AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ

Ramesh Jarkiholi CD Case: ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
TV9 Web
| Edited By: |

Updated on: Jun 17, 2021 | 9:31 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದೆ. ಇಂದು (ಜೂನ್ 17) ನಡೆದ ಎಸ್​ಐಟಿ ವಿಚಾರಣೆಯ ವೇಳೆ ಕಿಂಗ್​ಪಿನ್ ಶ್ರವಣ್​ ಮೌನವಹಿಸಿದ್ದಾರೆ. ಶ್ರವಣ್ ಮುಂದೆ ಇಂದು ದಾಖಲೆಗಳನ್ನು ಇಟ್ಟ ಎಸ್​ಐಟಿ ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಶ್ರವಣ್ ಮೌನವಾಗಿದ್ದು ಉತ್ತರ ನೀಡದೆ ಉಳಿದಿದ್ದಾರೆ.

ಕ್ಯಾಮರಾ ಖರೀದಿಗೆ ದಾಖಲೆ ಮತ್ತು ಸಿಸಿಟಿವಿ ದೃಶ್ಯದ ಸಾಕ್ಷಿ. ಸಹೋದರ ಚೇತನ್ ಅಕೌಂಟ್​ಗೆ ₹20 ಲಕ್ಷ ವರ್ಗಾವಣೆ ಈ ಬಗ್ಗೆ ಎಸ್​ಐಟಿ ಕೇಳಿದ ಪ್ರಶ್ನೆಗೆ ಅದು ಸಾಲ ಎಂದು ಶ್ರವಣ್ ಹೇಳಿರುವುದಾಗಿ ತಿಳಿದುಬಂದಿದೆ. ಸಾಲ ಪಡೆದಿದ್ದಲ್ಲ ನಗದು ನೀಡಿ ಅಕೌಂಟ್​ಗೆ ಹಣ ಹಾಕಿಸಿದ್ದು ಎಂದು ಹೇಳಿದ್ದಾರೆ. ಹಣ ಹಾಕಿದ ಸಂಬಂಧ ಎಸ್​ಐಟಿಯಿಂದ ನಾಲ್ವರ ಹೇಳಿಕೆ ದಾಖಲು ಮಾಡಲಾಗಿದೆ.

ಇಲ್ಲ ಹಣ ಹಾಕಿದವರೇ ಸುಳ್ಳು ಹೇಳಿದ್ದಾರೆ ಎಂದು ಶ್ರವಣ್ ಇಂದು ಪ್ರತಿಕ್ರಿಯಿಸಿದ್ದಾರೆ. ಸಿಡಿ ಯುವತಿಯ ಅಕೌಂಟ್​ಗೆ ಹಣ ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಣ ವರ್ಗಾವಣೆ ಮಾಡಿದ್ದಕ್ಕೆ SITಯಿಂದ ದಾಖಲೆ ಸಂಗ್ರಹ ಮಾಡಲಾಗಿದೆ. ಯುವತಿ ಜೊತೆ ಸಿಡಿ ರೆಕಾರ್ಡ್ ಮಾಡಿರುವ ವೇಳೆ ಸಂಪರ್ಕದಲ್ಲಿ ಇರುವುದಕ್ಕೆ ಎಸ್​ಐಟಿ ದಾಖಲೆ ನೀಡಿ ಪ್ರಶ್ನಿಸಿದೆ. ಅದಕ್ಕೂ ಎಸ್​ಐಟಿ ಮುಂದೆ ಶ್ರವಣ್ ಮೌನವಾಗಿಯೇ ಇದ್ದರು ಎಂದು ತಿಳಿದುಬಂದಿದೆ.

ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ, ಎಸ್​ಐಟಿಯಿಂದ ಹೈಕೋರ್ಟ್​ಗೆ ತನಿಖಾ ಪಾಲನಾ ವರದಿ ಸಲ್ಲಿಕೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ಕಳೆದ ಬಾರಿ ಸಹಿ ಹಾಕದೆ ವರದಿ ನೀಡಿದ್ದ ಎಸ್​ಐಟಿ ಅಧಿಕಾರಿಗಳು, ಎಸ್​ಐಟಿ ಮುಖ್ಯಸ್ಥರು ಮೆಡಿಕಲ್​​ ರಜೆಯಲ್ಲಿರುವ ಕಾರಣ ನೀಡಿದ್ದರು. ಆದರೆ, ಈ ಬಾರಿ ಡಿಐಜಿ ಸಂದೀಪ್ ಪಾಟೀಲ್​​ ಸಹಿ ಹಾಕಿಸಿ ವರದಿ ನೀಡಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸತತ ಐದು ಗಂಟೆಗಳ ಕಾಲ ಆರೋಪಿ ನರೇಶ್ ವಿಚಾರಣೆ ನಡೆಸಿದ ಎಸ್​ಐಟಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್