AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು

ಯುವತಿಗೆ ಮೆಡಿಕಲ್ ಟೆಸ್ಟ್ ಮುಕ್ತಾಯವಾಗುತ್ತಿದ್ದಂತೆ, ಬೌರಿಂಗ್ ಆಸ್ಪತ್ರೆಗೆ ವಕೀಲ ಜಗದೀಶ್ ಆಗಮಿಸಿದ್ದಾರೆ. ಸ್ಥಳದಲ್ಲಿರುವ ಅಧಿಕಾರಿಗಳ ಜೊತೆ ಜಗದೀಶ್‌ ಮಾತುಕತೆ ನಡೆಸಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿಗೆ ಕೌನ್ಸಿಲಿಂಗ್
TV9 Web
| Edited By: |

Updated on:Apr 05, 2022 | 1:02 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿ, ಸಿಡಿಯಲ್ಲಿರುವ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸಿಡಿ ಯುವತಿಗೆ ಮನೋವೈದ್ಯರಿಂದ ಕೌನ್ಸೆಲಿಂಗ್ ಕೂಡ ಮಾಡಲಾಗಿದೆ. ಮನೋ ವೈದ್ಯರು, ಸಮಾಜದಲ್ಲಿನ ಮುಂದಿನ ಆಗುಹೋಗುಗಳ ಬಗ್ಗೆ ತಿಳಿವಳಿಕೆ ನೀಡಿ, ಕಾನೂನು ಹೋರಾಟ, ಪೊಲೀಸರ ವಿಚಾರಣೆ ಬಗ್ಗೆ ಧೈರ್ಯತುಂಬಿದ್ದಾರೆ.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಯುವತಿಗೆ ಒಆರ್​ಎಸ್ ಹಾಗೂ ಚಿತ್ರಾನ್ನ ನೀಡಲಾಗಿದೆ. ಸಿಡಿಯಲ್ಲಿರುವ ಯುವತಿ ಒಆರ್​ಎಸ್ ಕುಡಿದು, ಚಿತ್ರಾನ್ನ ಸೇವಿಸಿದ್ದಾರೆ.

ಯುವತಿಗೆ ಮೆಡಿಕಲ್ ಟೆಸ್ಟ್ ಮುಕ್ತಾಯವಾಗುತ್ತಿದ್ದಂತೆ, ಬೌರಿಂಗ್ ಆಸ್ಪತ್ರೆಗೆ ವಕೀಲ ಜಗದೀಶ್ ಆಗಮಿಸಿದ್ದಾರೆ. ಸ್ಥಳದಲ್ಲಿರುವ ಅಧಿಕಾರಿಗಳ ಜೊತೆ ಜಗದೀಶ್‌ ಮಾತುಕತೆ ನಡೆಸಿದ್ದಾರೆ. ಸಂತ್ರಸ್ತೆ ಇರುವ ಎಮರ್ಜೆನ್ಸಿ ಕಟ್ಟಡದ ಪ್ರವೇಶ ದ್ವಾರದ ಬಳಿ ನಿಂತಿರುವ ವಕೀಲ ಜಗದೀಶ್, ಸ್ಥಳದಲ್ಲಿರುವ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಎಸ್​ಐಟಿ ಸೂಚಿಸಿರುವ ಐದು ಪರೀಕ್ಷೆಗಳು ಮುಕ್ತಾಯ ಸಂತ್ರಸ್ತ ಯುವತಿ ಇನ್ನು ಅರ್ಧಗಂಟೆ ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ. ಅರ್ಧಗಂಟೆ‌ಯ ನಂತರ ಯುವತಿಯನ್ನು ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ. ಎಸ್​ಐಟಿ ಸೂಚಿಸಿರುವ ಐದು ಮುಖ್ಯ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲಿ ಮಾಡಲಾಗಿದೆ. ಉಗುರು, ಚರ್ಮ, ಕೂದಲು, ರಕ್ತದ ಮಾದರಿ ಸಂಗ್ರಹಿಸಿ ಮುಂದಿನ ಹಂತದ ತಯಾರಿ ಮಾಡಿಕೊಳ್ಳಲಾಗಿದೆ. ಈ ಮಾದರಿಗಳನ್ನು ಸೀಲ್ ಮಾಡಿ, ನೇರವಾಗಿ ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗುತ್ತದೆ. ಈ ಮಧ್ಯೆ ಯುವತಿಗೆ ವಿಶ್ರಾಂತಿ ಪಡೆಯಲು ವೈದ್ಯಾಧಿಕಾರಿಗಳು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಯುವತಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

Published On - 3:47 pm, Wed, 31 March 21

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ