AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿ ಪೋಷಕರ ಹೇಳಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ-ಕಚೇರಿಗೆ ಹೆಚ್ಚಿನ ಭದ್ರತೆ

ಸದಾಶಿವನಗರ ಠಾಣೆ ಪೊಲೀಸರಿಂದ ಡಿ.ಕೆ. ಶಿವಕುಮಾರ್ ಕಚೇರಿಗೆ ಹೆಚ್ಚುವರಿ ಬಂದೋಬಸ್ತ್ ಒದಗಿಸಲಾಗಿದೆ. ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ಗಳ ನಿಯೋಜನೆ ಮಾಡಲಾಗಿದೆ. ಬೆಂಗಳೂರಿನ ಸದಾಶಿವನಗರದಲ್ಲಿ ರಮೇಶ್ ಜಾರಕಿಹೊಳಿ ನಿವಾಸದ ಹಿಂದಿನ ರಸ್ತೆಯಲ್ಲಿ ಡಿ.ಕೆ. ಶಿವಕುಮಾರ್ ನಿವಾಸವಿದೆ.

ಸಿಡಿ ಯುವತಿ ಪೋಷಕರ ಹೇಳಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ-ಕಚೇರಿಗೆ ಹೆಚ್ಚಿನ ಭದ್ರತೆ
ಡಿ.ಕೆ. ಶಿವಕುಮಾರ್
Follow us
TV9 Web
| Updated By: ganapathi bhat

Updated on:Apr 05, 2022 | 1:10 PM

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಶ್ಲೀಲ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೆಸರು ಕೂಡ ಕೇಳಿಬರುತ್ತಿದೆ. ಸಿಡಿಯಲ್ಲಿದ್ದ ಯುವತಿಯ ತಂದೆ-ತಾಯಿ ಎಸ್​ಐಟಿ ತನಿಖೆ ವೇಳೆ ಡಿ.ಕೆ. ಶಿವಕುಮಾರ್ ಹೆಸರನ್ನು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕಚೇರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

ಸದಾಶಿವನಗರ ಠಾಣೆ ಪೊಲೀಸರಿಂದ ಡಿ.ಕೆ. ಶಿವಕುಮಾರ್ ಕಚೇರಿಗೆ ಹೆಚ್ಚುವರಿ ಬಂದೋಬಸ್ತ್ ಒದಗಿಸಲಾಗಿದೆ. ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ಗಳ ನಿಯೋಜನೆ ಮಾಡಲಾಗಿದೆ. ಬೆಂಗಳೂರಿನ ಸದಾಶಿವನಗರದಲ್ಲಿ ರಮೇಶ್ ಜಾರಕಿಹೊಳಿ ನಿವಾಸದ ಹಿಂದಿನ ರಸ್ತೆಯಲ್ಲಿ ಡಿ.ಕೆ. ಶಿವಕುಮಾರ್ ನಿವಾಸವಿದೆ.

ಯುವತಿಯ ಪೋಷಕರಿಗೂ ಪೊಲೀಸ್ ಭದ್ರತೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಆಡುಗೋಡಿ ಎಸ್​ಐಟಿ ಟೆಕ್ನಿಕಲ್​ ವಿಂಗ್ ಮುಂದೆಯೂ ಪೊಲೀಸರ ನಿಯೋಜನೆ ಮಾಡಲಾಗಿದೆ. ಅಲ್ಲಿ ಸಿಡಿ ಲೇಡಿ ಪೋಷಕರು ವಿಚಾರಣೆ ಎದುರಿಸುತ್ತಿದ್ದಾರೆ. ಆ ಪ್ರದೇಶದಲ್ಲಿ ಬ್ಯಾರಿಕೇಡ್​ ಹಾಕಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಎಸ್​ಐಟಿ ತನಿಖೆ ಮುಗಿಸಿ ಕೆಲ ಕ್ಷಣಗಳಲ್ಲಿ ಯುವತಿ ಪೋಷಕರು ಹೊರಬರಲಿದ್ದಾರೆ. ಇಬ್ಬರು ಇನ್ಸ್​ಪೆಕ್ಟರ್​ಗಳ ನೇತೃತ್ವದಲ್ಲಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

ತನಿಖಾ ತಂಡದ ನೇತೃತ್ವ ವಹಿಸಿರುವ ಸೌಮೇಂದು ಮುಖರ್ಜಿ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿಗಳಾದ ರವಿಕುಮಾರ್, ಎಂ.ಎನ್. ಅನುಚೇತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಯುವತಿ ಪೋಷಕರ ವಿಚಾರಣೆ ಬಹುತೇಕ ಅಂತ್ಯವಾಗಿದೆ. ಪೋಷಕರ ಹೇಳಿಕೆ, ಸಹೋದರರ ಹೇಳಿಕೆಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಹಿರಿಯ ಅಧಿಕಾರಿಗಳಿಂದಲೂ ಅಂತಿಮ ಹಂತದ ಮಾಹಿತಿ ಕಲೆ ಹಾಕುವ ಸಾಧ್ಯತೆ ಇದೆ. ಎಸ್​ಐಟಿ ತನಿಖೆ ಮುಕ್ತಾಯದ ಬಳಿಕ ಯುವತಿಯ ಪೋಷಕರು ಸುದ್ದಿಗಾರರೊಂದಿಗೆ ಮಾತನಾಡಲಿದ್ದಾರೆ.

ಇದನ್ನೂ ಓದಿ: ಸಿಡಿ ಗ್ಯಾಂಗ್, ಡಿಕೆ ಶಿವಕುಮಾರ್ ಅವರಿಂದ ನಮ್ಮ ಮಗಳ ರಕ್ಷಿಸಿ; ಮಗಳ ಪ್ರಾಣಕ್ಕೇ ಅಪಾಯವಿದೆ: ಎಸ್​ಐಟಿ ಎದುರು ಕಣ್ಣೀರಾದ ಯುವತಿಯ ತಂದೆ-ತಾಯಿ

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 

Published On - 4:22 pm, Sat, 27 March 21

ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್