AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ.

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್
ಸಂತ್ರಸ್ತ ಯುವತಿ
TV9 Web
| Edited By: |

Updated on:Apr 05, 2022 | 1:09 PM

Share

ಬೆಂಗಳೂರು: ಮುಖ್ಯಮಂತ್ರಿ, ಗೃಹ ಸಚಿವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ಗೆ ಸಿಡಿ ಲೇಡಿ ಮನವಿ ಮಾಡಿರುವ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ಹೊರಗಡೆ ಬಂದು ಹೇಳಿಕೆ ನೀಡಲು ಬೆಂಬಲಿಸಿ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡುತ್ತೇನೆ. ಮುಂದೆ ಬಂದು ನಾನು ಹೇಳಿಕೆ ಕೊಡಲು ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ. ಇಂದು ನಡೆದ ಬೆಳವಣಿಗೆ ನೋಡಿದರೆ ನನಗೆ ಭಯ ಆಗ್ತಿದೆ. ನಮ್ಮ ಅಪ್ಪ ಅಮ್ಮನಿಗೆ ಏನು ಗೊತ್ತೇ ಇಲ್ಲ, ನಮ್ಮ ಅಪ್ಪ ಅಮ್ಮನ ಬಳಿ ಏನೇನೋ ಹೇಳಿಸುತ್ತಿದ್ದಾರೆ. ಪ್ರಭಾವ ಬೀರಿ ಏನೇನೋ ಹೇಳಿಸುತ್ತಿದ್ದಾರೆ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

ನಮ್ಮ ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ ಎಂದು ಹೇಳಿರುವ ಐದನೇ ವಿಡಿಯೋವನ್ನು ಸಿಡಿ ಲೇಡಿ ಬಿಡುಗಡೆಗೊಳಿಸಿದ್ದಾರೆ. ನನಗೆ ಎಲ್ಲೋ ಒಂದು ಕಡೆ ಭಯ ಆಗ್ತಾ ಇದೆ. ಅಪ್ಪ, ಅಮ್ಮನ ಮೇಲೆ ಪ್ರಭಾವ ಬೀರುತ್ತಿದ್ದಾರೆ. ನನ್ನ ಅಪ್ಪ, ಅಮ್ಮನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಹೊರಗೆ ಬಂದು ಹೇಳಿಕೆ ನೀಡಲು ಭಯ ಆಗ್ತಿದೆ. ನ್ಯಾಯ ಸಿಗಬೇಕಾಗಿರುವುದು ನನಗೆ ಎಂದು ಯವತಿ ಮಾತನಾಡಿರುವ ವಿಡಿಯೋ ಹೊರಬಿಟ್ಟಿದ್ದಾರೆ.

ಇದಕ್ಕೂ ಮೊದಲು ಸಿಡಿಯಲ್ಲಿದ್ದ ಯುವತಿಯ ಆಡಿಯೋ ಕೂಡ ಬಿಡುಗಡೆಯಾಗಿದೆ. ಅದರಲ್ಲಿ, ನನಗೆ ಡಿಕೆಶಿ ಹೇಳಿದಂತೆ ಮಾಡು ಎಂದು ಹೇಳಿದ್ದಾರೆ. ನಾನೀಗ ಬೆಂಗಳೂರಿನಲ್ಲಿ ಇರಲ್ಲ ಗೋವಾಗೆ ಹೋಗುತ್ತಿದ್ದೇನೆ. ನಾನು ಆಕಾಶ್​ನೊಂದಿಗೆ ಗೋವಾಗೆ ತೆರಳುತ್ತಿದ್ದೇನೆ ಎಂದು ಸಿಡಿ ಲೇಡಿ ಹೇಳಿದ್ದಾಳೆ. ಕೂಡಲೇ ಸಿಮ್​ ತೆಗೆದುಹಾಕು ಎಂದು ಯುವತಿ ತಮ್ಮ ಹೇಳಿದ್ದಾನೆ. ಏನು ಆಗಲ್ಲ ಹೆದರಬೇಡ ನನ್ನನ್ನು ನಂಬು. ಡಿ.ಕೆ. ಶಿವಕುಮಾರ್ ಕಡೆಯವರು ಬಂದು ನಮಗೆ ಹಣ ನೀಡಿದ್ದಾರೆ. ನನ್ನ ಮೊಬೈಲ್​ ಹಾಗೂ ಸಿಮ್​ ಕಸಿದುಕೊಂಡಿದ್ದಾರೆ. ನನಗೆ ಬೇಸಿಕ್​ ಫೋನ್​ ಕೊಟ್ಟಿದ್ದಾರೆ ಎಂದು ಯುವತಿ ಹೇಳಿದ್ದಾಳೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ ಮಾತಿನ ಇನ್ನೊಂದು ಆಡಿಯೋ ಸ್ಫೋಟ!

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 8:37 pm, Sat, 27 March 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್