AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ

Ramesh Jarkiholi CD Case: ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
TV9 Web
| Edited By: |

Updated on: Jun 17, 2021 | 9:31 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದೆ. ಇಂದು (ಜೂನ್ 17) ನಡೆದ ಎಸ್​ಐಟಿ ವಿಚಾರಣೆಯ ವೇಳೆ ಕಿಂಗ್​ಪಿನ್ ಶ್ರವಣ್​ ಮೌನವಹಿಸಿದ್ದಾರೆ. ಶ್ರವಣ್ ಮುಂದೆ ಇಂದು ದಾಖಲೆಗಳನ್ನು ಇಟ್ಟ ಎಸ್​ಐಟಿ ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಶ್ರವಣ್ ಮೌನವಾಗಿದ್ದು ಉತ್ತರ ನೀಡದೆ ಉಳಿದಿದ್ದಾರೆ.

ಕ್ಯಾಮರಾ ಖರೀದಿಗೆ ದಾಖಲೆ ಮತ್ತು ಸಿಸಿಟಿವಿ ದೃಶ್ಯದ ಸಾಕ್ಷಿ. ಸಹೋದರ ಚೇತನ್ ಅಕೌಂಟ್​ಗೆ ₹20 ಲಕ್ಷ ವರ್ಗಾವಣೆ ಈ ಬಗ್ಗೆ ಎಸ್​ಐಟಿ ಕೇಳಿದ ಪ್ರಶ್ನೆಗೆ ಅದು ಸಾಲ ಎಂದು ಶ್ರವಣ್ ಹೇಳಿರುವುದಾಗಿ ತಿಳಿದುಬಂದಿದೆ. ಸಾಲ ಪಡೆದಿದ್ದಲ್ಲ ನಗದು ನೀಡಿ ಅಕೌಂಟ್​ಗೆ ಹಣ ಹಾಕಿಸಿದ್ದು ಎಂದು ಹೇಳಿದ್ದಾರೆ. ಹಣ ಹಾಕಿದ ಸಂಬಂಧ ಎಸ್​ಐಟಿಯಿಂದ ನಾಲ್ವರ ಹೇಳಿಕೆ ದಾಖಲು ಮಾಡಲಾಗಿದೆ.

ಇಲ್ಲ ಹಣ ಹಾಕಿದವರೇ ಸುಳ್ಳು ಹೇಳಿದ್ದಾರೆ ಎಂದು ಶ್ರವಣ್ ಇಂದು ಪ್ರತಿಕ್ರಿಯಿಸಿದ್ದಾರೆ. ಸಿಡಿ ಯುವತಿಯ ಅಕೌಂಟ್​ಗೆ ಹಣ ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಣ ವರ್ಗಾವಣೆ ಮಾಡಿದ್ದಕ್ಕೆ SITಯಿಂದ ದಾಖಲೆ ಸಂಗ್ರಹ ಮಾಡಲಾಗಿದೆ. ಯುವತಿ ಜೊತೆ ಸಿಡಿ ರೆಕಾರ್ಡ್ ಮಾಡಿರುವ ವೇಳೆ ಸಂಪರ್ಕದಲ್ಲಿ ಇರುವುದಕ್ಕೆ ಎಸ್​ಐಟಿ ದಾಖಲೆ ನೀಡಿ ಪ್ರಶ್ನಿಸಿದೆ. ಅದಕ್ಕೂ ಎಸ್​ಐಟಿ ಮುಂದೆ ಶ್ರವಣ್ ಮೌನವಾಗಿಯೇ ಇದ್ದರು ಎಂದು ತಿಳಿದುಬಂದಿದೆ.

ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ, ಎಸ್​ಐಟಿಯಿಂದ ಹೈಕೋರ್ಟ್​ಗೆ ತನಿಖಾ ಪಾಲನಾ ವರದಿ ಸಲ್ಲಿಕೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ಕಳೆದ ಬಾರಿ ಸಹಿ ಹಾಕದೆ ವರದಿ ನೀಡಿದ್ದ ಎಸ್​ಐಟಿ ಅಧಿಕಾರಿಗಳು, ಎಸ್​ಐಟಿ ಮುಖ್ಯಸ್ಥರು ಮೆಡಿಕಲ್​​ ರಜೆಯಲ್ಲಿರುವ ಕಾರಣ ನೀಡಿದ್ದರು. ಆದರೆ, ಈ ಬಾರಿ ಡಿಐಜಿ ಸಂದೀಪ್ ಪಾಟೀಲ್​​ ಸಹಿ ಹಾಕಿಸಿ ವರದಿ ನೀಡಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸತತ ಐದು ಗಂಟೆಗಳ ಕಾಲ ಆರೋಪಿ ನರೇಶ್ ವಿಚಾರಣೆ ನಡೆಸಿದ ಎಸ್​ಐಟಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ