AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ತಮಿಳು ರಿಯಾಲಿಟಿ ಶೋಗೆ ಚಾಲನೆ; ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದ ನಟ ವಿಜಯ್ ಸೇತುಪತಿ

Vijay Sethupathi: ನಟ ವಿಜಯ್​ ಸೇತುಪತಿ, ನಟ ಸುದೀಪ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಈ ಹಿಂದೆ ತಾವು ಕನ್ನಡದಲ್ಲಿ ನಟಿಸಿದ್ದ ‘ಅಖಾಡ’ ಚಿತ್ರದ ಡೈಲಾಗ್ ಹೇಳುವ ಮೂಲಕ ಕನ್ನಡದ ಮೇಲಿನ ಪ್ರೀತಿಯನ್ನು ತೊರ್ಪಡಿಸಿದರು.

ರಾಮನಗರದಲ್ಲಿ ತಮಿಳು ರಿಯಾಲಿಟಿ ಶೋಗೆ ಚಾಲನೆ; ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದ ನಟ ವಿಜಯ್ ಸೇತುಪತಿ
ತಮಿಳು ನಟ ವಿಜಯ್​ ಸೇತುಪತಿ
TV9 Web
| Edited By: |

Updated on:Jul 13, 2021 | 11:05 AM

Share

ರಾಮನಗರ: ದಕ್ಷಿಣ ಭಾರತದ ಸ್ಟಾರ್​ ಕಲಾವಿದ ನಟ ವಿಜಯ್​ ಸೇತುಪತಿ ಬಹುಭಾಷೆಯಲ್ಲಿ ಫೇಮಸ್​. ಅವರ ಕೈಯಲ್ಲಿ ಸಿಕ್ಕಾಪಟ್ಟೆ ಆಫರ್​ಗಳಿವೆ. ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇಷ್ಟೆಲ್ಲ ಬ್ಯುಸಿ ಇರುವಾಗಲೇ ಅವರು ಸಿನಿಮಾ ಹೊರತಾದ ಒಂದು ಕೆಲಸಕ್ಕೆ ಕೈ ಹಾಕಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಅದಕ್ಕೆ ಸಾಕ್ಷಿ ಎನ್ನುವಂತೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ(Vijay Sethupathi)ಯವರು ನಿನ್ನೆ ( ಜುಲೈ 12) ಮಾಸ್ಟರ್ ಚೆಫ್ (Master Chef) ಎಂಬ ತಮಿಳಿನ ರಿಯಾಲಿಟಿ ಶೋ ಗೆ ಚಾಲನೆ ನೀಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಾಲನೆ ನೀಡಿದ್ದು, ಆಗಸ್ಟ್​ನಲ್ಲಿ ತಮಿಳಿನ ಖಾಸಗಿ ಚಾನೇಲ್​ನಲ್ಲಿ ಈ ಕಾರ್ಯಕ್ರಮ ಮೂಡಿ ಬರಲಿದೆ.

ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಚೆಫ್ ಕಾರ್ಯಕ್ರಮನ್ನು ನಟ ವಿಜಯ್​ ಸೇತುಪತಿ ನಿರೂಪಿಸಲಿದ್ದಾರೆ. ಹೀಗಾಗಿ ರಾಮನಗರದಲ್ಲಿ ಈ ಅಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇನ್ನು ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆಯಲಿದೆ. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ವಿಜಯ್ ಸೇತುಪತಿ, ತಮಗೂ ಕರ್ನಾಟಕಕ್ಕೂ ಇರುವ ನಂಟನ್ನು ಮೆಲಕು ಹಾಕಿದರು.

ಮಡಿಕೇರಿ ನನಗೆ ಸಾಕಷ್ಟು ಇಷ್ಟುವಾದ ಸ್ಥಳವಾಗಿದೆ. ಈ ಹಿಂದೆ ಬೆಂಗಳೂರು, ಮೈಸೂರಿಗೂ ಕೂಡ ಬಂದಿದೆ. ಅಲ್ಲದೆ ಬೆಂಗಳೂರಿನ ಕಬ್ಬನ್ ಪಾರ್ಕ್ ಹಾಗೂ ಮೈಸೂರಿನ ಪ್ಯಾಲೇಸ್​ಗೂ ಭೇಟಿ ನೀಡಿದ್ದೇನೆ. ಈ ಸ್ಥಳಗಳು ತುಂಬಾ ಚೆನ್ನಾಗಿದೆ ಎಂದು ತಮಿಳು ನಟ ವಿಜಯ್​ ಸೇತುಪತಿ ಅಭಿಪ್ರಾಯ ಹಂಚಿಕೊಂಡರು.

ಬಳಿಕ ಮಾತನಾಡಿದ ನಟ ವಿಜಯ್​ ಸೇತುಪತಿ, ನಟ ಸುದೀಪ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಈ ಹಿಂದೆ ತಾವು ಕನ್ನಡದಲ್ಲಿ ನಟಿಸಿದ್ದ ‘ಅಖಾಡ’ ಚಿತ್ರದ ಡೈಲಾಗ್ ಹೇಳುವ ಮೂಲಕ ಕನ್ನಡದ ಮೇಲಿನ ಪ್ರೀತಿಯನ್ನು ತೊರ್ಪಡಿಸಿದರು.

ಇದನ್ನೂ ಓದಿ: ವಿಜಯ್​ ಸೇತುಪತಿ ಮೇಲೆ ಕಣ್ಣಿಟ್ಟ ‘ದಿ ಫ್ಯಾಮಿಲಿ ಮ್ಯಾನ್​’ ತಂಡ; 3ನೇ ಸೀಸನ್​ನಲ್ಲಿ ಬಿಗ್​ ಸರ್ಪ್ರೈಸ್​?​

ಹುಟ್ಟುಹಬ್ಬದಂದು ತಲ್ವಾರ್​ನಲ್ಲಿ ಕೇಕ್​ ಕತ್ತರಿಸಿ ವಿವಾದ ಸೃಷ್ಟಿಸಿದ ನಟ ವಿಜಯ್​ ಸೇತುಪತಿ..

Published On - 10:57 am, Tue, 13 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!