AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಿಲ್ಲ, ಮೂಲಭೂತ ಸೌಕರ್ಯ ಸಿಗಬೇಕು ಅಷ್ಟೇ -ರಾಮಲಿಂಗಾ ರೆಡ್ಡಿ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ನಷ್ಟ ಆಗಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಿಲ್ಲ, ಮೂಲಭೂತ ಸೌಕರ್ಯ ಸಿಗಬೇಕು ಅಷ್ಟೇ -ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಆಯೇಷಾ ಬಾನು|

Updated on: Oct 27, 2023 | 12:48 PM

Share

ರಾಮನಗರ, ಅ.27: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರತಿಕ್ರಿಯೆ ನೀಡಿದ್ದಾರೆ. ಹೆಸರು ಬದಲಾವಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ನಷ್ಟ ಆಗಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಹೆಸರು ಮರುನಾಮಕರಣ ವಿಚಾರ ಸಂಬಂಧ ಮಾಗಡಿಯಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮರುನಾಮಕರಣದ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ಸಿಕ್ಕಿಲ್ಲ, ಚರ್ಚೆ ಮಾಡಿಲ್ಲ. ಆದರೆ ಹೆಸರು ಬದಲಾವಣೆ ಮಾಡೋದ್ರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದ್ರೆ ಯಾವುದೇ ನಷ್ಟ ಆಗಲ್ಲ. ಜೊತೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು. ಆ ಉದ್ದೇಶದಿಂದ ಬದಲಾವಣೆ ಆದರೆ ತೊಂದರೆ ಇಲ್ಲ ಎಂದರು.

ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ ಮಾಡಿದ್ರೆ ಉಪವಾಸ ಸತ್ಯಾಗ್ರಹ: ಡಿಕೆಶಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಇನ್ನು ಇದೇ ವೇಳೆ ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ಹಣತಿಂದಿಲ್ಲ ಎಂದು ಪ್ರಮಾಣ ಮಾಡಲಿ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವರು ತಿರುಗೇಟು ನೀಡಿದ್ದಾರೆ. ಅವರ ಹೇಳಿಕೆಗೆ ಮಾನ್ಯತೆ ನೀಡಬೇಕಿಲ್ಲ. ಚುನಾವಣೆ ಬಂದಾಗ ಯಾವ ಪಕ್ಷ ಅಧಿಕಾರದಲ್ಲಿರಬೇಕು ಅಂತ ಜನ ತೀರ್ಮಾನ ಮಾಡ್ತಾರೆ. ಕಳೆದ ಐದು ತಿಂಗಳ ಹಿಂದೆ ಜನ ನಿರ್ಧಾರ ಮಾಡಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಈ ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆ ಇಲ್ಲ. ಅವರ ಸರ್ಕಾರ ಇದ್ದಾಗ ಅವರೇನು‌ ಮಾಡಿದ್ದಾರೆ ಅಂತಾ ಗೊತ್ತು. ನಮ್ಮ ಮೇಲೆ ಆರೋಪ ಮಾಡುವ ಬದಲು ಲೋಕಾಯುಕ್ತಕ್ಕೆ ದೂರು ಕೊಡಲಿ. ಇಲ್ಲ ಯಾವುದೇ ತನಿಖೆಗೆ ಒತ್ತಾಯ ಮಾಡಲಿ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.

ನಮ್ಮ ಪಾಡಿಗೆ ನಮ್ಮನ್ನ ಬಿಟ್ಟುಬಿಡಿ

ಮತ್ತೊಂದೆಡೆ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು ಜಾಣ ಉತ್ತರ ನೀಡಿದ್ದಾರೆ. ನಗುತ್ತಲೇ ನಮ್ಮನ್ಯಾಕೆ ಕಾಂಟ್ರೊವರ್ಸಿಗೆ ಎಳೀತಿರಾ. ತುಮಕೂರಿನವರು ಶಾಂತಿಯಿಂದ ಇದ್ದೀವಪ್ಪ. ನಮ್ಮ ಪಾಡಿಗೆ ನಮ್ಮನ್ನ ಬಿಟ್ಟುಬಿಡಿ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?