Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್

ಇವತ್ತೀನ ಕಾಲದಲ್ಲಿ ಯಾರನ್ನ ನಂಬುವುದು ತಿಳಿಯದಂತಹ ಪರಿಸ್ಥಿತಿ ಬಂದಿದೆ. ಅದರಂತೆ ನ್ಯಾಯಾಧೀಶರ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನ ಇದೀಗ ಐಜೂರು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 11:20 AM

ರಾಮನಗರ, ಜು.29: ನ್ಯಾಯಾಧೀಶ(Judge)ರ ಮನೆಯಲ್ಲೇ‌ ಕಳ್ಳತನ(Theft) ಮಾಡಿದ್ದ ಖದೀಮನನ್ನ ಇದೀಗ ಐಜೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ(Ramanagara) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶೆಯವರ ಮನೆಯಲ್ಲಿ ಜು.25 ರಂದು ಕಳ್ಳತನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಧೀಶೆ ಪತಿಯವರು ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಕಾರ್ಯ ಸನ್ನದ್ಧರಾದ ಪೊಲೀಸರು, ಇದೀಗ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯಾಯಾಧೀಶರ ಕಾರು ಚಾಲಕನಿಂದಲೇ ನಡೆದಿದ್ದ ಕೃತ್ಯ

ಹೌದು, ಇವತ್ತೀನ ಕಾಲದಲ್ಲಿ ಯಾರನ್ನ ನಂಬುವುದು ತಿಳಿಯದಂತಹ ಪರಿಸ್ಥಿತಿ ಬಂದಿದೆ. ಅದರಂತೆ ನ್ಯಾಯಾಧೀಶರ ಕಾರು ಚಾಲಕನಿಂದಲೇ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಇತ 7 ಗ್ರಾಂ ಚಿನ್ನ, 30ಗ್ರಾಂ ಬೆಳ್ಳಿ ಕಳ್ಳತನವನ್ನ ಮಾಡಿ, ಎಸ್ಕೇಪ್ ಆಗಿದ್ದ. ಈ ಘಟನೆ ನಿಮಿತ್ತ ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಚಾಲಕನನ್ನ ಬಂಧಿಸಿದ್ದು, ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:Yadgir police: ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ: 1 ತಿಂಗಳಲ್ಲಿ ಪತ್ನಿಯ ಕಳ್ಳಾಟ ಬಯಲಿಗೆಳೆದ ಯಾದಗಿರಿ ಪೊಲೀಸರು!

ಟ್ರಂಡ್ಸ್ ಶಾಫಿಂಗ್ ಮಾಲ್ ಒಳಗೆ ನುಗ್ಗಿದ ಕಳ್ಳ; ಖದೀಮನಿಗಾಗಿ ಪೊಲೀಸರ ಶೋಧ

ದಾವಣಗೆರೆ: ನಗರದ ಬಿಪಿ ರಸ್ತೆಯಲ್ಲಿರುವ ಟ್ರೆಂಡ್ಸ್ ಶಾಫಿಂಗ್ ಮಾಲ್ ಒಳಗೆ ಕಳ್ಳ ನುಗ್ಗಿರುವ ಘಟನೆ ನಡೆದಿದೆ. ಬೆಳಗ್ಗೆ ಸೆಕ್ಯೂರಿಟಿಗೆ ಕಳ್ಳ ಕಾಣಿಸಿಕೊಂಡಿದ್ದು, ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಹಿನ್ನಲೆ ಕಳ್ಳನನ್ನು ಹಿಡಿಯಲು ಕಳೆದ ಮೂರು ಗಂಟೆಗಳಿಂದ ಪೊಲೀಸರು ಇಡೀ ಶಾಫಿಂಗ್​ ಮಾಲ್​ನ್ನು ಶೋಧ ಮಾಡುತ್ತಿದ್ದಾರೆ. ಹೌದು ಇದೀಗ ಡಾಗ್ ಸ್ಕ್ವಾಡ್, ಹಾಗೂ ಕೆಟಿಜೆ ನಗರ ಠಾಣೆ ಪೊಲೀಸರು ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡುತ್ತಿದ್ದು, ಶಾಪಿಂಗ್ ಮಾಲ್ ಮುಂಭಾಗದಲ್ಲಿ ಜನರು ಜಮಾಯಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Sat, 29 July 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us