ಹಾಸನ ದುರ್ಘಟನೆ ಮಾಸುವ ಮುನ್ನವೇ ರಾಮನಗರದಲ್ಲೂ ಮೂವರು ಬಾಲಕರು ಜಲಸಮಾಧಿ

ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ರಾಮನಗರ ಜಿಲ್ಲೆಯಲ್ಲೂ ಸಹ ಇಂಹದ್ದೇ ದುರ್ಘಟನೆ ನಡೆದಿದೆ. ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ.

ಹಾಸನ ದುರ್ಘಟನೆ ಮಾಸುವ ಮುನ್ನವೇ ರಾಮನಗರದಲ್ಲೂ ಮೂವರು ಬಾಲಕರು ಜಲಸಮಾಧಿ
Edited By:

Updated on: May 17, 2024 | 4:09 PM

ರಾಮನಗರ, (ಮೇ 17): ಈಜಲು ತೆರಳಿದ್ದ ಮೂವರು ಬಾಲಕರು(children) ನೀರುಪಾಲಾಗಿರುವ ಘಟನೆ ರಾಮನಗರ(Ramanagar)  ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ. ಅಚ್ಚಲು ಗ್ರಾಮದ ಬಳಿ ಇರುವ ಬೆಟ್ಟದ ಮೇಲಿರುವ ತಗ್ಗು ಪ್ರದೇಶಕ್ಕೆ ಈಜಲು ತೆರಳಿದ್ದ ಮಕ್ಕಳು ಜಲಸಮಾಧಿಯಾಗಿದ್ದಾರೆ. ಶಾಬಾಜ್(14), ಸುಲ್ತಾನ್(13), ರಿಹಾನ್ ಖಾನ್(16) ಮೃತರು ದುರ್ವೈವಿಗಳು. ಇನ್ನು ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ, ಮಕ್ಕಳ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

ಮೃತರೆಲ್ಲರೂ ರಾಮನಗರ ಟೌನ್​ನ ಸುಲ್ತಾನ್ ನಗರದ ನಿವಾಸಿಗಳಾಗಿದ್ದು, ಇಂದು ಶುಕ್ರವಾರವಾಗಿದ್ದರಿಂದ ಮಸೀದಿಯಲ್ಲಿ ನಮಾಜ್ ಮುಗಿಸಿಕೊಂಡು ಬಳಿಕ 8 ಬಾಲಕರು ಈಜಾಡಲು ಹೋಗಿದ್ದಾರೆ. ಈ ಪೈಕಿ ಮೂವರು ಬಾಲಕರು ದುರಂತ ಅಂತ್ಯಕಂಡಿದ್ದಾರೆ. ಮೂವರಲ್ಲಿ ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರು.

ಇದನ್ನೂ ಓದಿ: ಸ್ಥಳೀಯರು ವಾಪಸ್ ಕಳುಹಿಸಿದ್ರೂ ಮತ್ತೆ ಬಂದು ದುರಂತ ಅಂತ್ಯ ಕಂಡ ನಾಲ್ಕು ಮಕ್ಕಳು

ನಿನ್ನೆ(ಮೇ 16) ಹಾಸನ ಜಿಲ್ಲೆಯ ಆಲೂರು(Alur) ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಇಂದು(ಮೇ.16) ಬೆಳಿಗ್ಗೆ ದುರಂತವೊಂದು ಸಂಭವಿಸಿದೆ. ಈಜಲು ತೆರಳಿದ್ದ ನಾಲ್ವರು ಮಕ್ಕಳು(Four Childrens) ವಿಶ್ಚಾಸ್, ಪೃಥ್ಚಿ, ಜೀವನ್ ಹಾಗೂ ಬೇಲೂರು ತಾಲ್ಲೂಕು ಮೂಲದ ಸಾತ್ವಿಕ್ ನೀರುಪಾಲಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us