Ramesh Jarkiholi: ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿಯದ್ದು ಎನ್ನಲಾದ ಸ್ಫೋಟಕ ಆಡಿಯೋ ಪತ್ತೆ; ಡಿ ಕೆ ಶಿವಕುಮಾರ್ ಹೆಸರು ಪ್ರಸ್ತಾಪ

Ramesh Jarkiholi Case | CD Lady Audio: ಖುದ್ದು ಡಿ. ಕೆ.ಶಿವಕುಮಾರ್ ಮತ್ತು ಡಿಕೆಶಿ ಕಡೆಯವರೇ  ಬರುತ್ತಿದ್ದಾರೆ ಎಂದು ಆಡಿಯೋ ತುಣುಕಿನಲ್ಲಿ ಹೇಳಲಾಗಿದೆ. ಈ ಆಡಿಯೋ ತುಣುಕು ವೈರಲ್ ಆಗುತ್ತಿದೆ.

Ramesh Jarkiholi: ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿಯದ್ದು ಎನ್ನಲಾದ ಸ್ಫೋಟಕ ಆಡಿಯೋ ಪತ್ತೆ; ಡಿ ಕೆ ಶಿವಕುಮಾರ್ ಹೆಸರು ಪ್ರಸ್ತಾಪ
ಸಿಡಿಯಲ್ಲಿದ್ದ ಯುವತಿ
Follow us
| Updated By: Digi Tech Desk

Updated on:Mar 26, 2021 | 7:32 PM

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಈ ಇಳಿಸಂಜೆಯಲ್ಲಿ ಸ್ಫೋಟಕ ತಿರುವು ದೊರೆತಿದೆ.​ ಆ ಸಿಡಿಗೆ ಸಂಬಂಧಿಸಿದ ಯುವತಿ ತನ್ನ ಕುಟುಂಬದವರ ಜತೆ ಮಾತಾಡಿರುವುದು ಎಂದು ಹೇಳಲಾದ ಆಡಿಯೋ ತುಣುಕು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಗೆಳೆಯ ಆಕಾಶ್​ ಜತೆಗಿದ್ದ ವೇಳೆyಲ್ಲಿ ಅವಳು ತನ್ನ ತಮ್ಮನ ಜತೆ ಮಾತನಾಡಿದ್ದಾಳೆ ಎನ್ನುವ 6 ನಿಮಿಷ 59 ಸೆಕೆಂಡ್​ಗಳ ಆಡಿಯೋ ಹೊರಬಿದ್ದಿದೆ.  ‘ನಾನು ನಂಬುವ ಕೃಷ್ಣನ ಮೇಲಾಣೆ ವೈರಲ್ ಆದ ಸಿಡಿ ವಿಡಿಯೋದಲ್ಲಿ ಇರುವುದು  ನಾನಲ್ಲ, ನನ್ನ ನಂಬು’ ಎಂದು ಆಡಿಯೋ ತುಣುಕಿನಲ್ಲಿ ತನ್ನ ತಮ್ಮನ ಬಳಿ ಯುವತಿ ಮನವಿ ಮಾಡಿದ್ದಾಳೆ. ಅಲ್ಲದೇ ‘ಇವೆಲ್ಲವೂ ನಿನಗೆ ಬೇಕಾ?‘ ಎಂದು ಯುವತಿಯ ತಮ್ಮ ಅವಳನ್ನು ಪ್ರಶ್ನಿಸುತ್ತಾನೆ.  ಅದಕ್ಕುತ್ತರಿಸುವ ಯುವತಿ,  ಖುದ್ದು ಡಿ. ಕೆ.ಶಿವಕುಮಾರ್ ಮತ್ತು ಡಿಕೆಶಿ ಕಡೆಯವರೇ  ಬರುತ್ತಿದ್ದಾರೆ ಎಂದು ಆಡಿಯೋ ತುಣುಕಿನಲ್ಲಿ ಹೇಳಲಾಗಿದೆ. ಈ ಆಡಿಯೋ ತುಣುಕು ವೈರಲ್ ಆಗುತ್ತಿದೆ. ಈ ಆಡಿಯೋದ ಕುರಿತು ಈವರೆಗೂ ಯಾವುದೇ ಅಧಿಕೃತ ಮಾಹಿತಿ ಅಥವಾ ಹೇಳಿಕೆ ಹೊರಬಿದ್ದಿಲ್ಲ. ತನಿಖೆಯ ನಂತರವಷ್ಟೇ ಅಧಿಕೃತ ಮಾಹಿತಿ ತಿಳಿದುಬರಬೇಕಿದೆ.

“ನಾನು ಡಿ.ಕೆ.ಶಿವಕುಮಾರ್‌ ಅವರ ಜತೆಗೆ ಇದ್ದೇನೆ” ಎಂದು ಯುವತಿಯದ್ದು ಎಂದು ಹೇಳಲಾದ ಸ್ಫೋಟಕ ಆಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪ ಮಾಡಲಾಗಿದೆ.  ನನ್ನ ಕಡೆ ಡಿಕೆಶಿ ಕಡೆಯವರು ಇದ್ದಾರೆ, ಯಾರೂ ಹೆದರಬೇಡಿ. ಖುದ್ದು ಅವರೇ ಬಂದು ಮಾತಾಡ್ತಾರೆ ಎಂದು  ಯುವತಿಯದ್ದು ಎಂದು ಹೇಳಲಾದ ಆಡಿಯೋದಲ್ಲಿ ಕೇಳಿಸುತ್ತದೆ.

ಆಡಿಯೋ ತುಣುಕಿನಲ್ಲಿ ಏನಿದೆ? 3.31 ಟು 05.07ವರೆಗೆ

ತಾಯಿ – ಹಲೋ ಯುವತಿ – ಮಮ್ಮಿ ನೀನೇ ನನ್ನನ್ ನಂಬು ಮಮ್ಮಿ ತಾಯಿ – ನಂಬಿದೆ ಇಷ್ಟುದಿನ ನಂಬಿ ನಂಬಿನೇ ಹೀಗಾಗಿದೆ ಯುವತಿ – ನನಗೆ ಆಕಾಶ್​ ಮತ್ತು ನನ್ನ ಫ್ರೆಂಡ್ಸ್​ ಸಪೋರ್ಟ್ ಮಾಡ್ತಿದ್ದಾರೆ, ನೀವೆ ಸಪೋರ್ಟ್​ ಮಾಡ್ತಿಲ್ಲ, ನನಗೆ ಅಂಜಿಕೆ ಬರುತ್ತೆ ಮಮ್ಮಿ ತಾಯಿ – ನಾನು ನಂಬಿಗೆ ಅದಕ್ಕೆ ನಾನು ನಿನ್ನ ಬೆಂಗಳೂರಿನಲ್ಲಿ ಇಟ್ಟಿದ್ಧೇನೆ, ನನಗೆ ಗೊತ್ತಿದೆ ನನ್ನ ಮಗಳು ಹೇಗೆ ಅಂತ. ಯುವತಿ – ಇಲ್ಲ ಮಮ್ಮಿ ಅದೆಲ್ಲಾ ಗ್ರಾಫಿಕ್ ಮಮ್ಮಿ ತಾಯಿ – ನಿಂದೆಲ್ಲಾ ಪೋಟೋಸ್​ ಇದ್ಯಲ್ಲಾ, ನೀನು ಸ್ವಲ್ಪ ದಿನ ಮನೆಗೆ ಬಂದುಬಿಡು ಯುವತಿ -ಎಲ್ಲಾ ಕ್ಲಿಯರ್ ಮಾಡಿಕೊಂಡ್ರೆ ಬರ್ತಿನಿ ತಾಯಿ – ಅವತ್ತೇ ನಾನು ಬೇಡ ಅಂತ ಹೇಳಿಲ್ವಾ..ರಾಜಕೀಯದವರ ಜೊತೆ ಹೋಗಬೇಡ ಅಂದಿಲ್ಲೇನು ಯುವತಿ – ನಿಮ್ಮ ಕಾಲಿಗೆ ಬೀಳುತ್ತೇನೆ, ಅಂಗೆಲ್ಲಾ ತಲೆ ಕೆಡಿಸಿಕೊಳ್ಳಬೇಡ, ಅಪ್ಪನಿಗೆ ಏನು ಹೇಳಿಲ್ಲೇನು..? ತಾಯಿ – ನಿಮ್ಮ ಅಪ್ಪನಿಗೆ ಏನು ಹೇಳಿಲ್ಲ ಯುವತಿ – ಅಪ್ಪನಿಗೆ ಏನು ಹೇಳಿಲ್ವಾ ತಾಯಿ – ರಾಜಕೀಯ ಹೊಲಸು,ಅದೆಲ್ಲಾ ಏನು ಬೇಡೇ ಬೇಡ ಬಿಟ್ಟು ಊರಿಗೆ ಬಂದು ಬಿಡವ್ವಾ.. ಯುವತಿ – ಹ್ಹೂ

ಇದನ್ನೂ ಓದಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯಾವ್ಯಾವ IPC ಸೆಕ್ಷನ್​ಗಳ ಅಡಿ ದೂರು ದಾಖಲಾಗಿದೆ? ಮುಂದೇನಾಗಬಹುದು?

ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?

Published On - 7:19 pm, Fri, 26 March 21

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ