AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು

ಯುವತಿಗೆ ಮೆಡಿಕಲ್ ಟೆಸ್ಟ್ ಮುಕ್ತಾಯವಾಗುತ್ತಿದ್ದಂತೆ, ಬೌರಿಂಗ್ ಆಸ್ಪತ್ರೆಗೆ ವಕೀಲ ಜಗದೀಶ್ ಆಗಮಿಸಿದ್ದಾರೆ. ಸ್ಥಳದಲ್ಲಿರುವ ಅಧಿಕಾರಿಗಳ ಜೊತೆ ಜಗದೀಶ್‌ ಮಾತುಕತೆ ನಡೆಸಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿಗೆ ಕೌನ್ಸಿಲಿಂಗ್
TV9 Web
| Edited By: |

Updated on:Apr 05, 2022 | 1:02 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿ, ಸಿಡಿಯಲ್ಲಿರುವ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸಿಡಿ ಯುವತಿಗೆ ಮನೋವೈದ್ಯರಿಂದ ಕೌನ್ಸೆಲಿಂಗ್ ಕೂಡ ಮಾಡಲಾಗಿದೆ. ಮನೋ ವೈದ್ಯರು, ಸಮಾಜದಲ್ಲಿನ ಮುಂದಿನ ಆಗುಹೋಗುಗಳ ಬಗ್ಗೆ ತಿಳಿವಳಿಕೆ ನೀಡಿ, ಕಾನೂನು ಹೋರಾಟ, ಪೊಲೀಸರ ವಿಚಾರಣೆ ಬಗ್ಗೆ ಧೈರ್ಯತುಂಬಿದ್ದಾರೆ.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಯುವತಿಗೆ ಒಆರ್​ಎಸ್ ಹಾಗೂ ಚಿತ್ರಾನ್ನ ನೀಡಲಾಗಿದೆ. ಸಿಡಿಯಲ್ಲಿರುವ ಯುವತಿ ಒಆರ್​ಎಸ್ ಕುಡಿದು, ಚಿತ್ರಾನ್ನ ಸೇವಿಸಿದ್ದಾರೆ.

ಯುವತಿಗೆ ಮೆಡಿಕಲ್ ಟೆಸ್ಟ್ ಮುಕ್ತಾಯವಾಗುತ್ತಿದ್ದಂತೆ, ಬೌರಿಂಗ್ ಆಸ್ಪತ್ರೆಗೆ ವಕೀಲ ಜಗದೀಶ್ ಆಗಮಿಸಿದ್ದಾರೆ. ಸ್ಥಳದಲ್ಲಿರುವ ಅಧಿಕಾರಿಗಳ ಜೊತೆ ಜಗದೀಶ್‌ ಮಾತುಕತೆ ನಡೆಸಿದ್ದಾರೆ. ಸಂತ್ರಸ್ತೆ ಇರುವ ಎಮರ್ಜೆನ್ಸಿ ಕಟ್ಟಡದ ಪ್ರವೇಶ ದ್ವಾರದ ಬಳಿ ನಿಂತಿರುವ ವಕೀಲ ಜಗದೀಶ್, ಸ್ಥಳದಲ್ಲಿರುವ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಎಸ್​ಐಟಿ ಸೂಚಿಸಿರುವ ಐದು ಪರೀಕ್ಷೆಗಳು ಮುಕ್ತಾಯ ಸಂತ್ರಸ್ತ ಯುವತಿ ಇನ್ನು ಅರ್ಧಗಂಟೆ ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ. ಅರ್ಧಗಂಟೆ‌ಯ ನಂತರ ಯುವತಿಯನ್ನು ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ. ಎಸ್​ಐಟಿ ಸೂಚಿಸಿರುವ ಐದು ಮುಖ್ಯ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲಿ ಮಾಡಲಾಗಿದೆ. ಉಗುರು, ಚರ್ಮ, ಕೂದಲು, ರಕ್ತದ ಮಾದರಿ ಸಂಗ್ರಹಿಸಿ ಮುಂದಿನ ಹಂತದ ತಯಾರಿ ಮಾಡಿಕೊಳ್ಳಲಾಗಿದೆ. ಈ ಮಾದರಿಗಳನ್ನು ಸೀಲ್ ಮಾಡಿ, ನೇರವಾಗಿ ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗುತ್ತದೆ. ಈ ಮಧ್ಯೆ ಯುವತಿಗೆ ವಿಶ್ರಾಂತಿ ಪಡೆಯಲು ವೈದ್ಯಾಧಿಕಾರಿಗಳು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಯುವತಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

Published On - 3:47 pm, Wed, 31 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್