AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು ಹಣ, ಚಿನ್ನದ ಸರ ಲೂಟಿ ಮಾಡಿದ ಖದೀಮರು

ಕಾರು ತಡೆದು ‌ನಿಲ್ಲಿಸಿ ಹಣ, ಚಿನ್ನದ ಸರ ಲೂಟಿ ಮಾಡಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ ಚೆನ್ನಪಟ್ಟಣ ಸಮೀಪದ ಕನ್ನಮಂಗಲ‌ ಬ್ರಿಡ್ಜ್ ಬಳಿ ನಡೆದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು ಹಣ, ಚಿನ್ನದ ಸರ ಲೂಟಿ ಮಾಡಿದ ಖದೀಮರು
ಬೆಂಗಳೂರು ಮೈಸೂರು ಹೆದ್ದಾರಿ ಕಳ್ಳತನ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 13, 2023 | 11:18 AM

ರಾಮನಗರ: ಕಾರು ತಡೆದು ‌ನಿಲ್ಲಿಸಿ ಹಣ, ಚಿನ್ನದ ಸರ ಲೂಟಿ ಮಾಡಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ(Bangalore Mysore Expressway) ಚೆನ್ನಪಟ್ಟಣ ಸಮೀಪದ ಕನ್ನಮಂಗಲ‌ ಬ್ರಿಡ್ಜ್ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಧನುಷ್ ಎಂಬುವವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದರು. ಈ ವೇಳೆ ಕನ್ನಮಂಗಲ ಬ್ರಿಡ್ಜ್ ಬಳಿ ಎರಡು ಬೈಕ್​ಗಳಲ್ಲಿ ಹಿಂದಿನಿಂದ ಬಂದ ನಾಲ್ಕು ಅಪರಿಚಿತರು ಕಾರು ತಡೆದು‌ ನಿಲ್ಲಿಸಿ, ಚಾಕು ತೋರಿಸಿ ಹಲ್ಲೆ ಮಾಡಿ ಬರೊಬ್ಬರಿ ಒಂದೂವರೆ ಲಕ್ಷ ಮೌಲ್ಯದ ಚಿನ್ನದ ಸರ, ಹಣ ದರೋಡೆ ಮಾಡಿದ್ದಾರೆ.

ನಾವು ಪೊಲೀಸರು ತಪಾಸಣೆ ಮಾಡ್ಬೇಕು ಎಂದು ಅವಾಜ್ ಹಾಕಿ ದರೋಡೆ

ಹೌದು ಇದೇ ತಿಂಗಳ ಜುಲೈ 7 ರ ರಾತ್ರಿ 8 ಗಂಟೆಗೆ‌ ನಡೆದಿರುವ ಘಟನೆ ಇದಾಗಿದ್ದು, ನಾವು ಪೊಲೀಸರು ತಪಾಸಣೆ ಮಾಡ್ಬೇಕು ಎಂದು ಅವಾಜ್ ಹಾಕಿ ಧನುಷ್ ಮುಖಕ್ಕೆ ಗುದ್ದಿ, ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಕೊರಳಲಿದ್ದ 28 ಗ್ರಾಂ ಚಿನ್ನದ ಸರ, ಹಣವನ್ನ ಎಗರಿಸಿ ಎಸ್ಕೇಪ್​ ಆಗಿದ್ದಾರೆ. ಘಟನೆ ಬಳಿಕ ದಿಕ್ಕು ತೋಚದೆ ಸುಮ್ಮನಿದ್ದ ಧನುಷ್‌, ಬಳಿಕ ಕುಟುಂಬದವರ ಜತೆ ಚರ್ಚಿಸಿ ರಾಮನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು-ಮೈಸೂರು ಹೆದ್ದಾರಿ ಮದ್ದೂರು ಬಳಿ ಲೋಕಲ್ ಬಾರ್ ಆಯ್ತೇ? ‘ಕುಡುಕ ಮುಕ್ತ ಹೈವೇ’ಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮಂಗಳೂರಿನ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಖದೀಮರು

ಮಂಗಳೂರು: ತಾಲೂಕಿನ ಹೊಸಬೆಟ್ಟು ಜಂಕ್ಷನ್ ಬಳಿಯಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿ ಇದಾಗಿದ್ದು, ತಡರಾತ್ರಿ ಕಚೇರಿಗೆ ಎಂಟ್ರಿ ಕೊಟ್ಟಿದ್ದ ಖದೀಮರ ತಂಡ, ಮುಂಭಾಗದ ಡೋರಿನ ಗ್ಲಾಸ್ ಮುರಿದು ಒಳ ನುಗ್ಗಿದ್ದಾರೆ. ಕಚೇರಿ ಪೂರ್ತಿ ತಡಕಾಡಿ ಡ್ರಾವರ್​ನಲ್ಲಿದ್ದ ಕಾರುಗಳ ಕೀಯನ್ನು ಪಡೆದಿದ್ದ ತಂಡ, ಕೀ ಬಳಸಿ ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಎರಡು ಕಾರು ಕಳ್ಳತನ ಮಾಡಿದ್ದಾರೆ.

6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಕಳ್ಳತನ

ಖದೀಮರು ಕಚೇರಿಯ ಸುಮಾರು 15 ಲಕ್ಷ ಮೌಲ್ಯದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳ ಸೇರಿದಂತೆ 6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕಳ್ಳತನದ ಕೃತ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿ ಒಳಪ್ರವೇಶಿಸಿದ್ದಾರೆ. ಈ ವೇಳೆ ಗ್ಲಾಸ್ ಒಡೆಯುವ ಹಾಗೂ ಕಾರು ಎಸ್ಕೇಪ್ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Thu, 13 July 23

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ