AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ ಮಾತಿನ ಇನ್ನೊಂದು ಆಡಿಯೋ ಸ್ಫೋಟ!

ನನಗೆ ಡಿಕೆಶಿ ಹೇಳಿದಂತೆ ಮಾಡು ಎಂದು ಹೇಳಿದ್ದಾರೆ. ನಾನೀಗ ಬೆಂಗಳೂರಿನಲ್ಲಿ ಇರಲ್ಲ ಗೋವಾಗೆ ಹೋಗುತ್ತಿದ್ದೇನೆ. ನಾನು ಆಕಾಶ್​ನೊಂದಿಗೆ ಗೋವಾಗೆ ತೆರಳುತ್ತಿದ್ದೇನೆ ಎಂದು ಸಿಡಿ ಲೇಡಿ ಹೇಳಿದ್ದಾಳೆ.

ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ ಮಾತಿನ ಇನ್ನೊಂದು ಆಡಿಯೋ ಸ್ಫೋಟ!
ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತೆ
TV9 Web
| Edited By: |

Updated on:Apr 05, 2022 | 1:10 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಾರ್ಚ್ 27) ಸ್ಫೋಟಕ ಮಾಹಿತಿಗಳು ಒಂದರ ಹಿಂದೆ ಮತ್ತೊಂದರಂತೆ ಬರುತ್ತಿದೆ. ಇದೀಗ ಸಿಡಿ ಲೇಡಿಯ ಮತ್ತೊಂದು ಆಡಿಯೋ ವೈರಲ್ ಆಗಿದೆ. ಸಿಡಿ ಲೇಡಿ ಮಾತನಾಡಿರುವ ಎರಡನೇ ಆಡಿಯೋ ಇದಾಗಿದೆ. ಸಿಡಿ ಲೇಡಿಯ ಮತ್ತೊಂದು ಆಡಿಯೋ ಬಿಡುಗಡೆ ಆಗಿದೆ. ತಮ್ಮನೊಂದಿಗೆ ಮಾತನಾಡಿರುವ ಯುವತಿ ಆಡಿಯೋ ವೈರಲ್ ಆಗುತ್ತಿದೆ. 1 ನಿಮಿಷ 51 ಸೆಂಕೆಂಡ್ ಇರುವ ಆಡಿಯೋ ವೈರಲ್ ಆಗುತ್ತಿದೆ.

ನನಗೆ ಡಿಕೆಶಿ ಹೇಳಿದಂತೆ ಮಾಡು ಎಂದು ಹೇಳಿದ್ದಾರೆ. ನಾನೀಗ ಬೆಂಗಳೂರಿನಲ್ಲಿ ಇರಲ್ಲ ಗೋವಾಗೆ ಹೋಗುತ್ತಿದ್ದೇನೆ. ನಾನು ಆಕಾಶ್​ನೊಂದಿಗೆ ಗೋವಾಗೆ ತೆರಳುತ್ತಿದ್ದೇನೆ ಎಂದು ಸಿಡಿ ಲೇಡಿ ಹೇಳಿದ್ದಾಳೆ. ಕೂಡಲೇ ಸಿಮ್​ ತೆಗೆದುಹಾಕು ಎಂದು ಯುವತಿ ತಮ್ಮ ಹೇಳಿದ್ದಾನೆ. ಏನು ಆಗಲ್ಲ ಹೆದರಬೇಡ ನನ್ನನ್ನು ನಂಬು. ಡಿ.ಕೆ. ಶಿವಕುಮಾರ್ ಕಡೆಯವರು ಬಂದು ನಮಗೆ ಹಣ ನೀಡಿದ್ದಾರೆ. ನನ್ನ ಮೊಬೈಲ್​ ಹಾಗೂ ಸಿಮ್​ ಕಸಿದುಕೊಂಡಿದ್ದಾರೆ. ನನಗೆ ಬೇಸಿಕ್​ ಫೋನ್​ ಕೊಟ್ಟಿದ್ದಾರೆ ಎಂದು ಯುವತಿ ಹೇಳಿದ್ದಾಳೆ.

ನಾನು ಅವರು ಹೇಳಿದಂತೆ ಮಾಡಬೇಕು. ಅವರು ಕೈಬಿಡಲ್ಲ, ಕೈಬಿಡುವ ಹಾಗಿದ್ರೆ ಹಣ ಏಕೆ ಕೊಡ್ತಿದ್ರು ಎಂದು ಯುವತಿ ಪ್ರಶ್ನಿಸಿದ್ದಾಳೆ. ನನ್ನ ಬಳಿ ಫೋನ್​ ಇಲ್ಲ, ಆಕಾಶ್​ ಬಳಿ ಮೊಬೈಲ್​ ಇದೆ. ಆದರೆ ಆಕಾಶ್​ ಮೊಬೈಲ್​ ಟ್ರ್ಯಾಕ್​ ಮಾಡಲು ಆಗಲ್ಲ ಎಂದು ಹೇಳಿದ್ದಾಳೆ. ಇದಾದ ಬಳಿಕ ಸಿಡಿಯಲ್ಲಿದ್ದ ಯುವತಿ ಮತ್ತೊಂದು ವಿಡಿಯೋ ಕೂಡ ಹೊರಬಂದಿದೆ.

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ. ಇಂದು ನಡೆದ ಬೆಳವಣಿಗೆ ನೋಡಿದರೆ ನನಗೆ ಭಯ ಆಗ್ತಿದೆ. ನಮ್ಮ ಅಪ್ಪ ಅಮ್ಮನಿಗೆ ಏನು ಗೊತ್ತೇ ಇಲ್ಲ, ನಮ್ಮ ಅಪ್ಪ ಅಮ್ಮನ ಬಳಿ ಏನೇನೋ ಹೇಳಿಸುತ್ತಿದ್ದಾರೆ. ಪ್ರಭಾವ ಬೀರಿ ಏನೇನೋ ಹೇಳಿಸುತ್ತಿದ್ದಾರೆ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

ಇದನ್ನೂ ಓದಿ:

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿ ಮತ್ತೊಂದು ವಿಡಿಯೋ ಬಾಂಬ್

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 8:26 pm, Sat, 27 March 21

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್