AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ.

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್
ಸಂತ್ರಸ್ತ ಯುವತಿ
TV9 Web
| Edited By: |

Updated on:Apr 05, 2022 | 1:09 PM

Share

ಬೆಂಗಳೂರು: ಮುಖ್ಯಮಂತ್ರಿ, ಗೃಹ ಸಚಿವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ಗೆ ಸಿಡಿ ಲೇಡಿ ಮನವಿ ಮಾಡಿರುವ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ಹೊರಗಡೆ ಬಂದು ಹೇಳಿಕೆ ನೀಡಲು ಬೆಂಬಲಿಸಿ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡುತ್ತೇನೆ. ಮುಂದೆ ಬಂದು ನಾನು ಹೇಳಿಕೆ ಕೊಡಲು ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ. ಇಂದು ನಡೆದ ಬೆಳವಣಿಗೆ ನೋಡಿದರೆ ನನಗೆ ಭಯ ಆಗ್ತಿದೆ. ನಮ್ಮ ಅಪ್ಪ ಅಮ್ಮನಿಗೆ ಏನು ಗೊತ್ತೇ ಇಲ್ಲ, ನಮ್ಮ ಅಪ್ಪ ಅಮ್ಮನ ಬಳಿ ಏನೇನೋ ಹೇಳಿಸುತ್ತಿದ್ದಾರೆ. ಪ್ರಭಾವ ಬೀರಿ ಏನೇನೋ ಹೇಳಿಸುತ್ತಿದ್ದಾರೆ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

ನಮ್ಮ ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ ಎಂದು ಹೇಳಿರುವ ಐದನೇ ವಿಡಿಯೋವನ್ನು ಸಿಡಿ ಲೇಡಿ ಬಿಡುಗಡೆಗೊಳಿಸಿದ್ದಾರೆ. ನನಗೆ ಎಲ್ಲೋ ಒಂದು ಕಡೆ ಭಯ ಆಗ್ತಾ ಇದೆ. ಅಪ್ಪ, ಅಮ್ಮನ ಮೇಲೆ ಪ್ರಭಾವ ಬೀರುತ್ತಿದ್ದಾರೆ. ನನ್ನ ಅಪ್ಪ, ಅಮ್ಮನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಹೊರಗೆ ಬಂದು ಹೇಳಿಕೆ ನೀಡಲು ಭಯ ಆಗ್ತಿದೆ. ನ್ಯಾಯ ಸಿಗಬೇಕಾಗಿರುವುದು ನನಗೆ ಎಂದು ಯವತಿ ಮಾತನಾಡಿರುವ ವಿಡಿಯೋ ಹೊರಬಿಟ್ಟಿದ್ದಾರೆ.

ಇದಕ್ಕೂ ಮೊದಲು ಸಿಡಿಯಲ್ಲಿದ್ದ ಯುವತಿಯ ಆಡಿಯೋ ಕೂಡ ಬಿಡುಗಡೆಯಾಗಿದೆ. ಅದರಲ್ಲಿ, ನನಗೆ ಡಿಕೆಶಿ ಹೇಳಿದಂತೆ ಮಾಡು ಎಂದು ಹೇಳಿದ್ದಾರೆ. ನಾನೀಗ ಬೆಂಗಳೂರಿನಲ್ಲಿ ಇರಲ್ಲ ಗೋವಾಗೆ ಹೋಗುತ್ತಿದ್ದೇನೆ. ನಾನು ಆಕಾಶ್​ನೊಂದಿಗೆ ಗೋವಾಗೆ ತೆರಳುತ್ತಿದ್ದೇನೆ ಎಂದು ಸಿಡಿ ಲೇಡಿ ಹೇಳಿದ್ದಾಳೆ. ಕೂಡಲೇ ಸಿಮ್​ ತೆಗೆದುಹಾಕು ಎಂದು ಯುವತಿ ತಮ್ಮ ಹೇಳಿದ್ದಾನೆ. ಏನು ಆಗಲ್ಲ ಹೆದರಬೇಡ ನನ್ನನ್ನು ನಂಬು. ಡಿ.ಕೆ. ಶಿವಕುಮಾರ್ ಕಡೆಯವರು ಬಂದು ನಮಗೆ ಹಣ ನೀಡಿದ್ದಾರೆ. ನನ್ನ ಮೊಬೈಲ್​ ಹಾಗೂ ಸಿಮ್​ ಕಸಿದುಕೊಂಡಿದ್ದಾರೆ. ನನಗೆ ಬೇಸಿಕ್​ ಫೋನ್​ ಕೊಟ್ಟಿದ್ದಾರೆ ಎಂದು ಯುವತಿ ಹೇಳಿದ್ದಾಳೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ ಮಾತಿನ ಇನ್ನೊಂದು ಆಡಿಯೋ ಸ್ಫೋಟ!

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 8:37 pm, Sat, 27 March 21

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ