ಡಿಸಿಎಂ ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ನಿಲ್ಲದ ಕಾಡಾನೆ ಕಾಟ: ಗೇರಹಳ್ಳಿಯಲ್ಲಿ ಆನೆ ದಾಳಿಗೆ ರೈತ ಬಲಿ

ಕಳೆದ ಹಲವು ದಿನಗಳಿಂದ ಮೂವತ್ತಕ್ಕೂ ಹೆಚ್ಚು ಕಾಡಾನೆಗಳು ತಮಿಳುನಾಡು ಕಡೆಯಿಂದ ಬಂದು ಕನಕಪುರ ಸುತ್ತಮುತ್ತಲಿನ ಗ್ರಾಮಗಳ ಸಮೀಪ ಬೀಡು ಬಿಟ್ಟಿವೆ. ಸಂಜೆಯಾದ್ರೆ ಸಾಕು ಜನ ಹೊರಬರಲಾರದಂಥ ಭಯದ ವಾತಾವರಣ ಶುರುವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ನಿಲ್ಲದ ಕಾಡಾನೆ ಕಾಟ: ಗೇರಹಳ್ಳಿಯಲ್ಲಿ ಆನೆ ದಾಳಿಗೆ ರೈತ ಬಲಿ
ಗೇರೆಹಳ್ಳಿಯ ಪುಟ್ನಂಜ‌ ಅವರ ಕುಟುಂಬದವರು ದುಃಖತಪ್ತರಾಗಿರುವುದು
Follow us
| Updated By: ಗಣಪತಿ ಶರ್ಮ

Updated on:Jan 25, 2024 | 2:49 PM

ರಾಮನಗರ, ಜನವರಿ 25: ರಾಮನಗರ (Ramanagara) ಹೊರವಲಯ ಹಾಗೂ ಕನಕಪುರ ತಾಲೂಕು ಈಗ ರೈತರಿಗೆ ಡೇಂಜರ್ ಸ್ಪಾಟ್ ಆಗಿ ಪರಿಣಮಿಸಿದೆ. ಕೇವಲ ಮೂರು ತಿಂಗಳ ಅಂತರದಲ್ಲಿ ಎಂಟಕ್ಕೂ ಹೆಚ್ಚು ಬಾರಿ ರೈತರ ಮೇಲೆ ಕಾಡಾನೆ ದಾಳಿ (Wild Elephant) ಮಾಡಿದ್ದು, ಒಬ್ಬ ಮಹಿಳೆ ಸೇರಿದಂತೆ ಮೂರು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೊಬ್ಬ ಕಾರ್ಮಿಕ ಜೀವನ್ಮರಣ ಸ್ಥಿತಿಯಲ್ಲಿ ಬದುಕು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಈ ಮಧ್ಯೆ, ಬೆಳೆದ ರಾಗಿ ಬೆಳೆ ಕಣವನ್ನು ಉಳಿಸಿಕೊಳ್ಳಲು ರಾತ್ರಿ ಕಣದ ಬಳಿ ಮಲಗಿದ್ದ ಗೇರೆಹಳ್ಳಿಯ ಪುಟ್ನಂಜ‌ ಎಂಬವರು ಕಾಡಾನೆ ದಾಳಿಗೆ ತುತ್ತಾಗಿ ಗುರುವಾರ ಬೆಳಗ್ಗೆ ಹೆಣವಾಗಿ ಪತ್ತೆಯಾಗಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗೇರಹಳ್ಳಿಯ ರೈತ ಪುಟ್ನಂಜ (65) ಹೊಲದಲ್ಲಿ ರಾಗಿ ಬೆಳೆದಿದ್ದರು. ಬರಗಾಲ ನಡುವೆಯೂ ಅಷ್ಟೋ ಇಷ್ಟೋ ಆದರೂ ಬೆಳೆ ಬರಲಿ ಎಂದು ಕಷ್ಟಪಟ್ಟು ಒಂಚೂರು ಇಳುವರಿ ತೆಗೆದಿದ್ದರು. ರಾಗಿ ಕಣವನ್ನು ಗುಂಪು ಮಾಡಿ ಕಾವಲು ಕಾಯಲು ಹೊಲಕ್ಕೆ ತೆರಳಿದ್ದರು. ರಾತ್ರಿ ಚಳಿ ಇರುವ ಹಿನ್ನೆಲೆ ಪ್ಲಾಸ್ಟಿಕ್​ ಹೊದ್ದುಕೊಂಡು ಮಲಗಿದ್ದರು. ಬೆಳಗಿನ‌ ಜಾವ ಆಹಾರ ಹುಡುಕಿಕೊಂಡು ಬಂದ ಕಾಡಾನೆ ಕಣದ ಬಳಿ ಮಲಗಿದ್ದ ಪುಟ್ನಂಜನನ್ನು ಹೊಸಕಿ ಹಾಕಿದೆ.

ಕಳೆದ ಹಲವು ದಿನಗಳಿಂದ ಮೂವತ್ತಕ್ಕೂ ಹೆಚ್ಚು ಕಾಡಾನೆಗಳು ತಮಿಳುನಾಡು ಕಡೆಯಿಂದ ಬಂದು ಕನಕಪುರ ಸುತ್ತಮುತ್ತಲಿನ ಗ್ರಾಮಗಳ ಸಮೀಪ ಬೀಡು ಬಿಟ್ಟಿವೆ. ಸಂಜೆಯಾದ್ರೆ ಸಾಕು ಜನ ಹೊರಬರಲಾರದಂಥ ಭಯದ ವಾತಾವರಣ ಶುರುವಾಗಿದೆ. ಕಳೆದ ಮೂರು ತಿಂಗಳಿನಲ್ಲಿ‌ ಮೂರು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆನೆಗಳ ದಾಳಿ ನಿಗ್ರಹಿಸುವ ನಿಟ್ಟಿನಲ್ಲಿ ಟಾಸ್ಕ್ ಫೋರ್ಸ್ ಮಾಡಿದರೂ ಕೂಡ, ಆನೆಗಳ ದಾಳಿ ದಿನಗಳೆದಂತೆ ಹೆಚ್ಚಾಗ್ತಿದೆ. ಹೀಗಾಗಿ ಶಾಶ್ವತ ಪರಿಹಾರ ಮಾಡಿಕೊಡಲು ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹ ಮಾಡಿದ್ದಾರೆ. ಅದ್ರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಹೆಚ್ಚು ಆಸಕ್ತಿ ವಹಿಸಿ ರೈತರ ಪ್ರಾಣ ಕಾಪಾಡಬೇಕು ಅಂತ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ದಿಢೀರ್ ಸ್ಥಗಿತ, ಸದ್ದಿಲ್ಲದೆ ಸಾಕಾನೆಗಳ ವಾಪಸ್ ಕಳುಹಿಸಿರುವ ಅರಣ್ಯಾಧಿಕಾರಿಗಳು

ಇತ್ತೀಚೆಗೆ ರಾಜ್ಯದ ಹಲವಡೆ ಮಾನವ – ಕಾಡು ಪ್ರಾಣಿ ಸಂಘರ್ಷ ತಾರಕಕ್ಕೇರಿದೆ. ರಾಮನಗರ, ಕನಕಪುರ ಮಾತ್ರವಲ್ಲದೆ ಹಾಸನ ಜಿಲ್ಲೆಯಲ್ಲಿಯೂ ಕಾಡಾನೆ ಹಾವಳಿ ಮಿತಿ ಮೀರಿದೆ. ಇತ್ತೀಚೆಗಷ್ಟೇ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕಾರ್ಮಿಕರೊಬ್ಬರನ್ನು ಕಾಡಾನೆ ಬಲಿ ಪಡೆದಿತ್ತು. ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸದರಾ ಆನೆ ಅರ್ಜುನ ಮೃತಪಟ್ಟಿತ್ತು. ನಂತರ ಸ್ಥಗಿತಗೊಂಡಿದ್ದ ಕಾರ್ಯಾಚರಣೆ ಕೆಲವು ದಿನಗಳ ಹಿಂದೆ ಪುನರಾರಂಭಗೊಂಡಿತ್ತಾದರೂ ಮತ್ತೆ ಸ್ಥಗಿತಗೊಂಡಿದೆ. ರೈತರು ಆತಂಕದಲ್ಲೇ ದಿನಕಳೆಯುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Thu, 25 January 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!