AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ: ಚಿಕಿತ್ಸೆ ಫಲಿಸದೇ ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭಿಸಿದ್ದು, ಈ ಘಟನೆಯಲ್ಲಿ ಏಳು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಮೂವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರ ಸ್ಥಿತಿ ಸಹ ಚಿಂತಾಜನಕವಾಗಿದೆ. ಹೊಟ್ಟೆಪಾಡಿಗಾಗಿ ದೂರು ರಾಜ್ಯದಿಂದ ಬಂದಿದ್ದವರು ದುರಂತ ಅಂತ್ಯಕಂಡಿದ್ದಾರೆ.

ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ: ಚಿಕಿತ್ಸೆ ಫಲಿಸದೇ ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ
Bheemanahalli Fire Incident
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Oct 10, 2025 | 8:46 PM

Share

ರಾಮನಗರ, (ಅಕ್ಟೋಬರ್ 10): ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡದಲ್ಲಿ (Fire Incident) ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೊನ್ನೆ ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ ತಾಲೂಕಿನ ಭೀಮನಹಳ್ಳಿ ಬಳಿ ಶೆಡ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಮೂವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮನುರುಲ್ ಶೇಖ್, ಜಾವಿದ್ ಅಲಿ ಹಾಗೂ ತಜ್‌ಬುಲ್‌ ಮೃತರು.

ಮಂಗಳವಾರ (ಅ.7) ಖಾಸಗಿ ಲೇಔಟ್‌ವೊಂದರಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಶೆಡ್​ ನಲ್ಲಿ ವಾಸವಾಗಿದ್ದರು. ಆದ್ರೆ, ಗ್ಯಾಸ್ ಲೀಕ್ ಆಗಿ ಈ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ 7 ಕಾರ್ಮಿಕರಿಗೆ ಸುಟ್ಟಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಅಕ್ಟೋಬರ್ 10) ಮೂವರು ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರ ಪರಿಸ್ಥಿತಿ ಕೂಡ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಕಟ್ಟಡ ನಿರ್ಮಾಣ ಸಂಸ್ಥೆಯ ನಿರ್ಲಕ್ಷ್ಯ ಕಾರಣ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಸೂಕ್ತ ಪರಿಹಾರಕ್ಕೆ ಒತ್ತಾಯಿಸಿವೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 3 ಮಕ್ಕಳಿದ್ದರೂ ಪ್ರಿಯಕರನ ಜೊತೆ ಲಾಡ್ಜ್​​​ಗೆ ಬಂದು ಹೆಣವಾದಳು: ಬೆಂಕಿ ದುರಂತಕ್ಕೆ ಅಸಲಿ ಕಾರಣ ಬಯಲು

ಬೆಂಗಳೂರಿನ ಯಲಹಂಕದ ನ್ಯೂಟೌನ್‌ನಲ್ಲಿರೋ ಕಿಚನ್‌ ಫ್ಯಾಮಿಲಿ ರೆಸ್ಟೋರೆಂಟ್‌ ನಲ್ಲಿ ಇದ್ದ ಲಾಡ್ಜ್​​ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ, ಯುವಕ ಮೃತಪಟ್ಟಿದ್ದಾರೆ. ಮಹಿಳೆ ಮದುವೆಗೆ ನಿರಾಕರಿಸಿದ್ದಕ್ಕೆ ಯುವಕ ರೂಮಿನಲ್ಲೇ ಬೆಂಕಿ ಹಚ್ಚಿಕೊಂಡಿದ್ದಾನೆ. ಇದರಿಂದ ಇಡೀ ಹೋಟೆಲ್ ಗೆ ಹರಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ