AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಿಂದಲೇ ಬಿಜೆಪಿ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ: ಸಚಿವ ಸಿ ಪಿ ಯೋಗೇಶ್ವರ್ ದೃಢ ನುಡಿ

ಬೆಂಗಳೂರು: ಚನ್ನಪಟ್ಟಣ ನಾನು ಹುಟ್ಟಿದ ತಾಲೂಕು, ಅಲ್ಲಿಂದ ಐದು ಬಾರಿ ಗೆದ್ದಿದ್ದೇನೆ. ನಾನು ಮತ್ತೆ ಅದೇ ವಿಧಾನಸಭಾ ಕ್ಷೇತ್ರದಿಂದಲೇ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಬೆಂಗಳೂರಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಮಂಡ್ಯ ಸಂಸದೆ ಮತ್ತು ಕುಮಾರಸ್ವಾಮಿ ಫೈಟಿಂಗ್ ನಡೆಯುತ್ತಿದೆ. ನಾನು ಗಮನಿಸಿದ ಹಾಗೆ ಕೆಆರ್​ಎಸ್ ಡ್ಯಾಂನ ಇಪ್ಪತ್ತು ಮೂವತ್ತು ಕಿಮೀ ಸುತ್ತಲೂ ನಿರಂತರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಡ್ಯಾಂಗೆ ಸಮಸ್ಯೆ ಆಗಬಹುದು ಅಂತ ಸಂಸದರಿಗೆ ಆತಂಕವಿರಬಹುದು. ಕುಮಾರಸ್ವಾಮಿ ಈಗಾಗಲೇ ಅವರ ವ್ಯಕ್ತಿತ್ವ […]

ಚನ್ನಪಟ್ಟಣದಿಂದಲೇ ಬಿಜೆಪಿ ಪಕ್ಷದಿಂದಲೇ  ಸ್ಪರ್ಧೆ ಮಾಡುತ್ತೇನೆ: ಸಚಿವ ಸಿ ಪಿ ಯೋಗೇಶ್ವರ್ ದೃಢ ನುಡಿ
ಸಚಿವ ಸಿ.ಪಿ.ಯೋಗೇಶ್ವರ್
TV9 Web
| Edited By: |

Updated on:Jul 08, 2021 | 6:12 PM

Share

ಬೆಂಗಳೂರು: ಚನ್ನಪಟ್ಟಣ ನಾನು ಹುಟ್ಟಿದ ತಾಲೂಕು, ಅಲ್ಲಿಂದ ಐದು ಬಾರಿ ಗೆದ್ದಿದ್ದೇನೆ. ನಾನು ಮತ್ತೆ ಅದೇ ವಿಧಾನಸಭಾ ಕ್ಷೇತ್ರದಿಂದಲೇ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಬೆಂಗಳೂರಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಕಳೆದ ಎರಡ್ಮೂರು ದಿನಗಳಿಂದ ಮಂಡ್ಯ ಸಂಸದೆ ಮತ್ತು ಕುಮಾರಸ್ವಾಮಿ ಫೈಟಿಂಗ್ ನಡೆಯುತ್ತಿದೆ. ನಾನು ಗಮನಿಸಿದ ಹಾಗೆ ಕೆಆರ್​ಎಸ್ ಡ್ಯಾಂನ ಇಪ್ಪತ್ತು ಮೂವತ್ತು ಕಿಮೀ ಸುತ್ತಲೂ ನಿರಂತರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಡ್ಯಾಂಗೆ ಸಮಸ್ಯೆ ಆಗಬಹುದು ಅಂತ ಸಂಸದರಿಗೆ ಆತಂಕವಿರಬಹುದು. ಕುಮಾರಸ್ವಾಮಿ ಈಗಾಗಲೇ ಅವರ ವ್ಯಕ್ತಿತ್ವ ಕಳೆದುಕೊಂಡಿದ್ದಾರೆ. ನಾವೇನು ಕುಮಾರ ಸ್ವಾಮಿ ಯನ್ನು ಹೈಲೈಟ್ ಮಾಡುವ ಅವಶ್ಯಕತೆ ಇಲ್ಲ. ಅವರ ಇತ್ತೀಚಿನ ಹೇಳಿಕೆ ತೂಕ ಕಳೆದುಕೊಂಡಿದೆ. ನಾನು ನನ್ನ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಿಕೊಂಡರೆ ಅದು ನನಗೆ ರಿವರ್ಸ್ ಆಗ್ತಿದೆ. ಕುಮಾರಸ್ವಾಮಿ ಅವರು ದಿನೇದಿನೇ ರಾಜಕೀಯ ನೆಲೆ ಕಳೆದುಕೊಳ್ಳುತ್ತಿದ್ದಾರೆ.ಆ ಆತಂಕದಿಂದ ವಿಚಲಿತರಾಗಿ ಮಾತಾಡ್ತಿದ್ದಾರೆ. ಅವಾಚ್ಯವಾಗಿ ಮಾತಾಡುವುದು ಕುಮಾರಸ್ವಾಮಿ ಅವಿರಿಗ ಶೋಭೆ ತರುವಂತದಲ್ಲ. ಅವರು ರಾಜಕೀಯ ದಿನೇ ದಿನೇ ವೀಕ್ ಆಗ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಟೀಕಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಬೆಳಗ್ಗೆ ಹೋಗ್ತಾರೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ರಾತ್ರಿ ಹೋಗ್ತಾರೆ. ಸಿಪಿವೈ ಮಾತನಾಡಿದ್ರೆ ಸಿಎಂ ಹತ್ರ ಇವರಿಬ್ಬರೂ ಹೋಗ್ತಾರೆ. ರೇಣುಕಾಚಾರ್ಯ ಸಿಎಂ ಕಾರ್ಯದರ್ಶಿಯಾಗಲು ಸಿ.ಪಿ.ಯೋಗೇಶ್ವರ್ ಕಾರಣ ಎಂಬುದನ್ನ ಮರೆಯಬಾರದು. 7 ಮಿನಿಸ್ಟರ್ಸ್​ ಕ್ವಾರ್ಟರ್ಸ್​ನಲ್ಲಿ ಎಂಪಿಆರ್​ಗೆ ಸ್ಥಾನ ಸಿಕ್ಕಿದ್ದೇಗೆ? ಅದಕ್ಕೂ ಯೋಗೇಶ್ವರ್ ಕಾರಣ ಎಂಬುದನ್ನ ಮರೆಯಬಾರದು. ಎಂ.ಪಿ.ರೇಣುಕಾಚಾರ್ಯಗೆ ಸಾವಿರ ಕೋಟಿ ಅನುದಾನ ಸಿಕ್ಕಿದೆ. ಅದಕ್ಕೆ ಸಿ.ಪಿ.ಯೋಗೇಶ್ವರ್ ಶ್ರಮ ಕಾರಣ ಎಂದು ಗೊತ್ತಿರಲಿ ಎಂದು ಬೆಂಗಳೂರಲ್ಲಿ ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ: 

ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ: ಕುಮಾರಸ್ವಾಮಿ ತಿರುಗೇಟು

‘ಸ್ಯಾಂಡಲ್​ವುಡ್​ ಸ್ಮಗ್ಲರ್’​ ಟ್ಯಾಗ್​ ಕೊಟ್ಟು ನನ್ನ ಮತ್ತು ಆದಿಚುಂಚನಗಿರಿ ಮಠಾಧೀಶರ ದೂರವಾಣಿ ಕದ್ದಾಲಿಸಲಾಗಿದೆ: ಸಂಸದೆ ಸುಮಲತಾ ಗಂಭೀರ ಆರೋಪ

(Tourism minister CP Yogeshwar says will contest from Channapatna assembly and BJP in next election)

Published On - 4:16 pm, Thu, 8 July 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ