Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ

Ramesh Jarkiholi CD Case: ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
Follow us
TV9 Web
| Updated By: ganapathi bhat

Updated on: Jun 17, 2021 | 9:31 PM

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದೆ. ಇಂದು (ಜೂನ್ 17) ನಡೆದ ಎಸ್​ಐಟಿ ವಿಚಾರಣೆಯ ವೇಳೆ ಕಿಂಗ್​ಪಿನ್ ಶ್ರವಣ್​ ಮೌನವಹಿಸಿದ್ದಾರೆ. ಶ್ರವಣ್ ಮುಂದೆ ಇಂದು ದಾಖಲೆಗಳನ್ನು ಇಟ್ಟ ಎಸ್​ಐಟಿ ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಶ್ರವಣ್ ಮೌನವಾಗಿದ್ದು ಉತ್ತರ ನೀಡದೆ ಉಳಿದಿದ್ದಾರೆ.

ಕ್ಯಾಮರಾ ಖರೀದಿಗೆ ದಾಖಲೆ ಮತ್ತು ಸಿಸಿಟಿವಿ ದೃಶ್ಯದ ಸಾಕ್ಷಿ. ಸಹೋದರ ಚೇತನ್ ಅಕೌಂಟ್​ಗೆ ₹20 ಲಕ್ಷ ವರ್ಗಾವಣೆ ಈ ಬಗ್ಗೆ ಎಸ್​ಐಟಿ ಕೇಳಿದ ಪ್ರಶ್ನೆಗೆ ಅದು ಸಾಲ ಎಂದು ಶ್ರವಣ್ ಹೇಳಿರುವುದಾಗಿ ತಿಳಿದುಬಂದಿದೆ. ಸಾಲ ಪಡೆದಿದ್ದಲ್ಲ ನಗದು ನೀಡಿ ಅಕೌಂಟ್​ಗೆ ಹಣ ಹಾಕಿಸಿದ್ದು ಎಂದು ಹೇಳಿದ್ದಾರೆ. ಹಣ ಹಾಕಿದ ಸಂಬಂಧ ಎಸ್​ಐಟಿಯಿಂದ ನಾಲ್ವರ ಹೇಳಿಕೆ ದಾಖಲು ಮಾಡಲಾಗಿದೆ.

ಇಲ್ಲ ಹಣ ಹಾಕಿದವರೇ ಸುಳ್ಳು ಹೇಳಿದ್ದಾರೆ ಎಂದು ಶ್ರವಣ್ ಇಂದು ಪ್ರತಿಕ್ರಿಯಿಸಿದ್ದಾರೆ. ಸಿಡಿ ಯುವತಿಯ ಅಕೌಂಟ್​ಗೆ ಹಣ ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಣ ವರ್ಗಾವಣೆ ಮಾಡಿದ್ದಕ್ಕೆ SITಯಿಂದ ದಾಖಲೆ ಸಂಗ್ರಹ ಮಾಡಲಾಗಿದೆ. ಯುವತಿ ಜೊತೆ ಸಿಡಿ ರೆಕಾರ್ಡ್ ಮಾಡಿರುವ ವೇಳೆ ಸಂಪರ್ಕದಲ್ಲಿ ಇರುವುದಕ್ಕೆ ಎಸ್​ಐಟಿ ದಾಖಲೆ ನೀಡಿ ಪ್ರಶ್ನಿಸಿದೆ. ಅದಕ್ಕೂ ಎಸ್​ಐಟಿ ಮುಂದೆ ಶ್ರವಣ್ ಮೌನವಾಗಿಯೇ ಇದ್ದರು ಎಂದು ತಿಳಿದುಬಂದಿದೆ.

ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ, ಎಸ್​ಐಟಿಯಿಂದ ಹೈಕೋರ್ಟ್​ಗೆ ತನಿಖಾ ಪಾಲನಾ ವರದಿ ಸಲ್ಲಿಕೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ಕಳೆದ ಬಾರಿ ಸಹಿ ಹಾಕದೆ ವರದಿ ನೀಡಿದ್ದ ಎಸ್​ಐಟಿ ಅಧಿಕಾರಿಗಳು, ಎಸ್​ಐಟಿ ಮುಖ್ಯಸ್ಥರು ಮೆಡಿಕಲ್​​ ರಜೆಯಲ್ಲಿರುವ ಕಾರಣ ನೀಡಿದ್ದರು. ಆದರೆ, ಈ ಬಾರಿ ಡಿಐಜಿ ಸಂದೀಪ್ ಪಾಟೀಲ್​​ ಸಹಿ ಹಾಕಿಸಿ ವರದಿ ನೀಡಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸತತ ಐದು ಗಂಟೆಗಳ ಕಾಲ ಆರೋಪಿ ನರೇಶ್ ವಿಚಾರಣೆ ನಡೆಸಿದ ಎಸ್​ಐಟಿ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್