AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್​ಐಟಿ ತಂಡ?

ಪೊಲೀಸರ ತನಿಖೆಯ ಪ್ರತಿ ಹಂತದ ಮಾಹಿತಿಯೂ ಆ ಯುವತಿಗೆ ಸೋರಿಕೆಯಾಗುತ್ತಿರಬಹುದು ಅಥವಾ ಈ ತನಿಖಾ ತಂಡದಲ್ಲಿರುವವರೇ ಉದ್ದೇಶಪೂರ್ವಕವಾಗಿ ಆಕೆಗೆ ಮಾಹಿತಿ ನೀಡಿರಬಹುದು ಎಂಬ ವಿಶ್ಲೇಷಣೆಗಳು ಚಾಲ್ತಿಯಲ್ಲಿವೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್​ಐಟಿ ತಂಡ?
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 15, 2021 | 10:46 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಲೈಂಗಿಕ ಹಗರಣದ ಸತ್ಯಾಸತ್ಯತೆ ಪರಿಶೋಧಿಸಲು ನೇಮಕಗೊಂಡಿರುವ ವಿಶೇಷ ತನಿಖಾ ತಂಡವು (ಎಸ್​ಐಟಿ) ಸಂತ್ರಸ್ತೆ ಎನ್ನಲಾದ ಯುವತಿಯ ಬಂಧನಕ್ಕಾಗಿ ಗೋವಾವರೆಗೆ ತೆರಳಿ ಬರಿಗೈಲಿ ನಗರಕ್ಕೆ ಹಿಂದಿರುಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯು ಗೋವಾದಲ್ಲಿ ತನ್ನ ಗೆಳತಿಯೊಂದಿಗೆ ಇರುವ ಬಗ್ಗೆ ಎಸ್​ಐಟಿಗೆ ಮಾಹಿತಿ ಸಿಕ್ಕಿತ್ತು. ಇದೇ ಮಾಹಿತಿ ಆಧರಿಸಿ ತನಿಖಾ ತಂಡವು ಗೋವಾಕ್ಕೆ ದೌಡಾಯಿಸಿತ್ತು. ಆದರೆ ಸಂತ್ರಸ್ತೆ ಪೊಲೀಸರ ಕೈಗೆ ಸಿಕ್ಕಿಲ್ಲ. ಆಕೆಯ ಗೆಳತಿಯನ್ನು ಮಾತ್ರ ಪೊಲೀಸರು ಭೇಟಿಯಾಗಲು ಸಾಧ್ಯವಾಯಿತು ಎಂದು ಮೂಲಗಳು ಹೇಳಿವೆ. ಈ ವಿಚಾರವನ್ನು ತುಂಬಾ ಸೂಕ್ಷ್ಮ ಎಂದು ಪರಿಗಣಿಸಿರುವ ಪೊಲೀಸ್ ತಂಡ ಈ ಕುರಿತು ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ನೀಡುತ್ತಿಲ್ಲ.

ತನಿಖಾ ತಂಡದಿಂದ ಯುವತಿ ತಪ್ಪಿಸಲು ಎರಡು ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆಯ ಪ್ರತಿ ಹಂತದ ಮಾಹಿತಿಯೂ ಆ ಯುವತಿಗೆ ಸೋರಿಕೆಯಾಗುತ್ತಿರಬಹುದು ಅಥವಾ ಈ ತನಿಖಾ ತಂಡದಲ್ಲಿರುವವರೇ ಉದ್ದೇಶಪೂರ್ವಕವಾಗಿ ಆಕೆಗೆ ಮಾಹಿತಿ ನೀಡಿರಬಹುದು ಎಂಬ ವಿಶ್ಲೇಷಣೆಗಳು ಚಾಲ್ತಿಯಲ್ಲಿವೆ.

ಪೊಲೀಸರೇ ಮಾಹಿತಿ ಸೋರಿಕೆ ಮಾಡಿರಬಹುದು ಎಂಬ ವಿಶ್ಲೇಷಣೆಗೆ ಹಲವು ತರ್ಕಗಳಿವೆ. ಒಂದೊಮ್ಮೆ ತನಿಖಾ ತಂಡವು ಸಂತ್ರಸ್ತ ಯುವತಿಯನ್ನು ಬೆಂಗಳೂರಿಗೆ ಕರೆತಂದರೆ, ಇಲ್ಲಿ ಆಕೆ ಹೇಳಿಕೆ ನೀಡುತ್ತಾಳೆ. ಆ ಹೇಳಿಕೆ ಆಧರಿಸಿ ಆಗುವ ಎಫ್​ಐಆರ್​ನಿಂದ ರಮೇಶ್ ಜಾರಕಿಹೊಳಿಗೆ ಬಂಧನಕ ಕಂಟಕ ಉಂಟಾಗಬಹುದು. ರಮೇಶ್​ ಜಾರಕಿಹೊಳಿಯನ್ನು ಈ ಮುಜುಗರದಿಂದ ತಪ್ಪಿಸಲೆಂದೇ ಪೊಲೀಸರು ಈ ತಂತ್ರ ಹೂಡಿರಬಹುದು ಎನ್ನಲಾಗುತ್ತಿದೆ.

ತನಿಖೆಯನ್ನು ಮತ್ತೊಂದು ಆಯಾಮದಿಂದ ತೀವ್ರಗೊಳಿಸಿರುವ ಪೊಲೀಸರು ಈ ಸಿಡಿ ಹಗರಣದ ಮುಖ್ಯ ರೂವಾರಿ ಮತ್ತು ಅವರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ಸಾಕಷ್ಟು ಒಗ್ಗೂಡಿಸಿಕೊಂಡ ನಂತರವೇ ಸಂತ್ರಸ್ತೆಯನ್ನು ಕರೆತರಲು ಮುಂದಾಗಬಹುದು ಎನ್ನಲಾಗುತ್ತಿದೆ. ಒಂದೊಮ್ಮೆ ಆಗಲೂ ಆಕೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದರೂ ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳ ಸಹಾಯದಿಂದ ರಮೇಶ್ ಜಾರಕಿಹೊಳಿ ಅವರಿಗೆ ಅನುಕೂಲವಾಗಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ, ಶ್ರೀರಾಮುಲು ಭವಿಷ್ಯದ ಮೇಲೆ ಸಿಡಿ ರಾಜಕಾರಣದ ನೆರಳು

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

Published On - 10:42 pm, Mon, 15 March 21

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ