AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ ಮೇಲ್ ಮೂಲಕ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ಸಿಡಿ ಲೇಡಿ.. ವಿವರ ಇಲ್ಲಿದೆ

ಎಸ್​ಐಟಿಯಿಂದ ಸಿಡಿ ಯುವತಿಯ ಪೋಷಕರ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಯುವತಿ ಇ ಮೇಲ್ ಮೂಲಕ ಪತ್ರ ಕಳಿಸಿದ್ದಾರೆ.

ಇ ಮೇಲ್ ಮೂಲಕ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ಸಿಡಿ ಲೇಡಿ.. ವಿವರ ಇಲ್ಲಿದೆ
ಸಿಡಿ ಲೇಡಿ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 29, 2021 | 8:05 AM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ. ಎಸ್​ಐಟಿಯಿಂದ ಸಿಡಿ ಯುವತಿಯ ಪೋಷಕರ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಯುವತಿ ಇ ಮೇಲ್ ಮೂಲಕ ಪತ್ರ ಕಳಿಸಿದ್ದಾರೆ.

ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆಯಾಗಬೇಕು. ನನ್ನ ತಂದೆ ತಾಯಿಯಿಂದ ಬಲವಂತವಾಗಿ ಹೇಳಿಕೆ ಕೊಡಿಸಿಕೊಳ್ಳಲಾಗಿದೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಕೇಸ್​ನಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಅಂತಾ ಪತ್ರದಲ್ಲಿ ಸಿಡಿ ಲೇಡಿ ಮನವಿ ಮಾಡಿಕೊಂಡಿದ್ದಾರೆ. ಇ ಮೇಲ್ ಮೂಲಕ ನಿನ್ನೆಯೇ ಪತ್ರವನ್ನ ರವಾನೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದಾರೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಯುವತಿ ಬರೆದಿರುವ ಪತ್ರದಲ್ಲಿ, ರಮೇಶ್ ಜಾರಕಿಹೊಳಿ ಜತೆ ಸೇರಿಕೊಂಡು SIT ಅಧಿಕಾರಿಗಳು ನನಗೂ, ನಮ್ಮ ಕುಟುಂಬಕ್ಕೂ ಯಾವುದೇ ರಕ್ಷಣೆ ನೀಡಿಲ್ಲ. SIT ಮುಖಾಂತರ ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದಾರೆ. ರಮೇಶ್ ತಮ್ಮ ಪ್ರಭಾವ ಬಳಸಿ ಸಾಕ್ಷ್ಯನಾಶ ಮಾಡುತ್ತಿದ್ದಾರೆ. ಅವರು ನನಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ನಮ್ಮನ್ನು ಕೊಲ್ಲಬಹುದು. SIT ರಮೇಶ್ ಜಾರಕಿಹೊಳಿ ಹೇಳಿದಂತೆ ಕಾರ್ಯನಿರ್ವಹಿಸ್ತಿದೆ. ಕರ್ನಾಟಕ ಸರ್ಕಾರವೂ ಸಹ ರಮೇಶ್‌ರನ್ನು ರಕ್ಷಣೆ ಮಾಡ್ತಿದೆ. ಎಸ್​ಐಟಿ ಹಾಗೂ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಸಿಡಿ ಲೇಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಡಿವೈಎಸ್​ಪಿ ಕಟ್ಟೀಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದಾರೆ ನಮ್ಮ ಪೋಷಕರಿಂದ ಒತ್ತಡ ಹಾಕಿ ನನ್ನನ್ನ ಕಿಡ್ನ್ಯಾಪ್ ಮಾಡಿಸಿರುವುದಾಗಿ ಹೇಳಿಕೆ ನೀಡಿಸಿದ್ದಾರೆ. ಡಿವೈಎಸ್​ಪಿ ಕಟ್ಟೀಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕಟ್ಟೀಮನಿ ರಮೇಶ್ ಜಾರಕಿಹೊಳಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ನ್ಯಾಯಾಲಯವು ನನ್ನ ಮನವಿಯನ್ನ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಕ್ಕೆ ನಿರ್ದೇಶನ ನೀಡಬೇಕು.ತನಿಖೆ ನಡೆಸಿ ನನಗೆ ನ್ಯಾಯ ಒದಗಿಸಬೇಕು. ನನಗೆ ಜೀವಭಯ ಹಿನ್ನೆಲೆ ರಕ್ಷಣೆ ನೀಡುವಂತೆ ಸಿಡಿ ಲೇಡಿ ಮನವಿ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್

Published On - 7:46 am, Mon, 29 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ