AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಆರು ಸಚಿವರಿಗೆ ಕಾಡ್ತಿದೆಯಾ ‘ಮುಂಬೈ ಡೈರೀಸ್’ ನೆನಪು! ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮೇಲೆ ಒತ್ತಡ

6 ಮಂದಿ ಹಾಲಿ ಸಚಿವರು ಬಿಜೆಪಿ ಸರ್ಕಾರ ರಚನೆ ವೇಳೆ 15 ದಿನಗಳ ಕಾಲ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲದೆ ಮೂರು ಬಾರಿ, ವಾಸ್ತವ್ಯ ಹೂಡಿದ್ದ ಹೊಟೇಲ್​ಗಳನ್ನು ಪದೇ ಪದೇ ಬದಲಾವಣೆ ಮಾಡಿದ್ದರು.

ಆ ಆರು ಸಚಿವರಿಗೆ ಕಾಡ್ತಿದೆಯಾ 'ಮುಂಬೈ ಡೈರೀಸ್' ನೆನಪು! ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮೇಲೆ ಒತ್ತಡ
ಭೈರತಿ ಬಸವರಾಜ್, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್ ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಕೆ.ಸಿ.ನಾರಾಯಣಗೌಡ
ಪೃಥ್ವಿಶಂಕರ
|

Updated on: Mar 06, 2021 | 9:50 AM

Share

ಬೆಂಗಳೂರು: ತಮ್ಮ ಆಪ್ತ ರಮೇಶ್​ ಜಾರಕಿಹೊಳಿ ಅವರ ಸಿಡಿ ಪ್ರಕರಣ ಹೊರಬರುತ್ತಿದ್ದಂತೆ, ರಮೇಶ್​ ಆಪ್ತರಾದ ಆರು ಮಂದಿ ಸಚಿವರು ರಾಜಕೀಯ ಷಡ್ಯಂತ್ರದ ಗುಮಾನಿ ಬಂದ ಕಾರಣದಿಂದಾಗಿ ತಮ್ಮ ವಿರುದ್ಧ ಯಾವುದೇ ರೀತಿಯ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ಈ ಆರು ಮಂದಿ ಸಚಿವರಿಗೆ ಮುಂಬೈ ಡೈರೀಸ್ ನೆನಪುಗಳ ಆತಂಕ ಕಾಡ್ತಿದೆಯಾ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ಸೃಷ್ಟಿಯಾಗಿದೆ.

15 ದಿನಗಳ ಕಾಲ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು.. ಈ 6 ಮಂದಿ ಹಾಲಿ ಸಚಿವರು ಬಿಜೆಪಿ ಸರ್ಕಾರ ರಚನೆ ವೇಳೆ 15 ದಿನಗಳ ಕಾಲ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲದೆ ಮೂರು ಬಾರಿ, ವಾಸ್ತವ್ಯ ಹೂಡಿದ್ದ ಹೊಟೇಲ್​ಗಳನ್ನು ಪದೇ ಪದೇ ಬದಲಾವಣೆ ಮಾಡಿದ್ದರು. 17 ಮಂದಿಯ ದೇಖರೇಖಿ ನೋಡಿಕೊಳ್ಳಲು ಮುಂಬೈ ನಾಯಕರನ್ನ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಹಾಲಿ ಸಚಿವರುಗಳಿಗೆ ಮುಂಬೈನ ಬಿಜೆಪಿ ಪರಿಷತ್ ಸದಸ್ಯರೊಬ್ಬರು ಸಕಲ ವ್ಯವಸ್ಥೆ ಮಾಡಿದ್ದರು. ಬಿಜೆಪಿ ಯುವ ಘಟಕದ ನಾಯಕರಿಂದಲೂ ರೆಸಾರ್ಟ್ ವಾಸ್ತವ್ಯದಲ್ಲಿದ್ದವರಿಗೆ 24 ಗಂಟೆ ಪಹರೆ ಮಾಡಲಾಗಿತ್ತು.

ಈ ವೇಳೆ ಮೂರ್ನಾಲ್ಕು ಬಾರಿ ರೂಂಗಳನ್ನು ಬದಲಾಯಿಸಲಾಗಿತ್ತು. ಅದೇ ಸಂದರ್ಭದಲ್ಲಿ ಎಡವಟ್ಟು ನಡೆದಿರುವ ಬಗ್ಗೆ ಹಾಲಿ ಸಚಿವರಿಗೆ ಆತಂಕ ಶುರುವಾಗಿದೆ. ಅಲ್ಲದೆ ದಿನೇಶ್ ಕಲ್ಲಹಳ್ಳಿ ಬಳಿಯೇ ಎಲ್ಲ ಸಚಿವರ ಬಗ್ಗೆಯೂ ಕೆಲವೊಂದು ಖಾಸಗಿ ಮಾಹಿತಿ ಇರುವ ಆತಂಕ ಸಚಿವರಿಗೆ ಶುರುವಾಗಿದೆ. ಹೀಗಾಗಿ ದಿನೇಶ್ ಕಲ್ಲಹಳ್ಳಿ ವಿರುದ್ದವೇ ದೂರು ನೀಡುವಂತೆಯೂ ಮಿತ್ರ ಮಂಡಳಿ ಸಚಿವರಿಂದ ಜಾರಕಿಹೊಳಿಗೆ ಒತ್ತಡ ಹಾಕಲಾಗುತ್ತಿದೆ.

ಸಿಡಿ ಸ್ಫೋಟಿಸಿದ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ಒತ್ತಡ ಸಿಡಿ ಸ್ಫೋಟಿಸಿದ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮೇಲೆ ಮುಂಬೈ ಮಿತ್ರ ಮಂಡಳಿಯಿಂದ ಭಾರಿ ಒತ್ತಡ ಹಾಕಲಾಗುತ್ತಿದೆಯಂತೆ. ಸಿಡಿ ಸ್ಫೋಟಿಸಿ ಖಾಸಗಿತನ ಖುಲ್ಲಂ ಖುಲ್ಲಾ ಮಾಡಿದ್ದಕ್ಕೆ ದೂರು ಕೊಡಿ, ಇದರಿಂದ ಪೊಲೀಸ್ ತನಿಖೆಯಲ್ಲಿ ಷಡ್ಯಂತ್ರ ಬಯಲಾಗುತ್ತೆ. ಈಗ ನೀವು..! ಮುಂದಕ್ಕೆ ಇನ್ನಷ್ಟು ಸಚಿವರ ಮೇಲೂ ಷಡ್ಯಂತ್ರ ಮಾಡಬಹುದು. ಹೀಗಾಗಿ ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿಗೆ ಮುಂಬೈ ಮಿತ್ರಮಂಡಳಿ ನಾಯಕರು ದೂರು ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ರಾಜಕೀಯ ಷಡ್ಯಂತ್ರದ ಗುಮಾನಿಯಿಂದ ಕೋರ್ಟ್ ಮೊರೆ ಹೋಗಿದ್ದೇವೆ: ಟ್ವಿಟ್ಟರ್​ನಲ್ಲಿ ಸ್ಪಷ್ಟನೆ ನೀಡಿದ ಸಚಿವ ಡಾ.ಕೆ.ಸುಧಾಕರ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?