AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿಗೆ ಹೇಳಿಕೆ ಕೊಟ್ಟ ನರೇಶ್

ನನಗೆ ಹಲವರ ಕಾಟ್ಯಾಂಕ್ಟ್ ಇದೆ. ನಾನು ಮಾಧ್ಯಮದಲ್ಲಿ ಕೆಲಸ ಮಾಡುತಿದ್ದೆ. ಹೀಗಾಗಿ ನಾನು ಹಲವರನ್ನು ಸಂಪರ್ಕ ಮಾಡಿದ್ದೇನೆ. ಸುದ್ದಿಗಳ ಸಂಬಂಧವಾಗಿ ಹಲವು ಗಣ್ಯರ ಸಂಪರ್ಕ ಮಾಡಿದ್ದೇನೆ. ಮಿನಿಸ್ಟರ್, ಎಂಎಲ್ಎ ಹಾಗೂ ಹಲವರನ್ನು ಹಲವು ಬಾರಿ ಸಂಪರ್ಕ ಮಾಡಿದ್ದೇನೆ. ಆದರೆ ವಿಡಿಯೋ ಬಗ್ಗೆ ನನಗೆ ಏನು ಗೊತ್ತಿಲ್ಲ - ನರೇಶ್ ಎಸ್​ಐಟಿ ಅಧಿಕಾರಿಗಳ ಎದುರು ಹೇಳಿದ್ದು

‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿಗೆ ಹೇಳಿಕೆ ಕೊಟ್ಟ ನರೇಶ್
‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿ ಎದುರು ಹೇಳಿಕೆ ಕೊಟ್ಟ ನರೇಶ್
TV9 Web
| Updated By: ಸಾಧು ಶ್ರೀನಾಥ್​|

Updated on:Jun 14, 2021 | 11:51 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣ ಸಂಬಂಧ ನರೇಶ್ ಗೌಡ ಹಾಗೂ ಶ್ರವಣ್ ಇಂದು ಮಧ್ಯಾಹ್ನ ಆಡುಗೋಡಿಯಲ್ಲಿ ಎಸ್​ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ಸತತ ಮೂರು ಗಂಟೆಗೂ ಹೆಚ್ಚು ಸಮಯದಿಂದ ವಿಚಾರಣೆ ನಡೆಯುತ್ತಿದ್ದಾರೆ. ನರೇಶ್ ಹಾಗೂ ಶ್ರವಣ್ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗುತ್ತಿದೆ. ವಿಚಾರಣೆ ವೇಳೆ ಇಬ್ಬರು ಬಹಳಷ್ಟು ಮಹತ್ವದ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸಂತ್ರಸ್ತ ಯುವತಿ ಬಗೆಗೆ ಕೆಲ ಮಹತ್ವದ ಮಾಹಿತಿ ಹೇಳಿದ್ದಾರೆ.

ನರೇಶ್​ ಗೌಡ ಮತ್ತು ಶ್ರವಣ್ ಅವರಿಬ್ಬರೂ ಎಸ್​​ಐಟಿ ವಿಚಾರಣೆ ಮುಗಿಸಿ, ಆಡುಗೋಡಿ ಟೆಕ್ನಿಕಲ್ ಸೆಲ್​ನಿಂದ ತೆರಳಿದ್ದಾರೆ. ಎಸ್ಐಟಿ ವಿಚಾರಣೆಗೆ ಹಾಜರಾದ ನರೇಶ್ ಗೌಡ, ಶ್ರವಣ್ ಅವರಿಬ್ಬರನ್ನೂ SIT ಅಧಿಕಾರಿಗಳು ಈವರೆಗೂ ಯಾವುದೇ ಪ್ರಶ್ನೆಯನ್ನು ಕೇಳಿಲ್ಲ. ಶ್ರವಣ್ ಮತ್ತು ನರೇಶ್ ತಮ್ಮ ಪರಿಚಯ ಮಾಡಿಕೊಂಡು ಸಿಡಿ ಕೇಸ್​​ಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇಬ್ಬರ ಹೇಳಿಕೆಗಳನ್ನೂ ಎಸ್‌ಐಟಿ ಅಧಿಕಾರಿಗಳು ಪ್ರತ್ಯೇಕವಾಗಿ ದಾಖಲಿಸಿಕೊಂಡಿದ್ದಾರೆ. ಆದರೆ ಈ ವೇಳೆ ಅವರಿಬ್ಬರ ಮೊಬೈಲ್‌ಗಳನ್ನ ವಶಕ್ಕೆ ಪಡೆದು, ಪರಿಶೀಲಿಸಿದ್ದಾರೆ.

ಎಸ್​​ಐಟಿ ಅಧಿಕಾರಿಗಳ ಮುಂದೆ ಆರೋಪಿ ಶ್ರವಣ್​ ಹೇಳಿಕೆ

ಸಂತ್ರಸ್ತ ಯುವತಿ ನನಗೆ ಕಾಲೇಜ್‌ನಲ್ಲಿ ಪರಿಚಯವಾಗಿದ್ರು. ಕಾಲೇಜಿನ ಪ್ರತಿಭಟನೆಯೊಂದರಲ್ಲಿ ಯುವತಿಯ ಪರಿಚಯವಾಯ್ತು. ನಾವು ಯಾರ ಬಳಿಯೂ ಹಣಕ್ಕೆ ಡಿಮ್ಯಾಂಡ್‌ ಮಾಡಿಲ್ಲ. ಸಚಿವರಿಂದ ಅನ್ಯಾಯವಾಗಿದೆ ನ್ಯಾಯ ಕೊಡಿಸಿ ಎಂದಿದ್ದಳು. ಮಾಧ್ಯಮದಲ್ಲಿದ್ದ ಕಾರಣ ನ್ಯಾಯ ಕೊಡಿಸಲು ಮುಂದಾಗಿದ್ವಿ ಎಂದು ಎಸ್​​ಐಟಿ ಅಧಿಕಾರಿಗಳ ಮುಂದೆ ಆರೋಪಿ ಶ್ರವಣ್​ ಹೇಳಿಕೆ ನೀಡಿದ್ದಾರೆ.

ಮತ್ತೊಬ್ಬ ಆರೋಪಿ ನರೇಶ್ ಹೇಳಿದ್ದೇನು?

ಅದಕ್ಕೂ ಮೊದಲು ಮಾಜಿ ಮಂತ್ರಿಯ ಸಿ.ಡಿ. ವಿಡಿಯೋ ಬಗ್ಗೆ ನನಗೇನು ಗೊತ್ತಿಲ್ಲ ಎಂದು ನರೇಶ್ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ಮುಂದೆ ಹೇಳಿದ್ದಾರೆ. ಇನ್ನು ಸಂತ್ರಸ್ತ ಯುವತಿ ಪರಿಚಯವಾಗಿದ್ದು ಹೇಗೆ..? ಎಲ್ಲಿ..? ಎಂಬ ಬಗ್ಗೆ ನರೇಶ್ ಹೇಳಿಕೊಂಡಿದ್ದಾರೆ. ಯುವತಿ ನನಗೆ ಶ್ರವಣ್ ಮತ್ತು ಓರ್ವ ಯುವತಿ ಮುಖಾಂತರ ಪರಿಚಯವಾಗಿತ್ತು. ಆಕೆಗೆ ಅನ್ಯಾಯವಾಗಿದೆ ಅಂತ ನನ್ನ ಬಳಿ ಬಂದಿದ್ದರು. ನನ್ನನ್ನು ಆಕೆ ಅಣ್ಣ ಎಂದು ಸಹ ಕರೆಯುತಿದ್ದರು ಎಂದು ನರೇಶ್ ಎಸಿಪಿ ಧರ್ಮೇಂದ್ರ ಅವರಿಗೆ ಮಾಹಿತಿ ನೀಡಿದ್ದಾರೆ.

ಮುಂದುವರಿದು ಪ್ರಕರಣದ ನಾನಾ ಮಜಲುಗಳನ್ನು ತೆರೆದಿಟ್ಟಿರುವ ನರೇಶ್… ಪ್ರಭಾವಿಯೊಬ್ಬರು ನನಗೆ ಅನ್ಯಾಯಾ ಮಾಡಿದ್ದಾರೆ. ನನಗೆ ಮೊಸ ಮಾಡಿದ್ದಾರೆ ಅಣ್ಣ ಅಂತ ಬಂದಿದ್ದರು. ಜೊತೆಗೆ ನನಗೆ ನ್ಯಾಯಾ ಕೊಡಿಸಿ ಅಣ್ಣ ಎಂದಿದ್ದಳು. ಅಲ್ಲದೇ ಆ ಪ್ರಭಾವಿ ವ್ಯಕ್ತಿಗೆ ಬುದ್ಧಿ ಕಲಿಸಬೇಕು ಅಣ್ಣ ಎಂದಿದ್ದಳು. ನಾನು ಮೀಡಿಯಾದಲ್ಲಿ ಕೆಲಸ ಮಾಡುತಿರುವುದಕ್ಕೆ ಆಕೆ ನನ್ನ ಬಳಿ ಹೇಳಿಕೊಂಡಿದ್ದಳು. ಆದರೆ‌ ಆಕೆಯ ಹೇಳಿಕೆ ವಿಚಾರ ಬಿಟ್ಟು ವಿಡಿಯೋ ಬಗ್ಗೆ, ಯಾವುದೇ ವಸೂಲಿ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ನರೇಶ್ ಹೇಳಿದ್ದಾರೆ.

ಹೌದು, ನನಗೆ ಹಲವರ ಕಾಟ್ಯಾಂಕ್ಟ್ ಇದೆ. ನಾನು ಮಾಧ್ಯಮದಲ್ಲಿ ಕೆಲಸ ಮಾಡುತಿದ್ದೆ. ಹೀಗಾಗಿ ನಾನು ಹಲವರನ್ನು ಸಂಪರ್ಕ ಮಾಡಿದ್ದೇನೆ. ಸುದ್ದಿಗಳ ಸಂಬಂಧವಾಗಿ ಹಲವು ಗಣ್ಯರ ಸಂಪರ್ಕ ಮಾಡಿದ್ದೇನೆ. ಮಿನಿಸ್ಟರ್ ಗಳು, ಎಂಎಲ್ಎಗಳು ಹಾಗೂ ಹಲವರನ್ನು ಹಲವು ಬಾರಿ ಸಂಪರ್ಕ ಮಾಡಿದ್ದೇನೆ. ಆದರೆ ವಿಡಿಯೋ ಬಗ್ಗೆ ನನಗೆ ಏನು ಗೊತ್ತಿಲ್ಲ. ವಸೂಲಿ ವಿಚಾರವೂ ಗೊತ್ತಿಲ್ಲ ಎಂದು ನರೇಶ್ ಇದೇ ವೇಳೆ ಸ್ಪಷ್ಟ ನುಡಿಗಳಲ್ಲಿ ಎಸ್​ಐಟಿ ಅಧಿಕಾರಿಗೆ ತಿಳಿಸಿದ್ದಾರೆ.

ಎಸ್​ಐಟಿ ಕಚೇರಿಯಲ್ಲೇ ನರೇಶ್ ಹಾಗೂ ಶ್ರವಣಗೆ ಊಟ..

ನರೇಶ್ ಹಾಗೂ ಶ್ರವಣ್ ಅವರಿಬ್ಬರ ನಿರಂತರ ವಿಚಾರಣೆಯ ನಡುವೆ ಊಟಕ್ಕೆ ಕೊಂಚ ಬ್ರೇಕ್ ನೀಡಲಾಗಿತ್ತು. ಎಸ್​ಐಟಿ ಸಿಬ್ಬಂದಿಯೇ ತಂದು ಕೊಟ್ಟ ಊಟ ಸೇವಿಸಿದರು. ಕೆಲ ನಿಮಿಷ ಊಟಕ್ಕೆ ಬ್ರೇಕ್ ನೀಡಿದ ಬಳಿಕ ಎಸ್​ಐಟಿ ಅಧಿಕಾರಿಗಳು ಇದೀಗ ಮತ್ತೆ ವಿಚಾರಣೆ ಆರಂಭಿಸಿದ್ದಾರೆ.

(Ramesh Jarkiholi cd case accused naresh shravan narrates the details to sit acp dharmendra)

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖಾಧಿಕಾರಿಗಳ ಮುಂದೆ ಹಾಜರಾದ ನರೇಶ್ – ಶ್ರವಣ್! ಮುಂದೇನು?

Published On - 5:35 pm, Sat, 12 June 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ