AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್​ ಸೇರಿ ಇಬ್ಬರು ಅರೆಸ್ಟ್​​, ಮತ್ತಿಬ್ಬರಿಗೆ ಧರ್ಮದೇಟು

ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಲ್ಲದೆ, ಅಪಹರಣ ಯತ್ನ ನಡೆಸಿರುವ ಆರೋಪ ಸಂಬಂಧ ಯೂಟ್ಯೂಬರ್​​ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಎಸ್ಕೇಪ್​​ ಆಗಿ ಠಾಣೆಗೆ ಬಂದಿದ್ದ ಮತ್ತಿಬ್ಬರಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು, ಕೇಸ್​​ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್​ ಸೇರಿ ಇಬ್ಬರು ಅರೆಸ್ಟ್​​, ಮತ್ತಿಬ್ಬರಿಗೆ ಧರ್ಮದೇಟು
ಬಂಧಿತ ಆರೋಪಿ
ಪ್ರಶಾಂತ್​ ಬಿ.
| Edited By: |

Updated on: Jan 02, 2026 | 4:47 PM

Share

ರಾಮನಗರ, ಜನವರಿ 02: ಕುಡಿದ ಮತ್ತಿನಲ್ಲಿ ಅಪ್ರಾಪ್ತೆಯ ಕಿಡ್ಯಾಪ್​​ಗೆ ಯತ್ನಿಸಿದ್ದಲ್ಲದೆ ಆಕೆಯ ಜೊತೆ ಅನುಚಿತ ವರ್ತನೆ ತೋರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಾಗಡಿ ಪೊಲೀಸರು ಯೂಟ್ಯೂಬರ್ ಸೇರಿ ಇಬ್ಬರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್​​ ದಾಖಳಿಸಿದ್ದಾರೆ. ಸಂಬಂಧಿಕರ ಮನೆಯಲ್ಲಿ ಹೊಸ ವರ್ಷ ಆಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಅಪಹರಣಕ್ಕೆ ಆರೋಪಿಗಳು ಯತ್ನಿಸಿದ್ದು, ಈ ವೇಳೆ ಕುಟುಂಬಸ್ಥರೇ ಆಕೆಯ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆ ಏನು?

ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ಪಟ್ಟಣದ ವೆಂಕಟೇಶ್ ಎಂಬಾತ ಫಾರ್ಮ್ ಹೌಸ್​​ನಲ್ಲಿ ನ್ಯೂ‌ಇಯರ್ ಪಾರ್ಟಿ ಆಯೋಜನೆ ಮಾಡಿದ್ದ. ಅನುಮತಿ ಇಲ್ಲದೆ ನಡೆದಿದ್ದ ಈ ಪಾರ್ಟಿಯಲ್ಲಿ ಪ್ರಖ್ಯಾತ ಯೂಟ್ಯೂಬರ್ಸ್ ಸೇರಿ ಹಲವರು ಭಾಗಿಯಾಗಿದ್ದರು. ಆ ಪೈಕಿ ತುಮಕೂರು ‌ಜಿಲ್ಲೆ ಶಿರಾ ಮೂಲದ ರವಿಚಂದ್ರ ಎಂಬ ಯೂಟ್ಯೂಬರ್, ಸಂಬಂಧಿಕರ ಮನೆಯಲ್ಲಿ ಹೊಸ ವರ್ಷಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯನ್ನ ತಡೆದಿದ್ದಾನೆ. ಆಕೆಯನ್ನು ಕಾರಿಗೆ ಎಳೆದುಕೊಂಡು ಹೊರಟಿದ್ದಾನೆ. ಮಗಳು ಮನೆಗೆ ಬಾರದ ಹಿನ್ನೆಲೆ ಕಂಗಾಲಾದ ಪೋಷಕರು ಹುಡುಕಾಟ ನಡೆಸಿದ್ದು, ಈ ವೇಳೆ ಸಂತ್ರಸ್ತೆ ಸಹೋದರನಿಗೊಂದು ಕರೆ ಬಂದಿದೆ. ಅದನ್ನು ಆತ ಸ್ವೀಕರಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ರವಿಚಂದ್ರನ ಮೊಬೈಲ್​​ನಿಂದಲೇ ಕುಟುಂಬಸ್ಥರಿಗೆ ಅಪ್ರಾಪ್ತೆ ಕರೆ ಮಾಡಿದ್ದಳು ಎನ್ನಲಾಗಿದೆ. ಕೂಡಲೇ ಅಲರ್ಟ್​​ ಆದ ಕುಟುಂಬಸ್ಥರು ಮತ್ತು ಊರವರು ಕಾರನ್ನು ಪತ್ತೆ ಮಾಡಿ ಅಡ್ಡಹಾಕಿದ್ದಾರೆ. ಬಾಲಕಿಯ ರಕ್ಷಣೆ ಮಾಡಿದ್ದಲ್ಲದೆ, ಕಾರನ್ನು ಜಖಂಗೊಳಿಸಿದ್ದಾರೆ.

ಇದನ್ನೂ ಓದಿ: ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ; ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ

ಪ್ರಕರಣ ಸಂಬಂಧ ಫಾರ್ಮ್ ಹೌಸ್​​ನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದ ವೆಂಕಟೇಶ್ ಹಾಗೂ ಯೂಟ್ಯೂಬರ್ ರವಿಚಂದ್ರನನ್ನ ಪೊಲೀಸರು ಬಂಧಿಸಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾಗಿ ಬಳಿಕ ನಾಪತ್ತೆಯಾಗಿದ್ದ ಮಂಡ್ಯ ಮೂಲದ ಯೂಟ್ಯೂಬರ್ಸ್ ಕೆಂಪ ಹಾಗೂ ಕಬ್ಜ ಶರಣ ಕೂಡ ಬಳಿಕ ಪೊಲೀಸ್ ಠಾಣೆ ಬಳಿ ಬಂದಿದ್ದು, ಮೊದಲೇ ಆಕ್ರೋಶಗೊಂಡಿದ್ದ ಸ್ಥಳೀಯರು ಇಬ್ಬರಿಗೂ ಧರ್ಮದೇಟು ನೀಡಿದ್ದಾರೆ. ಈ ಸಂಬಂಧ ಶಾಸಕ ಹೆಚ್​​.ಸಿ. ಬಾಲಕೃಷ್ಣ ಕೂಡ ಪೊಲೀಸ್​​ ಠಾಣೆಗೆ ಭೇಟಿ ನೀಡಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ