AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್​ಐಟಿ ತಂಡ?

ಪೊಲೀಸರ ತನಿಖೆಯ ಪ್ರತಿ ಹಂತದ ಮಾಹಿತಿಯೂ ಆ ಯುವತಿಗೆ ಸೋರಿಕೆಯಾಗುತ್ತಿರಬಹುದು ಅಥವಾ ಈ ತನಿಖಾ ತಂಡದಲ್ಲಿರುವವರೇ ಉದ್ದೇಶಪೂರ್ವಕವಾಗಿ ಆಕೆಗೆ ಮಾಹಿತಿ ನೀಡಿರಬಹುದು ಎಂಬ ವಿಶ್ಲೇಷಣೆಗಳು ಚಾಲ್ತಿಯಲ್ಲಿವೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್​ಐಟಿ ತಂಡ?
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 15, 2021 | 10:46 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಲೈಂಗಿಕ ಹಗರಣದ ಸತ್ಯಾಸತ್ಯತೆ ಪರಿಶೋಧಿಸಲು ನೇಮಕಗೊಂಡಿರುವ ವಿಶೇಷ ತನಿಖಾ ತಂಡವು (ಎಸ್​ಐಟಿ) ಸಂತ್ರಸ್ತೆ ಎನ್ನಲಾದ ಯುವತಿಯ ಬಂಧನಕ್ಕಾಗಿ ಗೋವಾವರೆಗೆ ತೆರಳಿ ಬರಿಗೈಲಿ ನಗರಕ್ಕೆ ಹಿಂದಿರುಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯು ಗೋವಾದಲ್ಲಿ ತನ್ನ ಗೆಳತಿಯೊಂದಿಗೆ ಇರುವ ಬಗ್ಗೆ ಎಸ್​ಐಟಿಗೆ ಮಾಹಿತಿ ಸಿಕ್ಕಿತ್ತು. ಇದೇ ಮಾಹಿತಿ ಆಧರಿಸಿ ತನಿಖಾ ತಂಡವು ಗೋವಾಕ್ಕೆ ದೌಡಾಯಿಸಿತ್ತು. ಆದರೆ ಸಂತ್ರಸ್ತೆ ಪೊಲೀಸರ ಕೈಗೆ ಸಿಕ್ಕಿಲ್ಲ. ಆಕೆಯ ಗೆಳತಿಯನ್ನು ಮಾತ್ರ ಪೊಲೀಸರು ಭೇಟಿಯಾಗಲು ಸಾಧ್ಯವಾಯಿತು ಎಂದು ಮೂಲಗಳು ಹೇಳಿವೆ. ಈ ವಿಚಾರವನ್ನು ತುಂಬಾ ಸೂಕ್ಷ್ಮ ಎಂದು ಪರಿಗಣಿಸಿರುವ ಪೊಲೀಸ್ ತಂಡ ಈ ಕುರಿತು ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ನೀಡುತ್ತಿಲ್ಲ.

ತನಿಖಾ ತಂಡದಿಂದ ಯುವತಿ ತಪ್ಪಿಸಲು ಎರಡು ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆಯ ಪ್ರತಿ ಹಂತದ ಮಾಹಿತಿಯೂ ಆ ಯುವತಿಗೆ ಸೋರಿಕೆಯಾಗುತ್ತಿರಬಹುದು ಅಥವಾ ಈ ತನಿಖಾ ತಂಡದಲ್ಲಿರುವವರೇ ಉದ್ದೇಶಪೂರ್ವಕವಾಗಿ ಆಕೆಗೆ ಮಾಹಿತಿ ನೀಡಿರಬಹುದು ಎಂಬ ವಿಶ್ಲೇಷಣೆಗಳು ಚಾಲ್ತಿಯಲ್ಲಿವೆ.

ಪೊಲೀಸರೇ ಮಾಹಿತಿ ಸೋರಿಕೆ ಮಾಡಿರಬಹುದು ಎಂಬ ವಿಶ್ಲೇಷಣೆಗೆ ಹಲವು ತರ್ಕಗಳಿವೆ. ಒಂದೊಮ್ಮೆ ತನಿಖಾ ತಂಡವು ಸಂತ್ರಸ್ತ ಯುವತಿಯನ್ನು ಬೆಂಗಳೂರಿಗೆ ಕರೆತಂದರೆ, ಇಲ್ಲಿ ಆಕೆ ಹೇಳಿಕೆ ನೀಡುತ್ತಾಳೆ. ಆ ಹೇಳಿಕೆ ಆಧರಿಸಿ ಆಗುವ ಎಫ್​ಐಆರ್​ನಿಂದ ರಮೇಶ್ ಜಾರಕಿಹೊಳಿಗೆ ಬಂಧನಕ ಕಂಟಕ ಉಂಟಾಗಬಹುದು. ರಮೇಶ್​ ಜಾರಕಿಹೊಳಿಯನ್ನು ಈ ಮುಜುಗರದಿಂದ ತಪ್ಪಿಸಲೆಂದೇ ಪೊಲೀಸರು ಈ ತಂತ್ರ ಹೂಡಿರಬಹುದು ಎನ್ನಲಾಗುತ್ತಿದೆ.

ತನಿಖೆಯನ್ನು ಮತ್ತೊಂದು ಆಯಾಮದಿಂದ ತೀವ್ರಗೊಳಿಸಿರುವ ಪೊಲೀಸರು ಈ ಸಿಡಿ ಹಗರಣದ ಮುಖ್ಯ ರೂವಾರಿ ಮತ್ತು ಅವರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ಸಾಕಷ್ಟು ಒಗ್ಗೂಡಿಸಿಕೊಂಡ ನಂತರವೇ ಸಂತ್ರಸ್ತೆಯನ್ನು ಕರೆತರಲು ಮುಂದಾಗಬಹುದು ಎನ್ನಲಾಗುತ್ತಿದೆ. ಒಂದೊಮ್ಮೆ ಆಗಲೂ ಆಕೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದರೂ ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳ ಸಹಾಯದಿಂದ ರಮೇಶ್ ಜಾರಕಿಹೊಳಿ ಅವರಿಗೆ ಅನುಕೂಲವಾಗಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ, ಶ್ರೀರಾಮುಲು ಭವಿಷ್ಯದ ಮೇಲೆ ಸಿಡಿ ರಾಜಕಾರಣದ ನೆರಳು

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

Published On - 10:42 pm, Mon, 15 March 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?