Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಶುದ್ಧ ರಾಜಕೀಯ ಪಿತೂರಿ; ಸದನದಲ್ಲಿ ಸಚಿವ ಸುಧಾಕರ

ನೇರವಾಗಿ ಯುದ್ಧಕ್ಕೆ ಬಂದರೆ ಯುದ್ಧ ಮಾಡಬಹುದು. ಆದರೆ ಹಿಂದಿನಿಂದ ಬಂದು ಯುದ್ಧ ಮಾಡಿದರೆ ಏನು ಮಾಡಬೇಕು. ಕಾನೂನಿನಿಂದ ರಕ್ಷಣೆ ಪಡೆಯಲು ಇರುವ ಅವಕಾಶವನ್ನು ನಾವು ಉಪಯೋಗಿಸಿಕೊಂಡಿದ್ದೇವೆ. ಅದರಲ್ಲಿ ಯಾವ ತಪ್ಪಿದೆ?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಶುದ್ಧ ರಾಜಕೀಯ ಪಿತೂರಿ; ಸದನದಲ್ಲಿ ಸಚಿವ ಸುಧಾಕರ
ಡಾ. ಕೆ.ಸುಧಾಕರ್​
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 22, 2021 | 7:08 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಶುದ್ಧ ರಾಜಕೀಯ ಪಿತೂರಿಯಾಗಿದ್ದು, ಆಧುನಿಕ ತಂತ್ರಜ್ಞಾನದಿಂದ ಏನನ್ನು ಬೇಕಾದರೂ ಮಾಡಬಹುದು. ಡೀಪ್ ವಿಡಿಯೋ ಮಾರ್ಫಿಂಗ್ ಎಂಬ ತಂತ್ರವಿದೆ. ಒಂದು ಫೋಟೊ ಇಟ್ಟುಕೊಂಡು ಏನು ಬೇಕಾದರೂ ಮಾಡಬಹುದು. ವಿಡಿಯೋ ಸುಳ್ಳು ಎಂದು ಖಚಿತವಾದರೆ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಬೇಕಾದರೂ ಪ್ರಸಾರ ಮಾಡಿಕೊಳ್ಳಲಿ. ಆದರೆ ತನಿಖೆ ಆಗದೇ ನಕಲಿ ವಿಡಿಯೋವನ್ನು ಪ್ರಸಾರ ಮಾಡುವುದು ತಪ್ಪಾಗುತ್ತದೆ. ಎಲ್ಲರಿಗೂ ಅವರವರ ಗೌರವ ಅತ್ಯಂತ ಮುಖ್ಯವಾಗುತ್ತದೆ ಎಂದು ಡಾ. ಕೆ.ಸುಧಾಕರ್ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಹೋದ ಕ್ರಮವನ್ನು ಸಮರ್ಥಿಸಿಕೊಂಡರು.

ಸಿಡಿ ಬಿಡುಗಡೆಯಂತಹ ಪ್ರಕರಣಗಳಲ್ಲಿ ಸಿಡಿಯಲ್ಲಿರುವ ಅಂಶವನ್ನು ಪ್ರಸಾರ ಮಾಡುವ ಮಾಧ್ಯಮಗಳದ್ದು ತಪ್ಪು ಎಂದು ಹೇಳಲಾಗುವುದಿಲ್ಲ. ಆಯಾ ಸಂದರ್ಭಕ್ಕೆ ಸಿಗುವ ವಿಷಯ ಇಟ್ಟುಕೊಂಡು ಮಾಧ್ಯಮಗಳು ಸುದ್ದಿ ಪ್ರಸಾರ ಮಾಡುತ್ತವೆ. ಸುಪ್ರೀಂಕೋರ್ಟ್ ನ್ಯಾಯಾಧೀಶ ಸ್ವತಂತ್ರ ಕುಮಾರ್ ಅವರು ಸಹ ಈ ಕ್ರಮವನ್ನು ಅನುಸರಿಸಿದ್ದರು. ಕೋರ್ಟ್​ಗೆ ಹೋಗುವುದೇ ತಪ್ಪು ಎಂದಾದರೆ ಈಗ ಅಸ್ತಿತ್ವದಲ್ಲಿರುವ ವ್ಯವಸ್ಥೆಯೇ ಸರಿಯಿಲ್ಲ ಎಂದಾಗುತ್ತದೆ ಎಂದು ಸುಧಾಕರ್ ಹೇಳಿದರು.

ಒಟ್ಟು 17 ಜನರ ವಿರುದ್ಧ ಪಿತೂರಿ ನಡೆಸಲು ವೇದಿಕೆ ಸಿದ್ಧವಾಗುತ್ತಿದೆ ಎಂದು ನಮ್ಮ ಹಿರಿಯ ನಾಯಕರು ಬಹಳ ಮೊದಲೇ ಸೂಚನೆ ನೀಡಿದ್ದರು. ನೇರವಾಗಿ ಯುದ್ಧಕ್ಕೆ ಬಂದರೆ ಯುದ್ಧ ಮಾಡಬಹುದು. ಆದರೆ ಹಿಂದಿನಿಂದ ಬಂದು ಯುದ್ಧ ಮಾಡಿದರೆ ಏನು ಮಾಡಬೇಕು. ಕಾನೂನಿನಿಂದ ರಕ್ಷಣೆ ಪಡೆಯಲು ಇರುವ ಅವಕಾಶವನ್ನು ನಾವು ಉಪಯೋಗಿಸಿಕೊಂಡಿದ್ದೇವೆ. ಅದರಲ್ಲಿ ಯಾವ ತಪ್ಪಿದೆ? ತಪ್ಪಿದ್ದರೆ ನಮ್ಮ ವ್ಯವಸ್ಥೆಯಲ್ಲಿಯೇ ತಪ್ಪಿದೆ ಎಂದು ಹೇಳಬಹುದು. ಕೊಲೆ ಪ್ರಕರಣಗಳನ್ನು ಹೊತ್ತಿರುವವರು ಸದನದಲ್ಲಿ ಮೌಲ್ಯಗಳ ಬಗ್ಗೆ ಹೇಳುತ್ತಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಆರೋಪ 6 ಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ಇವರಿಂದ ಆ ಯುವತಿಗೆ ರಕ್ಷಣೆ ಕೊಡುವ ಕೆಲಸ ಆಗುತ್ತಿಲ್ಲ. ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.  ಬಸನಗೌಡ ಪಾಟೀಲ್ ಯತ್ನಾಳ್ CD ಮಾಡುವ ಗ್ಯಾಂಗ್ ಇದೆ ಎಂದು ಹೇಳಿದ್ದಾರೆ. ಸಿಎಂಗೆ CD ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಈ ರೀತಿಯಾಗಿ ಬಿಜೆಪಿ ಶಾಸಕ ಯತ್ನಾಳ್ ಹೇಳುತ್ತಿದ್ದಾರೆ. ಈ ಕುರಿತು ಸಹ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ  ತನಿಖೆಯಾಗಲಿ. ಇಲ್ಲದಿದ್ದರೆ ಇಂತಹ ಪ್ರಕರಣಗಳಲ್ಲಿ ನ್ಯಾಯ ಸಿಗುವುದಿಲ್ಲ. ಈ ಪ್ರಕರಣದಲ್ಲಿ ಒಂದು ಒಳ್ಳೆಯ ಸಂದೇಶ ಹೋಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.ಕೋರ್ಟ್​ಗೆ ಹೋದ 6 ಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ಎಲ್ಲಾ 6 ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಇದನ್ನೂ ಓದಿ: 1 ಸಿಡಿ ಅಲ್ಲ, ಎಲ್ಲಾ 19 ಸಿಡಿಗಳ ಬಗ್ಗೆಯೂ ತನಿಖೆ ಮಾಡುತ್ತೇವೆ; ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್