AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಸಿಡಿ ಬಿಡುಗಡೆ: ಜೀವ ಬೆದರಿಕೆ ಇದೆ; ರಮೇಶ್ ಜಾರಕಿಹೊಳಿ ವಿರುದ್ಧ ಮಧ್ಯಾಹ್ನ ದೂರು ಕೊಡುವೆ ಎಂದ ಯುವತಿ

ಇಂದು ಯುವತಿ ಇನ್ನೊಂದು ವಿಡಿಯೋ ಬಿಡುಗಡೆ ಮಾಡಿದ್ದು, ಇತ್ತೀಚಿಗೆ ಈ ಪ್ರಕರಣದಲ್ಲಿ ಬಿಡುಗಡೆಯಾದ ವಿಡಿಯೋದ ಸಂಖ್ಯೆ ಮೂರಕ್ಕೇರಿದೆ. (Ramesh Jarkiholi CD case lady released 3rd video says will register complaint against former minister Ramesh Jarkiholi)

ಮೂರನೇ ಸಿಡಿ ಬಿಡುಗಡೆ: ಜೀವ ಬೆದರಿಕೆ ಇದೆ; ರಮೇಶ್ ಜಾರಕಿಹೊಳಿ ವಿರುದ್ಧ ಮಧ್ಯಾಹ್ನ ದೂರು ಕೊಡುವೆ ಎಂದ ಯುವತಿ
ಸಂತ್ರಸ್ತ ಯುವತಿ
guruganesh bhat
|

Updated on: Mar 26, 2021 | 11:48 AM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ. ವಕೀಲ ಜಗದೀಶ್ ಮೂಲಕ ದೂರು ನೀಡುತ್ತೇನೆ. 24 ದಿನದಿಂದ ಜೀವಭಯದಲ್ಲಿದ್ದೆ. ಜೀವ ಬೆದರಿಕೆಯಿಂದ ಕಂಗಾಲಾಗಿದ್ದೆ. ಎಲ್ಲ ಪಕ್ಷದ ನಾಯಕರು, ಎಲ್ಲ ಸಂಘಟನೆಗಳು, ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ, ಈಗ ನನಗೆ ಧೈರ್ಯ ಬಂದಿದೆ. ನನಗೆ ಧೈರ್ಯ ಬಂದಿರುವುದರಿಂದ ದೂರು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡ್ತಿದ್ದೇನೆ’ ಎಂದು ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ.

ನಿನ್ನೆಯಷ್ಟೇ 2ನೇ ವಿಡಿಯೋ ಬಿಡುಗಡೆ ಮಾಡಿದ್ದಳು!

ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಎಸ್​ಐಟಿ ಪೊಲೀಸರಿಗೆ ಪ್ರಕರಣದ ಪಾತ್ರಧಾರಿಗಳು ಚಳ್ಳೆಹಣ್ಣು ತಿನ್ನಿಸುತ್ತಲೇ ಇದ್ದಾರೆ. ಅದರಲ್ಲೂ CD ಲೇಡಿಯಂತೂ ತನಗೆ ನಾಲ್ಕಾರು ನೋಟಿಸ್​ಗಳು ಬಂದಿದ್ದರೂ ಯಾವುದಕ್ಕೂ ಕ್ಯಾರೆ ಅನ್ನುತ್ತಿಲ್ಲ. ಪೊಲೀಸರ ಕರೆಗೆ ರೆಸ್ಪಾನ್ಸ್​ ನೀಡುತ್ತಿಲ್ಲ. ಈ ಮಧ್ಯೆ, ನಿನ್ನೆ ಎರಡನೇ ವಿಡಿಯೋವನ್ನು ಮಾಧ್ಯಮಗಳ ಮೂಲಕ ಒಂದು ನಿಮಿಷ 13 ಸೆಕೆಂಡ್​ಗಳ ಮತ್ತೊಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿದ್ದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಿಡಿ ಲೇಡಿಯಿಂದ ನಿನ್ನೆ 2ನೇ ವಿಡಿಯೋ ಬಿಡುಗಡೆಯಾಗಿತ್ತು. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್‌ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಸಿಡಿ ಲೇಡಿ ನಮ್ಮ ತಂದೆ, ತಾಯಿಗೆ ಸುರಕ್ಷತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.

ಇಂದು ಯುವತಿ ಇನ್ನೊಂದು ವಿಡಿಯೋ ಬಿಡುಗಡೆ ಮಾಡಿದ್ದು, ಇತ್ತೀಚಿಗೆ ಈ ಪ್ರಕರಣದಲ್ಲಿ ಬಿಡುಗಡೆಯಾದ ವಿಡಿಯೋದ ಸಂಖ್ಯೆ ಮೂರಕ್ಕೇರಿದೆ.

ಇದನ್ನೂ ಓದಿ:  ಈಗ ನನ್ನ ಜೇಬಿನಲ್ಲಿಯೇ ಎವಿಡೆನ್ಸ್ ಇದೆ, ಬಿಡುಗಡೆ ಮಾಡಿದರೆ ನೀವೇ ಶಾಕ್ ಆಗ್ತೀರಿ: ರಮೇಶ್ ಜಾರಕಿಹೊಳಿ

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್