ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು ಹಣ, ಚಿನ್ನದ ಸರ ಲೂಟಿ ಮಾಡಿದ ಖದೀಮರು

ಕಾರು ತಡೆದು ‌ನಿಲ್ಲಿಸಿ ಹಣ, ಚಿನ್ನದ ಸರ ಲೂಟಿ ಮಾಡಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ ಚೆನ್ನಪಟ್ಟಣ ಸಮೀಪದ ಕನ್ನಮಂಗಲ‌ ಬ್ರಿಡ್ಜ್ ಬಳಿ ನಡೆದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು ಹಣ, ಚಿನ್ನದ ಸರ ಲೂಟಿ ಮಾಡಿದ ಖದೀಮರು
ಬೆಂಗಳೂರು ಮೈಸೂರು ಹೆದ್ದಾರಿ ಕಳ್ಳತನ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2023 | 11:18 AM

ರಾಮನಗರ: ಕಾರು ತಡೆದು ‌ನಿಲ್ಲಿಸಿ ಹಣ, ಚಿನ್ನದ ಸರ ಲೂಟಿ ಮಾಡಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ(Bangalore Mysore Expressway) ಚೆನ್ನಪಟ್ಟಣ ಸಮೀಪದ ಕನ್ನಮಂಗಲ‌ ಬ್ರಿಡ್ಜ್ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಧನುಷ್ ಎಂಬುವವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದರು. ಈ ವೇಳೆ ಕನ್ನಮಂಗಲ ಬ್ರಿಡ್ಜ್ ಬಳಿ ಎರಡು ಬೈಕ್​ಗಳಲ್ಲಿ ಹಿಂದಿನಿಂದ ಬಂದ ನಾಲ್ಕು ಅಪರಿಚಿತರು ಕಾರು ತಡೆದು‌ ನಿಲ್ಲಿಸಿ, ಚಾಕು ತೋರಿಸಿ ಹಲ್ಲೆ ಮಾಡಿ ಬರೊಬ್ಬರಿ ಒಂದೂವರೆ ಲಕ್ಷ ಮೌಲ್ಯದ ಚಿನ್ನದ ಸರ, ಹಣ ದರೋಡೆ ಮಾಡಿದ್ದಾರೆ.

ನಾವು ಪೊಲೀಸರು ತಪಾಸಣೆ ಮಾಡ್ಬೇಕು ಎಂದು ಅವಾಜ್ ಹಾಕಿ ದರೋಡೆ

ಹೌದು ಇದೇ ತಿಂಗಳ ಜುಲೈ 7 ರ ರಾತ್ರಿ 8 ಗಂಟೆಗೆ‌ ನಡೆದಿರುವ ಘಟನೆ ಇದಾಗಿದ್ದು, ನಾವು ಪೊಲೀಸರು ತಪಾಸಣೆ ಮಾಡ್ಬೇಕು ಎಂದು ಅವಾಜ್ ಹಾಕಿ ಧನುಷ್ ಮುಖಕ್ಕೆ ಗುದ್ದಿ, ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಕೊರಳಲಿದ್ದ 28 ಗ್ರಾಂ ಚಿನ್ನದ ಸರ, ಹಣವನ್ನ ಎಗರಿಸಿ ಎಸ್ಕೇಪ್​ ಆಗಿದ್ದಾರೆ. ಘಟನೆ ಬಳಿಕ ದಿಕ್ಕು ತೋಚದೆ ಸುಮ್ಮನಿದ್ದ ಧನುಷ್‌, ಬಳಿಕ ಕುಟುಂಬದವರ ಜತೆ ಚರ್ಚಿಸಿ ರಾಮನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು-ಮೈಸೂರು ಹೆದ್ದಾರಿ ಮದ್ದೂರು ಬಳಿ ಲೋಕಲ್ ಬಾರ್ ಆಯ್ತೇ? ‘ಕುಡುಕ ಮುಕ್ತ ಹೈವೇ’ಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮಂಗಳೂರಿನ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಖದೀಮರು

ಮಂಗಳೂರು: ತಾಲೂಕಿನ ಹೊಸಬೆಟ್ಟು ಜಂಕ್ಷನ್ ಬಳಿಯಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿ ಇದಾಗಿದ್ದು, ತಡರಾತ್ರಿ ಕಚೇರಿಗೆ ಎಂಟ್ರಿ ಕೊಟ್ಟಿದ್ದ ಖದೀಮರ ತಂಡ, ಮುಂಭಾಗದ ಡೋರಿನ ಗ್ಲಾಸ್ ಮುರಿದು ಒಳ ನುಗ್ಗಿದ್ದಾರೆ. ಕಚೇರಿ ಪೂರ್ತಿ ತಡಕಾಡಿ ಡ್ರಾವರ್​ನಲ್ಲಿದ್ದ ಕಾರುಗಳ ಕೀಯನ್ನು ಪಡೆದಿದ್ದ ತಂಡ, ಕೀ ಬಳಸಿ ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಎರಡು ಕಾರು ಕಳ್ಳತನ ಮಾಡಿದ್ದಾರೆ.

6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಕಳ್ಳತನ

ಖದೀಮರು ಕಚೇರಿಯ ಸುಮಾರು 15 ಲಕ್ಷ ಮೌಲ್ಯದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳ ಸೇರಿದಂತೆ 6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕಳ್ಳತನದ ಕೃತ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿ ಒಳಪ್ರವೇಶಿಸಿದ್ದಾರೆ. ಈ ವೇಳೆ ಗ್ಲಾಸ್ ಒಡೆಯುವ ಹಾಗೂ ಕಾರು ಎಸ್ಕೇಪ್ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Thu, 13 July 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us