AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಕೋರ್ಟ್‌ ಹೇಳಿಕೆ ಹಿನ್ನೆಲೆ: ಕಂಗೆಟ್ಟ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಕೊಲ್ಹಾಪುರದ ಮಹಾಲಕ್ಷ್ಮಿ ದೇಗುಲದತ್ತ ಪಯಣ

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದಾರೆ.

ಯುವತಿ ಕೋರ್ಟ್‌ ಹೇಳಿಕೆ ಹಿನ್ನೆಲೆ: ಕಂಗೆಟ್ಟ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಕೊಲ್ಹಾಪುರದ ಮಹಾಲಕ್ಷ್ಮಿ ದೇಗುಲದತ್ತ ಪಯಣ
ರಮೇಶ್​ ಜಾರಕಿಹೊಳಿ
TV9 Web
| Edited By: |

Updated on:Apr 05, 2022 | 1:04 PM

Share

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ರಮೇಶ್ ಜಾರಕಿಹೊಳಿ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯದತ್ತ ಪ್ರಯಾಣ ಬೆಳೆಸಿದ್ದಾರೆ. ಪೂಜೆ ಮಾಡಿಸಲು ಸಮಯ ಕೇಳಿದ್ದ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, CD ಕೇಸ್‌ನಿಂದ ಕಂಗೆಟ್ಟಿದ್ದಾರೆ. ಹೀಗಾಗಿ ದೇವರ ಮೊರೆ ಹೋಗಿದ್ದಾರೆ.

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಕಂಗೆಟ್ಟಿದ್ದ, ರಮೇಶ್ ಜಾರಕಿಹೊಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಮನೆಯಿಂದ ತೆರಳಿದ್ದರು. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಗೋಕಾಕ್‌ನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದರು. ಗೋಕಾಕ್ ಫಾಲ್ಸ್ ರಸ್ತೆಯಲ್ಲಿ ತೆರಳಿದ್ದರು. ನಿನ್ನೆ ರಾತ್ರಿ ಗೋಕಾಕ್‌ಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ ಬೆಳಗ್ಗೆಯಿಂದ ಮನೆಯಿಂದ ಹೊರಬಂದಿರಲಿಲ್ಲ. ಯುವತಿ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಮನೆಯಿಂದ ಹೊರಕ್ಕೆ ಹೊರಟಿದ್ದರು. ಮಾಧ್ಯಮಗಳ ಕಣ್ತಪ್ಪಿಸಿ ಮನೆಯಿಂದ ತೆರಳಿದ್ದರು.

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದರು.

ವಸಂತನಗರದ ಕೋರ್ಟ್​ಗೆ ತೆರಳಿ ಹೇಳಿಕೆ ಪಡೆಯುತ್ತಿರುವ ನ್ಯಾಯಾಧೀಶರು ಬೆಂಗಳೂರಿನ ವಸಂತನಗರದಲ್ಲಿರುವ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ಹಾಲ್​​ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲು ಮಹಿಳಾ ಟೈಪಿಸ್ಟ್ ಜತೆ ಎಸಿಎಂಎಂ ನ್ಯಾಯಾಧೀಶರು ತೆರಳಿದ್ದಾರೆ. ಯುವತಿ ಮೂರು ಗಂಟೆಯ ಹೊತ್ತಿಗೆ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ಹಾಲ್​ನಲ್ಲಿ ಉಪಸ್ಥಿತರಿದ್ದು,  ಮಧ್ಯಾಹ್ನ 3 ಗಂಟೆಗೆ ಕಾರಿನಲ್ಲಿ ಸ್ಥಳಕ್ಕೆ ನ್ಯಾಯಾಧೀಶರು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಕೊವಿಡ್ ಹಿನ್ನೆಲೆಯಲ್ಲಿ ಗುರುನಾನಕ್ ಭವನದಲ್ಲಿ ವಿಶೇಷ ನ್ಯಾಯಾಲಯ ‌ನಿರ್ಮಾಣವಾಗಿತ್ತು. ಈ ಸ್ಥಳಕ್ಕೆ ಹೇಳಿಕೆ ಪಡೆಯಲು ನ್ಯಾಯಾಧೀಶರು ತೆರಳಿದ್ದಾರೆ. ನ್ಯಾಯಾಧೀಶರ ಜತೆ ಮಹಿಳಾ ಟೈಪಿಸ್ಟ್, ಯುವತಿ ಮಾತ್ರ ಉಪಸ್ಥಿತರಿದ್ದಾರೆ. CRPC ಸೆಕ್ಷನ್ 164ರಡಿ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಯುವತಿಯಿರುವ ಸ್ಥಳಕ್ಕೇ ತೆರಳಿ ಹೇಳಿಕೆ ಪಡೆಯಲು 24ನೇ ಎಸಿಎಂಎಂ ನ್ಯಾಯಾಧೀಶರು ನಿಶ್ಚಯಿಸಿದ್ದಾರೆ.  ಎಸಿಎಂಎಂ ನ್ಯಾಯಾಲಯಕ್ಕೆ ಯುವತಿ ಆಗಮಿಸುತ್ತಾಳೆ ಎಂಬ ನಿರೀಕ್ಷೆ ಮೀರಿ ಕ್ಷಣ ಕ್ಷಣಕ್ಕೂ ಈ ಪ್ರಕರಣ ತಿರುಚು ಪಡೆಯುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್

ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ ನಿಂತ ಸಚಿವ ಮುರುಗೇಶ್‌ ನಿರಾಣಿ

Published On - 4:24 pm, Tue, 30 March 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ