AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ತಿಂಗಳ ಮಗು ದುರಂತ ಅಂತ್ಯ: ಚನ್ನಪಟ್ಟಣದಲ್ಲೊಂದು ಮನಕಲಕುವ ಘಟನೆ

ಸರಿಯಾಗಿ ಇನ್ನು ಪ್ರಪಂಚವನ್ನೇ ನೋಡದ, ಈಗಷ್ಟೇ ಅಂಬೆಗಾಲು ಇಡುತ್ತಿದ್ದ 11 ತಿಂಗಳ ಮಗುವೊಂದು ದುರಂತ ಅಂತ್ಯ ಕಂಡಿರಯವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಂದೆ ತಾಯಿಯ ಗೋಳಾಟ ಎಂತವರ ಕಲ್ಲು ಹೃದಯವನ್ನೂ ಕರಗಿಸುವಂತಿತ್ತು.

11 ತಿಂಗಳ ಮಗು ದುರಂತ ಅಂತ್ಯ: ಚನ್ನಪಟ್ಟಣದಲ್ಲೊಂದು ಮನಕಲಕುವ ಘಟನೆ
ಮೃತ ಮಗು
ಪ್ರಶಾಂತ್​ ಬಿ.
| Edited By: |

Updated on: Oct 20, 2025 | 7:36 AM

Share

ಚನ್ನಪಟ್ಟಣ, ಅಕ್ಟೋಬರ್​ 20: ನೀರಿನ ಟಬ್​ ಒಳಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ (Ramanagar) ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ದುರ್ದೈವಿಯಾಗಿದ್ದು, ಪ್ರಪಂಚವನ್ನು ಸರಿಯಾಗಿ ನೋಡುವ ಮೊದಲೇ ಕಂದಮ್ಮ ಕಣ್ಮುಚ್ಚಿದೆ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದ ಪರಿಣಾಮ  ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಮನೆ ಒರೆಸುವ ಸಲುವಾಗಿ ಟಬ್​ಗೆ ನೀರನ್ನು ತುಂಬಿಸಿ ಇಡಲಾಗಿತ್ತು. ಅಲ್ಲೇ ಮಗು ಕೂಡ ಆಟವಾಡಿಕೊಂಡಿತ್ತು. ಈ ವೇಳೆ ಚನ್ನಪಟ್ಟಣದ ಖಾಸಗಿ ಹೋಟಲ್ ವೊಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಗುವಿನ ತಂದೆ ಶಂಷಾದ್ ಕೆಲಸ ಮುಗಿಸುಕೊಂಡು ಮನೆಗೆ ಬಂದಿದ್ದಾರೆ. ತೀವ್ರ ಬಾಯಾರಿಕೆಯಿಂದ ಬಳಲಿದ್ದ ಕಾರಣ ಹೆಂಡತಿ ಮುಸ್ಕಾನ್ ಬಳಿ ಕುಡಿಯಲು ನೀರು ಕೇಳಿದ್ದಾರೆ. ಮುಸ್ಕಾನ್ ಪತಿಗಾಗಿ ನೀರು ತರಲು ಹೋಗಿ ಬರುವಷ್ಟರಲ್ಲಿ ಆಟವಾಡುತ್ತಿದ್ದ ಖುಷಿ ಟಬ್  ಒಳಗೆ ಬಿದ್ದಿದ್ದಾಳೆ. ಟಬ್​ಗೆ ಬಿದ್ದ ತಕ್ಷಣವೇ ಮಗುವಿಗೆ ಪ್ರಜ್ಞೆ ತಪ್ಪಿದೆ. ಇದರಿಂದ ಭಯಗೊಂಡ ಪೋಷಕರು ಕೂಡಲೇ ಹತ್ತಿರದ ಆಸ್ಪತ್ರೆಗೆ ಮಗುವನ್ನು ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಖುಷಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮನೆ ಕಟ್ಟಲು ಪಡೆದಿದ್ದ ಸಾಲ ತೀರಿಸಲಾಗದೆ ಯೋಧ ಆತ್ಮಹತ್ಯೆ

ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ

ಪ್ರಪಂಚಕ್ಕೆ ಬಂದ ಕೇವಲ 11 ತಿಂಗಳಲ್ಲೇ ಪುಟ್ಟ ಮಗು ವಿಧಯಾಟಕ್ಕೆ ಬಲಿಯಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸುಂದರ ಕುಟುಂಬದ ಜೊತೆ ಈಗಷ್ಟೇ ಅಂಬೆಗಾಲು ಇಡುತ್ತಿದ್ದ ಖುಷಿಯ ಸಾವು, ಕುಟುಂಬಸ್ಥರ ಸಂತೋಷವನ್ನೇ ಕಸಿದಿದೆ. ಘಟನೆ ಸಂಬಂಧ ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ