AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಸಿ.ಡಿ.ಗಾಗಿ ರಾಜೀನಾಮೆ ಕೊಟ್ಟರೆ ಸಂಪುಟವೇ ಇರಲ್ಲ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಜಾರಕಿಹೊಳಿ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. ಕಾಣದ ಶಕ್ತಿಗಳು ನಮ್ಮ ಹಿಂದೆ ಈ ಷಡ್ಯಂತ್ರ ಮಾಡುತ್ತಿವೆ. ಇಂದು ಮಧ್ಯಾಹ್ನ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗುತ್ತಾರೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ

ನಕಲಿ ಸಿ.ಡಿ.ಗಾಗಿ ರಾಜೀನಾಮೆ ಕೊಟ್ಟರೆ ಸಂಪುಟವೇ ಇರಲ್ಲ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಬಾಲಚಂದ್ರ ಜಾರಕಿಹೊಳಿ
preethi shettigar
| Edited By: |

Updated on: Mar 03, 2021 | 10:25 AM

Share

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9ಗೆ ರಮೇಶ್ ಜಾರಕಿಹೊಳಿ ಸಹೋದರ, ಅರಭಾವಿ ಬಿಜೆಪಿ ಶಾಸಕ ಮತ್ತು ಕೆಎಂಎಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಸಿಡಿ ಫೇಕ್, ಇದೊಂದು ಸೃಷ್ಟಿ ಮಾಡಿರುವಂತಹ ನಕಲಿ ಸಿಡಿಯಾಗಿದೆ. ಸಿಬಿಐ ತನಿಖೆಗೆ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ. ರಮೇಶ್ ಜಾರಕಿಹೊಳಿ ತಪ್ಪು ಮಾಡಿದ್ದರೆ ಕ್ಷಮೆ ಕೇಳಬೇಕು ಮತ್ತು ರಾಜೀನಾಮೆ ನೀಡಬೇಕು ಸರಿ. ಆದರೆ ಅವರು ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಯುಟ್ಯೂಬ್‌ನಲ್ಲೂ ವಿಡಿಯೋ ಅಪ್‌ಲೋಡ್ ಮಾಡಿದ್ದು, ಇದು ದುಬೈ, ರಷ್ಯಾ, ಸಿಂಗಾಪುರದಿಂದ ಅಪ್‌ಲೋಡ್ ಆಗಿರುವಂತಹ ವಿಡಿಯೋ. ಹೀಗಾಗಿ ಸಿಡಿ ಬಗ್ಗೆ ಸಿಐಡಿ ಅಥವಾ ಸಿಬಿಐ ತನಿಖೆಯಾಗಲಿ. ಈ ರೀತಿ ಮಾಡಿದವರ ವಿರುದ್ಧ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ. ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿಯೇ ಇದ್ದಾರೆ. ಹೈಕಮಾಂಡ್ ಭೇಟಿಗಾಗಿ ರಮೇಶ್ ದೆಹಲಿಗೆ ಹೋಗಲ್ಲ. ನಕಲಿ ಸಿಡಿಗಾಗಿ ರಾಜೀನಾಮೆ ಕೊಟ್ಟರೆ ಸಂಪುಟವೇ ಇರುವುದಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಜಾರಕಿಹೊಳಿ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. ಕಾಣದ ಶಕ್ತಿಗಳು ನಮ್ಮ ಹಿಂದೆ ಈ ಷಡ್ಯಂತ್ರ ಮಾಡುತ್ತಿವೆ. ಇಂದು ಮಧ್ಯಾಹ್ನ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗುತ್ತಾರೆ. ಅಗತ್ಯಬಿದ್ದರೆ ರಮೇಶ್ ಸುದ್ದಿಗೋಷ್ಠಿ ಕೂಡ ಮಾಡುತ್ತಾರೆ. ನಾವು ರಮೇಶ್ ಜಾರಕಿಹೊಳಿ ಬೆಂಬಲವಾಗಿ ನಿಲ್ಲುತ್ತೇವೆ. ಬಿಜೆಪಿಯ ಎಲ್ಲ ಶಾಸಕರು ರಮೇಶ್‌ಗೆ ಬೆಂಬಲವಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಈ ನಕಲಿ ವಿಡಿಯೋ ವಿಚಾರವಾಗಿ ನಾವು ಸುಮ್ಮನ್ನೆ ಕುಳಿತರೆ ಆಗುವುದಿಲ್ಲ, ಇದರ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ.

ದಿನೇಶ್ ಕಲ್ಲಹಳ್ಳಿಗೆ ಕಬ್ಬನ್‌ಪಾರ್ಕ್ ಪೊಲೀಸರಿಂದ ನೋಟಿಸ್: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಗೆ ಕಬ್ಬನ್‌ಪಾರ್ಕ್ ಪೊಲೀಸರಿಂದ ನೋಟಿಸ್ ನೀಡಲಾಗಿದ್ದು, ಇಂದು ಠಾಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಕೋರಿ ನೋಟಿಸ್ ನೀಡಲಾಗಿದೆ. ನಿನ್ನೆ ದಿನೇಶ್ ಕಲ್ಲಳ್ಳಿ ದೂರು ನೀಡುವಾಗ ಅಪೂರ್ಣ ಮಾಹಿತಿ ನೀಡಿದ್ದು, ತನಿಖೆಗೆ ಮತ್ತಷ್ಟು ಮಾಹಿತಿ ಬೇಕಾಗಿರುವ ಹಿನ್ನೆಲೆಯಲ್ಲಿ ಕಬ್ಬನ್‌ಪಾರ್ಕ್ ಇನ್ಸ್​ಪೆಕ್ಟರ್ ನೋಟಿಸ್ ನೀಡಿದ್ದಾರೆ.

ಸಂತ್ರಸ್ತೆಯ ಬಗ್ಗೆ ಮಾಹಿತಿ ನೀಡದ ದಿನೇಶ್ ಕಲ್ಲಳ್ಳಿ, ಸಂತ್ರಸ್ತೆಯ ಸಂಬಂಧಿ, ಸ್ನೇಹಿತರ ಮೂಲಕ ಈ ಬಗ್ಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದರು. ಆದರೆ ಸ್ನೇಹಿತನ ಹೆಸರು ತಿಳಿಸಿರಲಿಲ್ಲ. ಹೀಗಾಗಿ ಸಂತ್ರಸ್ತೆ ಬಗ್ಗೆ ಹಾಗೂ ಸಿಡಿ ಬಗ್ಗೆ ಮತ್ತಷ್ಟು ಸ್ಪಷ್ಟವಾದ ಮಾಹಿತಿ ತಿಳಿಸುವಂತೆ ಕೋರಿ ದಿನೇಶ್ ಕಲ್ಲಳ್ಳಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ರಮೇಶ್‌ ಜಾರಕಿಹೊಳಿ ಸೆಕ್ಸ್ ಸಿಡಿ ಸ್ಫೋಟ; ಮುಜುಗರ ತಪ್ಪಿಸಿಕೊಳ್ಳಲು ಕಾನೂನು ಹೋರಾಟಕ್ಕೆ ಸಿದ್ಧತೆ

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?