AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ

Ramesh Jarkiholi CD Case: ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
TV9 Web
| Edited By: |

Updated on: Jun 17, 2021 | 9:31 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದೆ. ಇಂದು (ಜೂನ್ 17) ನಡೆದ ಎಸ್​ಐಟಿ ವಿಚಾರಣೆಯ ವೇಳೆ ಕಿಂಗ್​ಪಿನ್ ಶ್ರವಣ್​ ಮೌನವಹಿಸಿದ್ದಾರೆ. ಶ್ರವಣ್ ಮುಂದೆ ಇಂದು ದಾಖಲೆಗಳನ್ನು ಇಟ್ಟ ಎಸ್​ಐಟಿ ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಶ್ರವಣ್ ಮೌನವಾಗಿದ್ದು ಉತ್ತರ ನೀಡದೆ ಉಳಿದಿದ್ದಾರೆ.

ಕ್ಯಾಮರಾ ಖರೀದಿಗೆ ದಾಖಲೆ ಮತ್ತು ಸಿಸಿಟಿವಿ ದೃಶ್ಯದ ಸಾಕ್ಷಿ. ಸಹೋದರ ಚೇತನ್ ಅಕೌಂಟ್​ಗೆ ₹20 ಲಕ್ಷ ವರ್ಗಾವಣೆ ಈ ಬಗ್ಗೆ ಎಸ್​ಐಟಿ ಕೇಳಿದ ಪ್ರಶ್ನೆಗೆ ಅದು ಸಾಲ ಎಂದು ಶ್ರವಣ್ ಹೇಳಿರುವುದಾಗಿ ತಿಳಿದುಬಂದಿದೆ. ಸಾಲ ಪಡೆದಿದ್ದಲ್ಲ ನಗದು ನೀಡಿ ಅಕೌಂಟ್​ಗೆ ಹಣ ಹಾಕಿಸಿದ್ದು ಎಂದು ಹೇಳಿದ್ದಾರೆ. ಹಣ ಹಾಕಿದ ಸಂಬಂಧ ಎಸ್​ಐಟಿಯಿಂದ ನಾಲ್ವರ ಹೇಳಿಕೆ ದಾಖಲು ಮಾಡಲಾಗಿದೆ.

ಇಲ್ಲ ಹಣ ಹಾಕಿದವರೇ ಸುಳ್ಳು ಹೇಳಿದ್ದಾರೆ ಎಂದು ಶ್ರವಣ್ ಇಂದು ಪ್ರತಿಕ್ರಿಯಿಸಿದ್ದಾರೆ. ಸಿಡಿ ಯುವತಿಯ ಅಕೌಂಟ್​ಗೆ ಹಣ ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಣ ವರ್ಗಾವಣೆ ಮಾಡಿದ್ದಕ್ಕೆ SITಯಿಂದ ದಾಖಲೆ ಸಂಗ್ರಹ ಮಾಡಲಾಗಿದೆ. ಯುವತಿ ಜೊತೆ ಸಿಡಿ ರೆಕಾರ್ಡ್ ಮಾಡಿರುವ ವೇಳೆ ಸಂಪರ್ಕದಲ್ಲಿ ಇರುವುದಕ್ಕೆ ಎಸ್​ಐಟಿ ದಾಖಲೆ ನೀಡಿ ಪ್ರಶ್ನಿಸಿದೆ. ಅದಕ್ಕೂ ಎಸ್​ಐಟಿ ಮುಂದೆ ಶ್ರವಣ್ ಮೌನವಾಗಿಯೇ ಇದ್ದರು ಎಂದು ತಿಳಿದುಬಂದಿದೆ.

ಕ್ಯಾಮರಾ ಎಲ್ಲಿದೆ, ಒರಿಜಿನಲ್ ವಿಡಿಯೋ ಎಲ್ಲಿ ಎಂದು ಪ್ರಶ್ನೆ ಕೇಳಿದಾಗ ಎಸ್​ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡದ ಶ್ರವಣ್ ಮೌನಕ್ಕೆ ಶರಣಾಗಿದ್ದಾರೆ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ, ಎಸ್​ಐಟಿಯಿಂದ ಹೈಕೋರ್ಟ್​ಗೆ ತನಿಖಾ ಪಾಲನಾ ವರದಿ ಸಲ್ಲಿಕೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ಕಳೆದ ಬಾರಿ ಸಹಿ ಹಾಕದೆ ವರದಿ ನೀಡಿದ್ದ ಎಸ್​ಐಟಿ ಅಧಿಕಾರಿಗಳು, ಎಸ್​ಐಟಿ ಮುಖ್ಯಸ್ಥರು ಮೆಡಿಕಲ್​​ ರಜೆಯಲ್ಲಿರುವ ಕಾರಣ ನೀಡಿದ್ದರು. ಆದರೆ, ಈ ಬಾರಿ ಡಿಐಜಿ ಸಂದೀಪ್ ಪಾಟೀಲ್​​ ಸಹಿ ಹಾಕಿಸಿ ವರದಿ ನೀಡಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸತತ ಐದು ಗಂಟೆಗಳ ಕಾಲ ಆರೋಪಿ ನರೇಶ್ ವಿಚಾರಣೆ ನಡೆಸಿದ ಎಸ್​ಐಟಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ