AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು ಹಣ, ಚಿನ್ನದ ಸರ ಲೂಟಿ ಮಾಡಿದ ಖದೀಮರು

ಕಾರು ತಡೆದು ‌ನಿಲ್ಲಿಸಿ ಹಣ, ಚಿನ್ನದ ಸರ ಲೂಟಿ ಮಾಡಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ ಚೆನ್ನಪಟ್ಟಣ ಸಮೀಪದ ಕನ್ನಮಂಗಲ‌ ಬ್ರಿಡ್ಜ್ ಬಳಿ ನಡೆದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು ಹಣ, ಚಿನ್ನದ ಸರ ಲೂಟಿ ಮಾಡಿದ ಖದೀಮರು
ಬೆಂಗಳೂರು ಮೈಸೂರು ಹೆದ್ದಾರಿ ಕಳ್ಳತನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 13, 2023 | 11:18 AM

Share

ರಾಮನಗರ: ಕಾರು ತಡೆದು ‌ನಿಲ್ಲಿಸಿ ಹಣ, ಚಿನ್ನದ ಸರ ಲೂಟಿ ಮಾಡಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ(Bangalore Mysore Expressway) ಚೆನ್ನಪಟ್ಟಣ ಸಮೀಪದ ಕನ್ನಮಂಗಲ‌ ಬ್ರಿಡ್ಜ್ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಧನುಷ್ ಎಂಬುವವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದರು. ಈ ವೇಳೆ ಕನ್ನಮಂಗಲ ಬ್ರಿಡ್ಜ್ ಬಳಿ ಎರಡು ಬೈಕ್​ಗಳಲ್ಲಿ ಹಿಂದಿನಿಂದ ಬಂದ ನಾಲ್ಕು ಅಪರಿಚಿತರು ಕಾರು ತಡೆದು‌ ನಿಲ್ಲಿಸಿ, ಚಾಕು ತೋರಿಸಿ ಹಲ್ಲೆ ಮಾಡಿ ಬರೊಬ್ಬರಿ ಒಂದೂವರೆ ಲಕ್ಷ ಮೌಲ್ಯದ ಚಿನ್ನದ ಸರ, ಹಣ ದರೋಡೆ ಮಾಡಿದ್ದಾರೆ.

ನಾವು ಪೊಲೀಸರು ತಪಾಸಣೆ ಮಾಡ್ಬೇಕು ಎಂದು ಅವಾಜ್ ಹಾಕಿ ದರೋಡೆ

ಹೌದು ಇದೇ ತಿಂಗಳ ಜುಲೈ 7 ರ ರಾತ್ರಿ 8 ಗಂಟೆಗೆ‌ ನಡೆದಿರುವ ಘಟನೆ ಇದಾಗಿದ್ದು, ನಾವು ಪೊಲೀಸರು ತಪಾಸಣೆ ಮಾಡ್ಬೇಕು ಎಂದು ಅವಾಜ್ ಹಾಕಿ ಧನುಷ್ ಮುಖಕ್ಕೆ ಗುದ್ದಿ, ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಕೊರಳಲಿದ್ದ 28 ಗ್ರಾಂ ಚಿನ್ನದ ಸರ, ಹಣವನ್ನ ಎಗರಿಸಿ ಎಸ್ಕೇಪ್​ ಆಗಿದ್ದಾರೆ. ಘಟನೆ ಬಳಿಕ ದಿಕ್ಕು ತೋಚದೆ ಸುಮ್ಮನಿದ್ದ ಧನುಷ್‌, ಬಳಿಕ ಕುಟುಂಬದವರ ಜತೆ ಚರ್ಚಿಸಿ ರಾಮನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು-ಮೈಸೂರು ಹೆದ್ದಾರಿ ಮದ್ದೂರು ಬಳಿ ಲೋಕಲ್ ಬಾರ್ ಆಯ್ತೇ? ‘ಕುಡುಕ ಮುಕ್ತ ಹೈವೇ’ಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮಂಗಳೂರಿನ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಖದೀಮರು

ಮಂಗಳೂರು: ತಾಲೂಕಿನ ಹೊಸಬೆಟ್ಟು ಜಂಕ್ಷನ್ ಬಳಿಯಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿ ಇದಾಗಿದ್ದು, ತಡರಾತ್ರಿ ಕಚೇರಿಗೆ ಎಂಟ್ರಿ ಕೊಟ್ಟಿದ್ದ ಖದೀಮರ ತಂಡ, ಮುಂಭಾಗದ ಡೋರಿನ ಗ್ಲಾಸ್ ಮುರಿದು ಒಳ ನುಗ್ಗಿದ್ದಾರೆ. ಕಚೇರಿ ಪೂರ್ತಿ ತಡಕಾಡಿ ಡ್ರಾವರ್​ನಲ್ಲಿದ್ದ ಕಾರುಗಳ ಕೀಯನ್ನು ಪಡೆದಿದ್ದ ತಂಡ, ಕೀ ಬಳಸಿ ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಎರಡು ಕಾರು ಕಳ್ಳತನ ಮಾಡಿದ್ದಾರೆ.

6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಕಳ್ಳತನ

ಖದೀಮರು ಕಚೇರಿಯ ಸುಮಾರು 15 ಲಕ್ಷ ಮೌಲ್ಯದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳ ಸೇರಿದಂತೆ 6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕಳ್ಳತನದ ಕೃತ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿ ಒಳಪ್ರವೇಶಿಸಿದ್ದಾರೆ. ಈ ವೇಳೆ ಗ್ಲಾಸ್ ಒಡೆಯುವ ಹಾಗೂ ಕಾರು ಎಸ್ಕೇಪ್ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Thu, 13 July 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!