AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ತನಿಖೆ ಮುಂದುವರಿಕೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​

ಎಸ್ಐಟಿ ಕಾನೂನುಬದ್ಧತೆಯನ್ನೇ ಅರ್ಜಿದಾರರ ಪರ ವಕೀಲರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆ ಎ.ಎಸ್.ಒಕಾ ಅವರು ನೀವು ಆರೋಪಿಗಳ ಪರವಾಗಿ ವಾದಿಸುತ್ತಿದ್ದೀರಾ? ಮೂರು ದೂರುಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ. ಒಳ್ಳೆಯ ತನಿಖೆ ನಡೆಯುವುದು ನಿಮಗೆ ಬೇಕಿಲ್ಲವೇ? ಎಂದು ಅರ್ಜಿದಾರ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿತು.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ತನಿಖೆ ಮುಂದುವರಿಕೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​
ರಮೇಶ್ ಜಾರಕಿಹೊಳಿ
Follow us
ಸಾಧು ಶ್ರೀನಾಥ್​
|

Updated on:Apr 17, 2021 | 2:20 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿ ಹೈಕೋರ್ಟ್ ಗೆ ತನಿಖಾ ಪ್ರಗತಿ ವರದಿ ಸಲ್ಲಿಸಿದೆ. ಎಸ್ಐಟಿ ಯ ಕಾನೂನು ವ್ಯಾಪ್ತಿ ಪ್ರಶ್ನಿಸಿ ಗೀತಾ ಮಿಶ್ರಾ, ಸಿಬಿಐ ತನಿಖೆ ಕೋರಿ ವಕೀಲ ಉಮೇಶ್ ಪಿಐಎಲ್ ಸಲ್ಲಿಸಿದ್ದರು. ಹೈಕೋರ್ಟ್ ಗೆ ಸಲ್ಲಿಕೆಯಾದ ತನಿಖಾ ಪ್ರಗತಿ ವರದಿಯನ್ನು ಪರಿಶೀಲಿಸಿದ ವಿಭಾಗೀಯ ಪೀಠ ಅದನ್ನು ಮತ್ತೆ ಸೀಲ್‌ ಮಾಡಿಸಲು ಸೂಚಿಸಿದೆ.

ರಮೇಶ್ ಜಾರಕಿಹೊಳಿ ಪತ್ರ ಆಧರಿಸಿ ಎಸ್ಐಟಿ ರಚಿಸಲಾಗಿದೆ. ಕೇವಲ ವರದಿ‌ ನೀಡಲು ಎಸ್ಐಟಿ ರಚಿಸಲಾಗಿದೆ. ಹೀಗಾಗಿ ಎಸ್ಐಟಿ ಕಾನೂನುಬದ್ಧತೆಯನ್ನೇ ಅರ್ಜಿದಾರರ ಪರ ವಕೀಲರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆ ಎ.ಎಸ್.ಒಕಾ ಅವರು ನೀವು ಆರೋಪಿಗಳ ಪರವಾಗಿ ವಾದಿಸುತ್ತಿದ್ದೀರಾ? ಮೂರು ದೂರುಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ. ಒಳ್ಳೆಯ ತನಿಖೆ ನಡೆಯುವುದು ನಿಮಗೆ ಬೇಕಿಲ್ಲವೇ? ಎಂದು ಅರ್ಜಿದಾರ ಗೀತಾ ಮಿಶ್ರಾ ಪರ ವಕೀಲರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಜಿ.ಆರ್.ಮೋಹನ್, ಕೋರ್ಟ್ ನಿಗಾದಲ್ಲಿ ತನಿಖೆ ನಡೆದರೆ ಎಸ್ಐಟಿ ಬಗ್ಗೆ ಆಕ್ಷೇಪವಿಲ್ಲ. ಆದರೆ ಆರೋಪಿ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಕರೆದಿಲ್ಲವೆಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ತನಿಖೆ ಪೂರ್ಣಗೊಳ್ಳುವ ಮೊದಲೇ ನೀವು ನಿರ್ಣಯಿಸುವುದು ಸರಿಯಲ್ಲ. ಎಸ್ಐಟಿ ತನಿಖೆ ಮುಂದುವರಿಸಲಿ ಎಂದ ನ್ಯಾಯ ಪೀಠವು ಮೇ 31 ಕ್ಕೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಿದೆ.

ಅಲ್ಲದೇ ಎಸ್ಐಟಿ ವರದಿಯನ್ನು ಮತ್ತೆ ಸೀಲ್ ಮಾಡಿಡುವಂತೆಯೂ ಸೂಚನೆ ನೀಡಿದೆ. ಈ ವೇಳೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಅರ್ಜಿದಾರರ ಮನವಿಗೆ ಪ್ರತಿಕ್ರಿಯಿಸಿದ ಹೈಕೋರ್ಟ್ ಕಾನೂನಿನ ಯಾವ ಅಂಶಗಳನ್ನು ಉಲ್ಲಂಘಿಸಲಾಗಿದೆ. ಖಾಸಗಿ ಚಾನಲ್ ಗಳಿಗೆ ಈ ಬಗ್ಗೆ ನಿರ್ದೇಶಿಸಲು ಸಾಧ್ಯವೇ? ಎಂಬ ಬಗ್ಗೆ ಕಾನೂನಿನ ಉಲ್ಲೇಖಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.

(Ramesh jarkiholi cd case karnataka high court asks sit team to continue the investigation)

Published On - 1:50 pm, Sat, 17 April 21

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!