಿಡಿದಿದ್ದಾರೆ. ಕುಮಾರಸ್ವಾಮಿ ಗನ್ ಮ್ಯಾನ್​ಗಳಿಂದ ಖದೀಮನಿಗೆ ಗೂಸಾ ಕೊಡಲಾಗಿದೆ. 

ಜೆಡಿಎಸ್ ಸಭೆಯಲ್ಲಿ ಕಳ್ಳನ ಕೈಚಳ: 40 ಸಾವಿರ ರೂ. ಎಗರಿಸಿದವನಿಗೆ ಭರ್ಜರಿ ಗೂಸಾ
ಜೆಡಿಎಸ್ ಸಭೆಯಲ್ಲಿ ಕಳ್ಳ
Edited By:

Updated on: Oct 01, 2023 | 5:12 PM

ರಾಮನಗರ, ಅಕ್ಟೋಬರ್​ 01: ಜೆಡಿಎಸ್​​ ಸಭೆಯಲ್ಲಿ ಕಾರ್ಯಕರ್ತ ಜೇಬಿನಲ್ಲಿದ್ದ ಕಳ್ಳ 40 ಸಾವಿರ ರೂ. ಕಳ್ಳತನ (Theft) ಮಾಡಿರುವಂತಹ ಘಟನೆ ರಾಮನಗರ ಬಿಡದಿ ತೋಟದಲ್ಲಿ ನಡೆದಿದೆ. ಜೆಡಿಎಸ್ ಹಾಲಿ ಮತ್ತು ಮಾಜಿ ಶಾಸಕರ ಸಭೆ ಮಾಡಲಾಗಿದ್ದು, ಈ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿಸುವ ವೇಳೆ‌ ಕುಂದಾಪುದ ಜೆಡಿಎಸ್ ಕಾರ್ಯಕರ್ತನ ಜೇಬಿಗೆ ಕೈ ಹಾಕಿ 40 ಸಾವಿರ ರೂ. ಕಳ್ಳತನ ಮಾಡಲಾಗಿದೆ. ತಕ್ಷವೇ ಎಚ್ಚೆತ್ತುಕೊಂಡ ಕಾರ್ಯಕರ್ತರು ಕಳ್ಳನನ್ನ ಹಿಡಿದಿದ್ದಾರೆ. ಕುಮಾರಸ್ವಾಮಿ ಗನ್ ಮ್ಯಾನ್​ಗಳಿಂದ ಖದೀಮನಿಗೆ ಗೂಸಾ ಕೊಡಲಾಗಿದೆ.

ರಾತ್ರಿ ನಿಲ್ಲಿಸಿ ಬೆಳಗ್ಗೆ ನೋಡೋಷ್ಟರಲ್ಲಿ ಮಾಯವಾಗುತ್ತಿವೆ ಬೈಕ್​ಗಳು

ದೇವನಹಳ್ಳಿ: ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ರಾತ್ರಿ ನಿಲ್ಲಿಸಿ ಬೆಳಗ್ಗೆ ನೋಡೋಷ್ಟರಲ್ಲಿ ಬೈಕ್​ಗಳು ಮಾಯವಾಗಿವೆ. ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸದ್ಯ ಕಳ್ಳರು ಬೈಕ್​ಗಳನ್ನು ಖದೀಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ರಾಯಚೂರು: ಡಿಜೆ ಸೌಂಡಿಗೆ 19 ದಿನದ ಹಸುಗೂಸು ಸಾವನ್ನಪ್ಪಿತೇ? ವೈದ್ಯರು ಹೇಳುವುದೇನು? ಇಲ್ಲಿದೆ ವಿವರ

ಒಂದು ತಿಂಗಳಿನಿಂದ ಡಿಯೋ , ಪಲ್ಸರ್, ಎವಿ ಡ್ಯೂಟಿ, ಯಮಹಾ ಸೇರಿದಂತೆ ಹಲವು ಬೈಕ್​ಗಳು ಕಳವು ಮಾಡಲಾಗಿದೆ. ರಾತ್ರಿ ವೇಳೆ ಬೈಕ್​ಗಳು ಕಾಣೆಯಾಗುತ್ತಿರುವುದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ನಾಲ್ಕೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಕದಿಯುತ್ತಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮನೆಯ ಪಾಯಾ ತೆಗೆಯುವಾಗ ಸಿಕ್ತು ಎಂದು ನಕಲಿ ಚಿನ್ನ ನೀಡಿ ವಂಚನೆ; ಹಣ ಕಳೆದುಕೊಂಡು ಕಂಗಾಲಾದ ಗುತ್ತಿಗೆದಾರ

ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದ್ದು, ಬೈಕ್ ಕಳ್ಳರನ್ನ ಹಿಡಿಯಲು ಪೊಲೀಸರು ನಿರ್ಲಕ್ಷ ವಹಿಸಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಮನ ಬೇರೆಡೆ ಸೆಳೆದು 20 ಸಾವಿರ ರೂ. ಕಳ್ಳತನ  

ನೆಲಮಂಗಲ: ಮೊಬೈಲ್ ರಿಪೇರಿ ಅಂಗಡಿಯಲ್ಲಿ ಮಾಲೀಕನಿಗೆ ಮಂಕುಬೂದಿ ಎರಚಿ ಗಮನ ಬೇರೆಡೆಗೆ ಸೆಳೆದು 20 ಸಾವಿರ ರೂ. ಕಳ್ಳತನ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲು ಘಟನೆ ನಡೆದಿದೆ. ಓರ್ವ ವ್ಯಕ್ತಿ, ಇಬ್ಬರು ಮಹಿಳೆಯರಿಂದ ಕೃತ್ಯವೆಸಗಲಾಗಿದೆ. ಹೇಮಂತ್ ಹಣ ಕಳೆದುಕೊಂಡ ಅಂಗಡಿ ಮಾಲೀಕ.

ಮಗನ ಸ್ಕೂಲ್ ಫೀಜ್ ಕಟ್ಟಲೆಂದು ಹಣ ತೆಗೆದಿಟ್ಟಿದ್ದರು. ದುಷ್ಕರ್ಮಿಗಳ ಕೃತ್ಯ ಸಿಸಿಕ್ಯಾಮೆರಾದಲ್ಲಿ ಸೆರೆ ಆಗಿದೆ. ಅಪರಿಚಿತರನ್ನು ಬಂಧಿಸುವಂತೆ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us