AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಕೋರ್ಟ್‌ ಹೇಳಿಕೆ ಹಿನ್ನೆಲೆ: ಕಂಗೆಟ್ಟ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಕೊಲ್ಹಾಪುರದ ಮಹಾಲಕ್ಷ್ಮಿ ದೇಗುಲದತ್ತ ಪಯಣ

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದಾರೆ.

ಯುವತಿ ಕೋರ್ಟ್‌ ಹೇಳಿಕೆ ಹಿನ್ನೆಲೆ: ಕಂಗೆಟ್ಟ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಕೊಲ್ಹಾಪುರದ ಮಹಾಲಕ್ಷ್ಮಿ ದೇಗುಲದತ್ತ ಪಯಣ
ರಮೇಶ್​ ಜಾರಕಿಹೊಳಿ
TV9 Web
| Updated By: ganapathi bhat|

Updated on:Apr 05, 2022 | 1:04 PM

Share

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ರಮೇಶ್ ಜಾರಕಿಹೊಳಿ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯದತ್ತ ಪ್ರಯಾಣ ಬೆಳೆಸಿದ್ದಾರೆ. ಪೂಜೆ ಮಾಡಿಸಲು ಸಮಯ ಕೇಳಿದ್ದ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, CD ಕೇಸ್‌ನಿಂದ ಕಂಗೆಟ್ಟಿದ್ದಾರೆ. ಹೀಗಾಗಿ ದೇವರ ಮೊರೆ ಹೋಗಿದ್ದಾರೆ.

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಕಂಗೆಟ್ಟಿದ್ದ, ರಮೇಶ್ ಜಾರಕಿಹೊಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಮನೆಯಿಂದ ತೆರಳಿದ್ದರು. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಗೋಕಾಕ್‌ನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದರು. ಗೋಕಾಕ್ ಫಾಲ್ಸ್ ರಸ್ತೆಯಲ್ಲಿ ತೆರಳಿದ್ದರು. ನಿನ್ನೆ ರಾತ್ರಿ ಗೋಕಾಕ್‌ಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ ಬೆಳಗ್ಗೆಯಿಂದ ಮನೆಯಿಂದ ಹೊರಬಂದಿರಲಿಲ್ಲ. ಯುವತಿ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಮನೆಯಿಂದ ಹೊರಕ್ಕೆ ಹೊರಟಿದ್ದರು. ಮಾಧ್ಯಮಗಳ ಕಣ್ತಪ್ಪಿಸಿ ಮನೆಯಿಂದ ತೆರಳಿದ್ದರು.

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದರು.

ವಸಂತನಗರದ ಕೋರ್ಟ್​ಗೆ ತೆರಳಿ ಹೇಳಿಕೆ ಪಡೆಯುತ್ತಿರುವ ನ್ಯಾಯಾಧೀಶರು ಬೆಂಗಳೂರಿನ ವಸಂತನಗರದಲ್ಲಿರುವ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ಹಾಲ್​​ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲು ಮಹಿಳಾ ಟೈಪಿಸ್ಟ್ ಜತೆ ಎಸಿಎಂಎಂ ನ್ಯಾಯಾಧೀಶರು ತೆರಳಿದ್ದಾರೆ. ಯುವತಿ ಮೂರು ಗಂಟೆಯ ಹೊತ್ತಿಗೆ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ಹಾಲ್​ನಲ್ಲಿ ಉಪಸ್ಥಿತರಿದ್ದು,  ಮಧ್ಯಾಹ್ನ 3 ಗಂಟೆಗೆ ಕಾರಿನಲ್ಲಿ ಸ್ಥಳಕ್ಕೆ ನ್ಯಾಯಾಧೀಶರು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಕೊವಿಡ್ ಹಿನ್ನೆಲೆಯಲ್ಲಿ ಗುರುನಾನಕ್ ಭವನದಲ್ಲಿ ವಿಶೇಷ ನ್ಯಾಯಾಲಯ ‌ನಿರ್ಮಾಣವಾಗಿತ್ತು. ಈ ಸ್ಥಳಕ್ಕೆ ಹೇಳಿಕೆ ಪಡೆಯಲು ನ್ಯಾಯಾಧೀಶರು ತೆರಳಿದ್ದಾರೆ. ನ್ಯಾಯಾಧೀಶರ ಜತೆ ಮಹಿಳಾ ಟೈಪಿಸ್ಟ್, ಯುವತಿ ಮಾತ್ರ ಉಪಸ್ಥಿತರಿದ್ದಾರೆ. CRPC ಸೆಕ್ಷನ್ 164ರಡಿ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಯುವತಿಯಿರುವ ಸ್ಥಳಕ್ಕೇ ತೆರಳಿ ಹೇಳಿಕೆ ಪಡೆಯಲು 24ನೇ ಎಸಿಎಂಎಂ ನ್ಯಾಯಾಧೀಶರು ನಿಶ್ಚಯಿಸಿದ್ದಾರೆ.  ಎಸಿಎಂಎಂ ನ್ಯಾಯಾಲಯಕ್ಕೆ ಯುವತಿ ಆಗಮಿಸುತ್ತಾಳೆ ಎಂಬ ನಿರೀಕ್ಷೆ ಮೀರಿ ಕ್ಷಣ ಕ್ಷಣಕ್ಕೂ ಈ ಪ್ರಕರಣ ತಿರುಚು ಪಡೆಯುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್

ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ ನಿಂತ ಸಚಿವ ಮುರುಗೇಶ್‌ ನಿರಾಣಿ

Published On - 4:24 pm, Tue, 30 March 21

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ