AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ ಅಂಡ್ ಟಿ ಮುಖ್ಯಸ್ಥರ 90 ಗಂಟೆ ಕೆಲಸದ ಹೇಳಿಕೆ; ವಾಟಾಳ್ ನಾಗರಾಜ್ ಪ್ರತಿಭಟನೆ

Vatal Nagaraj protest at Ramanagara: ಎಲ್ ಅಂಡ್ ಟಿ ಛೇರ್ಮನ್ ಎಸ್.ಎನ್. ಸುಬ್ರಹ್ಮಣ್ಯನ್ ಅವರು ಕೆಲಸದ ಅವಧಿ ಕುರಿತಾಗಿ ನೀಡಿದ ಹೇಳಿಕೆಯನ್ನು ವಾಟಾಳ್ ನಾಗರಾಜ್ ವಿರೋಧಿಸಿದ್ದಾರೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ತಾಕೀತು ಮಾಡಿದ ಸುಬ್ರಹ್ಮಣ್ಯನ್ ವಿರುದ್ಧ ವಾಟಾಳ್ ರಾಮನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಮನೆಯಲ್ಲಿ ಹೆಂಡತಿಯ ಮುಖ ಎಷ್ಟು ಹೊತ್ತು ನೋಡಿಕೊಂಡು ಇರುತ್ತೀರಿ. ಬಂದು ಕೆಲಸ ಮಾಡಿ ಎಂದು ಸುಬ್ರಮಣಿಯನ್ ಉದ್ಯೋಗಿಗಳಿಗೆ ಹೇಳಿದ್ದರು.

ಎಲ್ ಅಂಡ್ ಟಿ ಮುಖ್ಯಸ್ಥರ 90 ಗಂಟೆ ಕೆಲಸದ ಹೇಳಿಕೆ; ವಾಟಾಳ್ ನಾಗರಾಜ್ ಪ್ರತಿಭಟನೆ
ವಾಟಾಳ್ ನಾಗರಾಜ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jan 13, 2025 | 12:17 PM

Share

ರಾಮನಗರ, ಜನವರಿ 13: ಉದ್ಯೋಗಿಗಳು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿದ ಎಲ್ ಅಂಡ್ ಟಿ ಛೇರ್ಮನ್ ಎಸ್ ಎನ್ ಸುಬ್ರಹ್ಮಣಿಯನ್ ಅವರ ಹೇಳಿಕೆಯನ್ನು ವಾಟಾಳ್ ನಾಗರಾಜ್ ಖಂಡಿಸಿದ್ದಾರೆ. ರಾಮನಗರದ ಐಜೂರು ಸರ್ಕಲ್ ಬಳಿ ವಾಟಾಳ್ ಅವರು ಪ್ರತಿಭಟನೆ ನಡೆಸಿ ಸುಬ್ರಮಣಿಯನ್ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಲ್ ಅಂಡ್ ಟಿ ಮುಖ್ಯಸ್ಥರನ್ನು ಮಾತ್ರವಲ್ಲ, ಇನ್ಫೋಸಿಸ್​ನ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರ ವಿರುದ್ಧವೂ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ಯಮಿಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ನೌಕರರ ಬೆನ್ನು ಮೂಳೆ ಮುರಿಯುತ್ತಿದ್ದಾರೆ. ಉದ್ಯೋಗಿಗಳ ಆರೋಗ್ಯ ಹಾಳು ಮಾಡ ಹೊರಟಿದ್ದಾರೆ ಎಂದು ಕನ್ನಡಪರ ಚಳವಳಿಗಾರರಾದ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.

ಎಲ್ ಅಂಡ್ ಟಿ ಮುಖ್ಯಸ್ಥ ಸುಬ್ರಹ್ಮಣಿಯನ್ ಅವರು ಹೆಂಡತಿಯ ಮುಖ ನೋಡಿ ಕೂರಬೇಡಿ ಎಂದು ನಿಕೃಷ್ಟವಾಗಿ ಮಾತನಾಡಿದ್ದಾರೆ. ಗಂಡ ಹೆಂಡತಿಯ ದಾಂಪತ್ಯ ಜೀವನಕ್ಕೆ ಅಗೌರವ ತೋರಿದ್ದಾರೆ. ಇನ್ಫೋಸಿಸ್ ನಾರಾಯಣ ಮೂರ್ತಿ ಕೂಡ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಹೇಳುತ್ತಾರೆ. ಇವು ನೌಕರರನ್ನು ಜೀತದಾಳುಗಳನ್ನಾಗಿ ಮಾಡುವ ಹುನ್ನಾರವಾಗಿದೆ. ಸುಬ್ರಮಣಿಯನ್ ಮತ್ತು ನಾರಾಯಣಮೂರ್ತಿ ಅವರು ದೇಶದ ಪ್ರಜೆಗಳ ಕ್ಷಮೆಕೇಳಬೇಕು. ನೌಕರರಿಂದ ಹೆಚ್ಚಿಗೆ ಕೆಲಸ ಮಾಡುವ ಆಲೋಚನೆ ಕೈಬಿಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​

ಎಲ್ ಅಂಡ್ ಟಿ ಮುಖ್ಯಸ್ಥರು ಹೇಳಿದ್ದೇನು?

ಎಲ್ ಅಂಡ್ ಟಿ ಛೇರ್ಮನ್ ಎಸ್ ಎನ್ ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು 90 ಗಂಟೆ ಕೆಲಸ ಮಾಡಬೇಕು. ಶನಿವಾರ ಮಾತ್ರವಲ್ಲ, ಭಾನುವಾರವೂ ಕೆಲಸ ಮಾಡಬೇಕು ಎಂದು ವಾದಿಸಿದ್ದರು. ವಾರಕ್ಕೆ ಎರಡು ದಿನ ವೀಕಾಫ್ ವಿಚಾರ ಕುರಿತು ಉದ್ಯೋಗಿಗಳೊಂದಿಗೆ ಮಾತನಾಡುತ್ತಾ ಅವರು ಈ ವಿಚಾರ ಹೇಳಿದ್ದಾರೆ.

‘ನೀವು ಮನೆಯಲ್ಲಿ ಕೂತು ಏನು ಮಾಡುತ್ತೀರಿ? ನಿಮ್ಮ ಹೆಂಡತಿಯನ್ನು ಎಷ್ಟು ಹೊತ್ತು ನೋಡಿಕೊಂಡು ಇರುತ್ತೀರಿ? ಹೆಂಡತಿಯರು ತಮ್ಮ ಗಂಡಂದಿರ ಮುಖವನ್ನು ಎಷ್ಟು ಹೊತ್ತು ನೋಡಿಕೊಂಡು ಇರುತ್ತಾರೆ? ಆಫೀಸ್​ಗೆ ಬಂದು ಕೆಲಸ ಮಾಡಿ’ ಎಂದ ಅವರು, ಉದ್ಯೋಗಿಗಳಿಗೆ ಭಾನುವಾರ ಕೆಲಸ ಮಾಡುವುದನ್ನು ಕಡ್ಡಾಯ ಮಾಡಲಾಗದೇ ಇರುವುದಕ್ಕೆ ತನಗೆ ವಿಷಾದ ಇದೆ ಎಂದೂ ಹೇಳಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಕೆಲ ತಿಂಗಳ ಹಿಂದೆ, ಇವತ್ತಿನ ಯುವಕರು ದೇಶದ ಅಭ್ಯುದಯಕ್ಕಾಗಿ ಹೆಚ್ಚು ಅವಧಿ ಕೆಲಸ ಮಾಡಬೇಕು. ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದರು. ನಾರಾಯಣಮೂರ್ತಿ ಅವರ ಹೇಳಿಕೆಗೆ ಪರವಿರೋಧ ಅಭಿಪ್ರಾಯಗಳು ಮತ್ತು ಚರ್ಚೆಗಳು ನಡೆಯುತ್ತಲೇ ಇವೆ. ಆದರೆ, ಎಲ್ ಅಂಡ್ ಟಿ ಮುಖ್ಯಸ್ಥರ ಹೇಳಿಕೆಗೆ ಬಹುತೇಕ ವಿರೋಧವೇ ವ್ಯಕ್ತವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು