AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮದಗಜಗಳ ಕಾದಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ನಟಿ ರಮ್ಯಾರನ್ನ ಕಣಕ್ಕಿಳಿಸುವ ಗೇಮ್​ ಪ್ಲಾನ್

Channapattana: ಒಟ್ಟಾರೆ ಹೆಚ್ ಡಿಕೆ ರನ್ನ ಮಣಿಸಲು ಸಿದ್ದು ಮಾಸ್ಟರ್ ಮಾಡಿ ಇಬ್ಬರಲ್ಲಿ ಒಬ್ಬರನ್ನ ಕಣಕ್ಕೆ ಇಳಿಸುತ್ತಾರೆ ಎಂದು ಹೇಳಲಾಗುತ್ತಿದ್ದು, ಇದೇ ವಿಚಾರ ಜಿಲ್ಲೆಯಲ್ಲಿ ಬಿಸಿ ಬಿಸಿ ಚರ್ಚೆಗೂ ಕೂಡ ಕಾರಣವಾಗಿದೆ.

Siddaramaiah: ಮದಗಜಗಳ ಕಾದಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ನಟಿ ರಮ್ಯಾರನ್ನ ಕಣಕ್ಕಿಳಿಸುವ ಗೇಮ್​ ಪ್ಲಾನ್
ಮದಗಜಗಳ ಕಾದಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ನಟಿ ರಮ್ಯಾರನ್ನ ಕಣಕ್ಕಿಳಿಸುವ ಗೇಮ್​ ಪ್ಲಾನ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 16, 2023 | 9:55 AM

ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಇನ್ನೇನೂ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಚುನಾವಣೆ ಕಾವು ರಂಗು ಪಡೆದಿದೆ. ಅದರಲ್ಲೂ ಬೊಂಬೆನಗರಿ ಚನ್ನಪಟ್ಟಣದಲ್ಲಿ (Channapattana) ರಣಕಣ ಕಾವು ಪಡೆದಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಈ ಮಧ್ಯೆ ಇಬ್ಬರಿಗೂ ಟಕ್ಕರ್ ಕೊಡಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸಿದ್ದು, ಚನ್ನಪಟ್ಟಣಕ್ಕೆ ಡಿಕೆ ಸುರೇಶ್ ಅಥವಾ ಚಿತ್ರ ನಟಿ ರಮ್ಯಾರನ್ನ (Actress Ramya) ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದು, ಚುನಾವಣಾ ಕಣ ಮತ್ತಷ್ಟು ರಂಗು ಪಡೆಯಲಿದೆ.

ಹೌದು ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಮೂರು ಪಕ್ಷಗಳು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಅದರಲ್ಲೂ ಬೊಂಬೆನಗರಿ ಚನ್ನಪಟ್ಟಣದಲ್ಲಿ ಚುನಾವಣಾ ಕಾವು ರಂಗೇರಿದೆ. ದಳಪತಿ ಹಾಗೂ ಸೈನಿಕನ ನಡುವೆ ನೇರಾ ಪೈಪೋಟಿ ಏರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ನಡುವೆ ಹಣಾಹಣಿ ನಡೆಯುತ್ತಿದೆ.

ಇದೇ ವೇಳೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನ ಬಲಪಡಿಸಬೇಕು ಎಂದು, ಇಬ್ಬರು ನಾಯಕರಿಗೂ ಟಕ್ಕರ್ ಕೊಡಲು ಮಾಜಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರವನ್ನ ಹೇಗಾದರೂ ಮಾಡಿ ಗೆಲ್ಲಿಸಿಕೊಳ್ಳಲು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅಥವಾ ಚಿತ್ರನಟಿ ರಮ್ಯಾರನ್ನ ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

Will former MP, Actress Ramya contest in Assembly Elections from Mandya 2

ಇದೇ ವಿಚಾರ ಕ್ಷೇತ್ರದಲ್ಲಿ ಸಾಕಷ್ಟು ಸಂಚಲನ ಸಹಾ ಮೂಡಿಸಿದೆ. ಈ ಇಬ್ಬರು ನಾಯಕರು ಬಂದರೆ ಕ್ಷೇತ್ರದ ರಾಜಕೀಯ ಚಿತ್ರಣವೇ ಬದಲಾಗಲಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸಂಸದ ಡಿ ಕೆ ಸುರೇಶ್, ಈ ಬಗ್ಗೆ ನನಗೆ ಗೊತ್ತಿಲ್ಲ. ಸದ್ಯ ನಾನು ಲೋಕಸಭಾ ಸದಸ್ಯನಿದ್ದೇನೆ. ಎಲ್ಲ ಕಡೆ ಪ್ರವಾಸ ಮಾಡಿ ಸಂಘಟನೆ ಮಾಡುತ್ತಿದ್ದೇನೆ. ಎಲ್ಲ ಕಡೆ ಆಹ್ವಾನ ಇದೆ. ನನಗೆ ಆಸಕ್ತಿ ಇಲ್ಲ ಎನ್ನುತ್ತಿದ್ದಾರೆ.

ಅಂದಹಾಗೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಷ್ಟಕಷ್ಟೆ. ಕಳೆದ ಬಾರಿ ಚುನಾವಣೆಯಲ್ಲಿ ಹೆಚ್ ಎಂ ರೇವಣ್ಣ ಅವರನ್ನ ಕಣಕ್ಕೆ ಇಳಿಸಿ 30 ಸಾವಿರ ಮತಗಳು ಪಡೆಯುವಂತೆ ಮಾಡಲಾಗಿದೆ. ಆದರೆ ಸಂಘಟನೆ, ಲೀಡರ್ ಇಲ್ಲದಂತೆ ಆಗಿದ್ದು, ಕಾಂಗ್ರೆಸ್ ನಲ್ಲಿಯೇ ಒಳಜಗಳ ಏರ್ಪಟ್ಟಿದೆ. ಹೀಗಾಗಿ ಒಂದು ಕಡೆ ಪಕ್ಷ ಸಂಘಟನೆ, ಮತ್ತೊಂದು ಕಡೆ ಹೆಚ್ ಡಿಕೆ ಹಾಗೂ ಸೈನಿಕನ ತಿಕ್ಕಾಟದಲ್ಲಿ ಕಾಂಗ್ರೆಸ್ ಲಾಭ ಪಡೆಯಲು ರಮ್ಯಾರನ್ನ ಕಣಕ್ಕೆ ಇಳಿಸುವ ಪ್ಲಾನ್ ಇದೆ ಎನ್ನಲಾಗುತ್ತಿದೆ.

ಇನ್ನು ಚನ್ನಪಟ್ಟಣದಿಂದ ಸಮರ್ಥವಾದ ಅಭ್ಯರ್ಥಿ ಇಲ್ಲ. ಸದ್ಯ ಉದ್ಯಮಿ ಪ್ರಸನ್ನ ಗೌಡರನ್ನ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಆದರೆ ವರ್ಚಸ್ಸು ಇಲ್ಲ. ಹೀಗಾಗಿ ರಮ್ಯಾ ಅಥವಾ ಸುರೇಶ್ ರನ್ನ ಕಣಕ್ಕೆ ಇಳಿಸಿದ್ದೇ ಆದರೆ ಪಕ್ಷ ಸಂಘಟನೆ ಜೊತೆ ಗೆಲವು ಕೂಡ ಸಾಧ್ಯವಾಗಲಿದೆ ಎಂಬ ಲೆಕ್ಕಚಾರವಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಇಬ್ಬರ ಸ್ವರ್ಧೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಾವು ಸುರೇಶ್ ರನ್ನ ಚುನಾವಣೆಯಲ್ಲಿ ಸ್ವರ್ಧೆ ಮಾಡುವಂತೆ ಒತ್ತಾಯ ಮಾಡಿದ್ದೇವೆ ಎನ್ನುತ್ತಿದ್ದಾರೆ.

ಒಟ್ಟಾರೆ ಹೆಚ್ ಡಿಕೆ ರನ್ನ ಮಣಿಸಲು ಸಿದ್ದು ಮಾಸ್ಟರ್ ಮಾಡಿ ಇಬ್ಬರಲ್ಲಿ ಒಬ್ಬರನ್ನ ಕಣಕ್ಕೆ ಇಳಿಸುತ್ತಾರೆ ಎಂದು ಹೇಳಲಾಗುತ್ತಿದ್ದು, ಇದೇ ವಿಚಾರ ಜಿಲ್ಲೆಯಲ್ಲಿ ಬಿಸಿ ಬಿಸಿ ಚರ್ಚೆಗೂ ಕೂಡ ಕಾರಣವಾಗಿದೆ. ಇಬ್ಬರಲ್ಲಿ ಯಾರು ಸ್ವರ್ಧಿಸುತ್ತಾರೆ ಕಾದು ನೋಡಬೇಕು.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9, ರಾಮನಗರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:26 am, Wed, 15 February 23

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ