AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ಕೋರ್ಟ್​ಗೆ ಲೆಟರ್ ಬರೆದ ಸಿಡಿ ಯುವತಿ​, ಇತ್ತ ಎಸ್​ಐಟಿ ವಿಚಾರಣೆಗೆ ಹಾಜರಾದ ಎ1 ರಮೇಶ್​ ಜಾರಕಿಹೊಳಿ

ತಮ್ಮ ಆಪ್ತ, ಮಾಜಿ ಎಂಎಲ್​ಎ ನಾಗರಾಜ್ ಹಾಗೂ ವಕೀಲರ ಜೊತೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಆಗಮಿಸಿದ್ದಾರೆ. ಈ ಮಧ್ಯೆ, ಅತ್ತ ಸಿಡಿ ಯುವತಿ ಕೋರ್ಟ್​ಗೆ ಈ ಮೇಲ್​ ಮೂಲಕ ಲೆಟರ್ ಬರೆದು​, ತಾನು ಸಂತ್ರಸ್ತೆಯಾಗಿದ್ದು, ಪ್ರಕರಣವನ್ನು ತಮ್ಮ ನಿಗಾದಲ್ಲಿ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅತ್ತ ಕೋರ್ಟ್​ಗೆ ಲೆಟರ್ ಬರೆದ ಸಿಡಿ ಯುವತಿ​, ಇತ್ತ ಎಸ್​ಐಟಿ ವಿಚಾರಣೆಗೆ ಹಾಜರಾದ ಎ1 ರಮೇಶ್​ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ ಎಸ್​ಐಟಿ ವಿಚಾರಣೆಗೆ ಹಾಜರ್​
ಸಾಧು ಶ್ರೀನಾಥ್​
| Edited By: |

Updated on:Mar 29, 2021 | 10:43 AM

Share

ಬೆಂಗಳೂರು: ವಾರದ ಆರಂಭ ದಿನವಾದ ಸೋಮವಾರ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಹಗರಣದಲ್ಲಿ ನಿರೀಕ್ಷಿತವಾಗಿಯೇ ಬಿರುಸಿನ ಬೆಳವಣಿಗೆಗಳು ಆರಂಭವಾಗಿವೆ. ಪ್ರಮುಖವಾಗಿ ನಿನ್ನೆ ಸಿಡಿ ಯುವತಿ ಕೋರ್ಟ್​ಗೆ ಪತ್ರ ಮುಖೇನ ಮೊರೆಹೋಗಿದ್ದಾಳೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಎಸ್​ಐಟಿ ಪೊಲೀಸರು ಅದೇ ಸಮಯದಲ್ಲಿ ತ್ವರಿತವಾಗಿ ರಮೇಶ್​ ಜಾರಕಿಹೊಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಪೊಲೀಸರು ಸೂಚಿಸಿದ್ದರು. ಅದರಂತೆ ರಮೇಶ್​ ಜಾರಕಿಹೊಳಿ ಇದೀಗ ವಿಚಾರಣೆಗೆ ಖುದ್ದಾಗಿ ಹಾಜರಾಗಿದ್ದಾರೆ.

ಲೈಂಗಿಕ ಸಿಡಿ ಪ್ರಕರಣದಲ್ಲಿ ಎ1 ಆಗಿರುವ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಅವರು ಇಂದು ಪ್ರಾಂಪ್ಟ್​ ಆಗಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಆಡುಗೋಡಿಯಲ್ಲಿರುವ ಎಸ್‌ಐಟಿ ಟೆಕ್ನಿಕಲ್ ವಿಂಗ್ ಎದುರು ವಿಚಾರಣೆಗೆ ಸೋಮವಾರ ಬೆಳಗ್ಗೆ 10ಕ್ಕೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್​ಪಾರ್ಕ್ ಠಾಣೆ ಪೊಲೀಸರು ಜಾರಕಿಹೊಳಿಗೆ ನೋಟಿಸ್ ನೀಡಿದ್ದರು.​

ಅದರಂತೆ ತಮ್ಮ ಆಪ್ತ, ಮಾಜಿ ಎಂಎಲ್​ಎ ನಾಗರಾಜ್ ಹಾಗೂ ವಕೀಲರ ಜೊತೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಆಗಮಿಸಿದ್ದಾರೆ. ಈ ಮಧ್ಯೆ, ಅತ್ತ ಸಿಡಿ ಯುವತಿ ಕೋರ್ಟ್​ಗೆ ಈ ಮೇಲ್​ ಮೂಲಕ ಲೆಟರ್ ಬರೆದು​, ತಾನು ಸಂತ್ರಸ್ತೆಯಾಗಿದ್ದು, ಪ್ರಕರಣವನ್ನು ತಮ್ಮ ನಿಗಾದಲ್ಲಿ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಿರ್ಭಯಾ ಪ್ರಕರಣದ ನಂತರ ಭಾರತೀಯ ದಂಡ ಸಂಹಿತೆ ಕಾನೂನಿಗೆ (ಐಪಿಸಿ) ತಿದ್ದುಪಡಿ ತರಲಾಗಿದ್ದು, ಸಂತ್ರಸ್ತೆಯು ಸಿಆರ್‌ಪಿಸಿ 164 ಅಡಿ ಹೇಳಿಕೆ ಕಡ್ಡಾಯವಾಗಿರುತ್ತದೆ. ಹಾಗಾಗಿ, ಹಾಲಿ ಸಿಡಿ ಪ್ರಕರಣದಲ್ಲಿ ವಕೀಲ ಜಗದೀಶ್ ಅವರು ಸಂತ್ರಸ್ತೆಯನ್ನು ಖುದ್ದಾಗಿ ಹಾಜರುಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಯುವತಿ ಕೋರ್ಟ್​ಗೆ ಹಾಜರಾದಲ್ಲಿ ತನಿಖಾಧಿಕಾರಿ ಸಮ್ಮುಖದಲ್ಲಿ ಮ್ಯಾಜಿಸ್ಟ್ರೇಟ್ ಹೇಳಿಕೆ ದಾಖಲು ಮಾಡಿಕೊಳ್ಳುವ ಸಾಧ್ಯತೆಯಿದೆ.

ಆಡುಗೋಡಿ ಎಸ್​ಐಟಿ ಟೆಕ್ನಿಕಲ್ ಸೆಲ್ ಮುಂಭಾಗ ಭದ್ರತೆ ಬಿಗಿ ಇದೀಗತಾನೆ, ಮಾಜಿ ಸಚಿವರ ಎಂಟ್ರಿ ಬೆನ್ನಲ್ಲೇ ಆಡುಗೋಡಿ ಟೆಕ್ನಿಕಲ್ ಸೆಲ್ ಮುಂಭಾಗ ಭದ್ರತೆ ಹೆಚ್ಚಿಸಲಾಗಿದೆ. ಓರ್ವ ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ಭದ್ರತಾ ಏರ್ಪಾಟು ಮಾಡಲಾಗಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಆರಂಭವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಾರುತಿ ಅವರಿಂದ ರಮೇಶ್ ಜಾರಕಿಹೊಳಿ ವಿಚಾರಣೆ ನಡೆದಿದೆ. ಕ್ಯಾಮರಾ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಳ್ಳಲಿದ್ದಾರೆ. ಎಸ್​ಐಟಿಯ ಹಿರಿಯ ಅಧಿಕಾರಿ, ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಆಡುಗೊಡಿ ಟೆಕ್ನಿಕಲ್ ಸೆಲ್​ನಲ್ಲಿ ಉಪಸ್ಥಿತರಿದ್ದಾರೆ.

ಇದೇ ವೇಳೆ, ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಮಾಜಿ ಪತ್ರಕರ್ತ ನರೇಶ್ ಗೌಡ ಪತ್ನಿ ಇಂದು ಬಸವನಗುಡಿಯ ಮಹಿಳಾ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಮಾಸ್ಟರ್‌ ಮೈಂಡ್ ನರೇಶ್‌ ಪತ್ನಿಗೆ ಕಳೆದ ವಾರವೇ ನೋಟಿಸ್ ನೀಡಲಾಗಿತ್ತು. ಇನ್ನು, ಶ್ರವಣ್ ಸಹೋದರ ಚೇತನ್‌ಗೂ ನೊಟೀಸ್ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

Published On - 10:12 am, Mon, 29 March 21

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ