ಎಲ್ ಅಂಡ್ ಟಿ ಮುಖ್ಯಸ್ಥರ 90 ಗಂಟೆ ಕೆಲಸದ ಹೇಳಿಕೆ; ವಾಟಾಳ್ ನಾಗರಾಜ್ ಪ್ರತಿಭಟನೆ

Vatal Nagaraj protest at Ramanagara: ಎಲ್ ಅಂಡ್ ಟಿ ಛೇರ್ಮನ್ ಎಸ್.ಎನ್. ಸುಬ್ರಹ್ಮಣ್ಯನ್ ಅವರು ಕೆಲಸದ ಅವಧಿ ಕುರಿತಾಗಿ ನೀಡಿದ ಹೇಳಿಕೆಯನ್ನು ವಾಟಾಳ್ ನಾಗರಾಜ್ ವಿರೋಧಿಸಿದ್ದಾರೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ತಾಕೀತು ಮಾಡಿದ ಸುಬ್ರಹ್ಮಣ್ಯನ್ ವಿರುದ್ಧ ವಾಟಾಳ್ ರಾಮನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಮನೆಯಲ್ಲಿ ಹೆಂಡತಿಯ ಮುಖ ಎಷ್ಟು ಹೊತ್ತು ನೋಡಿಕೊಂಡು ಇರುತ್ತೀರಿ. ಬಂದು ಕೆಲಸ ಮಾಡಿ ಎಂದು ಸುಬ್ರಮಣಿಯನ್ ಉದ್ಯೋಗಿಗಳಿಗೆ ಹೇಳಿದ್ದರು.

ಎಲ್ ಅಂಡ್ ಟಿ ಮುಖ್ಯಸ್ಥರ 90 ಗಂಟೆ ಕೆಲಸದ ಹೇಳಿಕೆ; ವಾಟಾಳ್ ನಾಗರಾಜ್ ಪ್ರತಿಭಟನೆ
ವಾಟಾಳ್ ನಾಗರಾಜ್
Edited By:

Updated on: Jan 13, 2025 | 12:17 PM

ರಾಮನಗರ, ಜನವರಿ 13: ಉದ್ಯೋಗಿಗಳು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿದ ಎಲ್ ಅಂಡ್ ಟಿ ಛೇರ್ಮನ್ ಎಸ್ ಎನ್ ಸುಬ್ರಹ್ಮಣಿಯನ್ ಅವರ ಹೇಳಿಕೆಯನ್ನು ವಾಟಾಳ್ ನಾಗರಾಜ್ ಖಂಡಿಸಿದ್ದಾರೆ. ರಾಮನಗರದ ಐಜೂರು ಸರ್ಕಲ್ ಬಳಿ ವಾಟಾಳ್ ಅವರು ಪ್ರತಿಭಟನೆ ನಡೆಸಿ ಸುಬ್ರಮಣಿಯನ್ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಲ್ ಅಂಡ್ ಟಿ ಮುಖ್ಯಸ್ಥರನ್ನು ಮಾತ್ರವಲ್ಲ, ಇನ್ಫೋಸಿಸ್​ನ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರ ವಿರುದ್ಧವೂ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ಯಮಿಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ನೌಕರರ ಬೆನ್ನು ಮೂಳೆ ಮುರಿಯುತ್ತಿದ್ದಾರೆ. ಉದ್ಯೋಗಿಗಳ ಆರೋಗ್ಯ ಹಾಳು ಮಾಡ ಹೊರಟಿದ್ದಾರೆ ಎಂದು ಕನ್ನಡಪರ ಚಳವಳಿಗಾರರಾದ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.

ಎಲ್ ಅಂಡ್ ಟಿ ಮುಖ್ಯಸ್ಥ ಸುಬ್ರಹ್ಮಣಿಯನ್ ಅವರು ಹೆಂಡತಿಯ ಮುಖ ನೋಡಿ ಕೂರಬೇಡಿ ಎಂದು ನಿಕೃಷ್ಟವಾಗಿ ಮಾತನಾಡಿದ್ದಾರೆ. ಗಂಡ ಹೆಂಡತಿಯ ದಾಂಪತ್ಯ ಜೀವನಕ್ಕೆ ಅಗೌರವ ತೋರಿದ್ದಾರೆ. ಇನ್ಫೋಸಿಸ್ ನಾರಾಯಣ ಮೂರ್ತಿ ಕೂಡ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಹೇಳುತ್ತಾರೆ. ಇವು ನೌಕರರನ್ನು ಜೀತದಾಳುಗಳನ್ನಾಗಿ ಮಾಡುವ ಹುನ್ನಾರವಾಗಿದೆ. ಸುಬ್ರಮಣಿಯನ್ ಮತ್ತು ನಾರಾಯಣಮೂರ್ತಿ ಅವರು ದೇಶದ ಪ್ರಜೆಗಳ ಕ್ಷಮೆಕೇಳಬೇಕು. ನೌಕರರಿಂದ ಹೆಚ್ಚಿಗೆ ಕೆಲಸ ಮಾಡುವ ಆಲೋಚನೆ ಕೈಬಿಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​

ಎಲ್ ಅಂಡ್ ಟಿ ಮುಖ್ಯಸ್ಥರು ಹೇಳಿದ್ದೇನು?

ಎಲ್ ಅಂಡ್ ಟಿ ಛೇರ್ಮನ್ ಎಸ್ ಎನ್ ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು 90 ಗಂಟೆ ಕೆಲಸ ಮಾಡಬೇಕು. ಶನಿವಾರ ಮಾತ್ರವಲ್ಲ, ಭಾನುವಾರವೂ ಕೆಲಸ ಮಾಡಬೇಕು ಎಂದು ವಾದಿಸಿದ್ದರು. ವಾರಕ್ಕೆ ಎರಡು ದಿನ ವೀಕಾಫ್ ವಿಚಾರ ಕುರಿತು ಉದ್ಯೋಗಿಗಳೊಂದಿಗೆ ಮಾತನಾಡುತ್ತಾ ಅವರು ಈ ವಿಚಾರ ಹೇಳಿದ್ದಾರೆ.

‘ನೀವು ಮನೆಯಲ್ಲಿ ಕೂತು ಏನು ಮಾಡುತ್ತೀರಿ? ನಿಮ್ಮ ಹೆಂಡತಿಯನ್ನು ಎಷ್ಟು ಹೊತ್ತು ನೋಡಿಕೊಂಡು ಇರುತ್ತೀರಿ? ಹೆಂಡತಿಯರು ತಮ್ಮ ಗಂಡಂದಿರ ಮುಖವನ್ನು ಎಷ್ಟು ಹೊತ್ತು ನೋಡಿಕೊಂಡು ಇರುತ್ತಾರೆ? ಆಫೀಸ್​ಗೆ ಬಂದು ಕೆಲಸ ಮಾಡಿ’ ಎಂದ ಅವರು, ಉದ್ಯೋಗಿಗಳಿಗೆ ಭಾನುವಾರ ಕೆಲಸ ಮಾಡುವುದನ್ನು ಕಡ್ಡಾಯ ಮಾಡಲಾಗದೇ ಇರುವುದಕ್ಕೆ ತನಗೆ ವಿಷಾದ ಇದೆ ಎಂದೂ ಹೇಳಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಕೆಲ ತಿಂಗಳ ಹಿಂದೆ, ಇವತ್ತಿನ ಯುವಕರು ದೇಶದ ಅಭ್ಯುದಯಕ್ಕಾಗಿ ಹೆಚ್ಚು ಅವಧಿ ಕೆಲಸ ಮಾಡಬೇಕು. ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದರು. ನಾರಾಯಣಮೂರ್ತಿ ಅವರ ಹೇಳಿಕೆಗೆ ಪರವಿರೋಧ ಅಭಿಪ್ರಾಯಗಳು ಮತ್ತು ಚರ್ಚೆಗಳು ನಡೆಯುತ್ತಲೇ ಇವೆ. ಆದರೆ, ಎಲ್ ಅಂಡ್ ಟಿ ಮುಖ್ಯಸ್ಥರ ಹೇಳಿಕೆಗೆ ಬಹುತೇಕ ವಿರೋಧವೇ ವ್ಯಕ್ತವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us