AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?

ರಮೇಶ್ ಭೇಟಿಗೆ ಸಹೋದರ ಲಖನ್ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ. ಸಂಜೆ ಬಳಿಕ ಮೂವರು ಸಹೋದರರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
TV9 Web
| Edited By: |

Updated on:Apr 05, 2022 | 1:01 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ತಮ್ಮ ಮುಂದಿನ ನಡೆಯನ್ನು ತೀರ್ಮಾನಿಸಲು ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಹೋದರರೊಂದಿಗೆ ಚರ್ಚೆಗೆ ತೊಡಗಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಮುಂದಿನ ನಡೆಯ ಬಗ್ಗೆ ಸಹೋದರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ರಮೇಶ್ ಭೇಟಿಗೆ ಸಹೋದರ ಲಖನ್ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ. ಸಂಜೆ ಬಳಿಕ ಮೂವರು ಸಹೋದರರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಸಂತ್ರಸ್ತ ಯುವತಿ ವಿಚಾರಣೆಗೆ ಎಸ್‌ಐಟಿ ಸಿದ್ಧತೆ ಮತ್ತೊಂದೆಡೆ, ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಲು ವಿಶೇಷ ತನಿಖಾ ದಳ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಮೊದಲು ಯುವತಿಯ ಧ್ವನಿ ಮಾದರಿಯನ್ನು (ವಾಯ್ಸ್ ಸ್ಯಾಂಪಲ್ಸ್) ಎಸ್​ಐಟಿ ಸಂಗ್ರಹಿಸಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಸಂತ್ರಸ್ತೆ ವಾಯ್ಸ್ ಸ್ಯಾಂಪಲ್ಸ್ ಸಂಗ್ರಹಿಸಿದೆ. ಮುಂದೆ, ಈ ಮಾದರಿಯನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಜೊತೆಗೆ, ವೈರಲ್ ವಿಡಿಯೋ ತುಣುಕು ಸಹ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಎರಡು ಧ್ವನಿಯಲ್ಲೂ ಹೊಂದಾಣಿಕೆ ಇದೆಯಾ ಎಂದು ಪರಿಶೀಲನೆ ಮಾಡಲಾಗುತ್ತದೆ.

ಇಂದು ಮಧ್ಯಾಹ್ನ ವೇಳೆ ಮೆಡಿಕಲ್ ಟೆಸ್ಟ್ ಮುಗಿಸಿ ಬಂದಿರುವ ಹಿನ್ನೆಲೆಯಲ್ಲಿ ಯುವತಿಗೆ ವಿಶ್ರಾಂತಿ ನೀಡಲಾಗಿತ್ತು. ಆಡುಗೋಡಿಯ ಟೆಕ್ನಿಕಲ್ ವಿಂಗ್‌ನಲ್ಲಿ ಸಂತ್ರಸ್ತೆ ವಿಶ್ರಾಂತಿ ಪಡೆದಿದ್ದಳು. ಕೆಲಕಾಲ ವಿಶ್ರಾಂತಿಯ ಬಳಿಕ ಸಂತ್ರಸ್ತೆಯ ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು

Published On - 6:50 pm, Wed, 31 March 21

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್