AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಯಲ್ಲಿರುವ ಯುವತಿ, ವಕೀಲ ಜಗದೀಶ್ ನನ್ನ ಸಹಕಾರ ಕೇಳಿದ್ದಕ್ಕೆ ಅಲ್ಲಿ ಹಾಜರಿದ್ದೆ: ಸೂರ್ಯ ಮುಕುಂದರಾಜ್ ಸ್ಪಷ್ಟನೆ

ಜಗದೀಶ್ ಅವರು ನನಗೆ ಸಹಕಾರ ಕೇಳಿದ್ದಕ್ಕೆ ಅಲ್ಲಿ ಹಾಜರಿದ್ದೆ. ಅವರು ಏನು ಬೇಕಾದರೂ ಹೇಳಲಿ ನಾನು ಉತ್ತರಿಸಲ್ಲ. ಸಿಡಿಯಲ್ಲಿರುವ ಯುವತಿ, ವಕೀಲ ಜಗದೀಶ್ ನನ್ನನ್ನು ಪ್ರಕರಣ ಮುನ್ನಡೆಸಿ ಎಂದು ಕೇಳಿಕೊಂಡಿದ್ದಾರೆ. ಇದರಲ್ಲಿ ನಮ್ಮ ಒತ್ತಡ ಇಲ್ಲ ಎಂದು ಸೂರ್ಯ ಮುಕುಂದರಾಜ್ ಹೇಳಿದ್ದಾರೆ.

ಸಿಡಿಯಲ್ಲಿರುವ ಯುವತಿ, ವಕೀಲ ಜಗದೀಶ್ ನನ್ನ ಸಹಕಾರ ಕೇಳಿದ್ದಕ್ಕೆ ಅಲ್ಲಿ ಹಾಜರಿದ್ದೆ: ಸೂರ್ಯ ಮುಕುಂದರಾಜ್ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 05, 2022 | 1:00 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಕ್ಷಣಕ್ಕೊಂದು ಸ್ವರೂಪ ಪಡೆದು ಬೆಳೆಯುತ್ತಿದೆ. ಒಂದೆಡೆ ಸಿಡಿಯಲ್ಲಿದ್ದ ಯುವತಿ ಇಂದು (ಮಾರ್ಚ್ 31) ವೈದ್ಯಕೀಯ ಪರೀಕ್ಷೆ ಹಾಗೂ ಎಸ್​ಐಟಿ ತನಿಖೆ ಎದುರಿಸಿದ್ದಾರೆ. ಅದರ ಬೆನ್ನಲ್ಲೇ ಯುವತಿಯ ತಂದೆ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಗಳ ಹೇಳಿಕೆಗಳನ್ನು ಪಡೆಯಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ, ನನ್ನ ಮಗಳ ಹೇಳಿಕೆಯನ್ನು ಪಡೆಯುವಾಗ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್​ ಉಪಸ್ಥಿತಿ ಇದ್ದಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ಸಂಬಂಧಿಸಿ ಸೂರ್ಯ ಮುಕುಂದರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಸಿಡಿ ಲೇಡಿ ತಂದೆಗೆ ಯಾರು ಹೇಳಿದರೋ ಗೊತ್ತಿಲ್ಲ. ಅವರು ಸೂರ್ಯ ಮುಕುಂದರಾಜ್​ ಅಲ್ಲಿದ್ದಾರೆಂದು ಹೇಳುತ್ತಾರೆ. ನಾನು ಕಾಂಗ್ರೆಸ್ ಸೇರುವ ಮುನ್ನ ವಕೀಲನಾಗಿದ್ದೆ. ನನ್ನ ಸೇವೆ ಬಯಸುವವರ ಪರ ವಕಾಲತ್ತು ವಹಿಸುತ್ತೇನೆ ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಜಗದೀಶ್ ಅವರು ನನ್ನ ಸಹಕಾರ ಕೇಳಿದ್ದಕ್ಕೆ ಅಲ್ಲಿ ಹಾಜರಿದ್ದೆ. ಅವರು ಏನು ಬೇಕಾದರೂ ಹೇಳಲಿ ನಾನು ಉತ್ತರಿಸಲ್ಲ. ಸಿಡಿಯಲ್ಲಿರುವ ಯುವತಿ, ವಕೀಲ ಜಗದೀಶ್ ನನ್ನನ್ನು ಪ್ರಕರಣ ಮುನ್ನಡೆಸಿ ಎಂದು ಕೇಳಿಕೊಂಡಿದ್ದಾರೆ. ಇದರಲ್ಲಿ ನಮ್ಮ ಒತ್ತಡ ಇಲ್ಲ ಎಂದು ಸೂರ್ಯ ಮುಕುಂದರಾಜ್ ಹೇಳಿದ್ದಾರೆ.

ಯುವತಿಗೆ ರಕ್ಷಣೆ ಕೊಡಲು ಸರ್ಕಾರ ಮುಂದೆ ಬರಬೇಕು. ಸರ್ಕಾರ ಜನರ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ಸರ್ಕಾರ ವಕೀಲರ ಫೋನ್ ಕರೆಗಳನ್ನ ಕದ್ದಾಲಿಕೆ ಮಾಡಿದೆ. ಈವರೆಗೆ ಯಾವ ಸರ್ಕಾರವೂ ಈ ರೀತಿ ಮಾಡಿಲ್ಲ. ಬಿ.ಎಸ್. ಯಡಿಯೂರಪ್ಪನವರೇ ಇದು ಒಳ್ಳೆಯದಲ್ಲ. ತುರ್ತು ಪರಿಸ್ಥಿತಿಯಲ್ಲೂ ವಕೀಲರ ಕರೆ ಕದ್ದಾಲಿಕೆ ಆಗಿಲ್ಲ. ಗೃಹಸಚಿವರೇ ನ್ಯಾಯಾಂಗ ವ್ಯವಸ್ಥೆ ಬುಡಮೇಲು ಮಾಡ್ಬೇಡಿ. ನೀವು ಆರೋಪ ಮಾಡುತ್ತಿರುವುದು ನನ್ನ ಮೇಲೆ ಅಲ್ಲ. ನ್ಯಾಯಾಂಗ, ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಎಂದು ಸರ್ಕಾರದ ವಿರುದ್ಧ ಮಾತನಾಡಿದ್ದಾರೆ.

ಶಾಸಕ ರಮೇಶ್ ಜಾರಕಿಹೊಳಿ ಓರ್ವ ಆರೋಪಿ. ರಮೇಶ್​ ಜಾರಕಿಹೊಳಿಗೆ ರಕ್ಷಣೆ ನೀಡುವ ಪ್ರಯತ್ನ ಬೇಡ. ಯುವತಿ ನಿಮ್ಮ ಕಂಟ್ರೋಲ್​ನಲ್ಲಿಯೇ ಇದ್ದಾಳೆ, ಕೇಳಿ. ನಿಮ್ಮ ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೊಮ್ಮಾಯಿಯವರೇ ಅಧಿಕಾರಿಗಳನ್ನೇ ಕೇಳಿ ತಿಳಿದುಕೊಳ್ಳಿ. ಸಿಡಿ ಯುವತಿ ಕೇವಲ ಹೈಕೋರ್ಟ್​​ಗಷ್ಟೇ ಮೇಲ್​ ಮಾಡಿಲ್ಲ. ಸುಪ್ರೀಂಕೋರ್ಟ್​​ಗೂ ಯುವತಿ ಮೇಲ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಸೂರ್ಯ ಮುಕುಂದರಾಜ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​; ಮಗಳ ಹೇಳಿಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಂದೆ

ಇದನ್ನೂ ಓದಿ: ನನ್ನ ಮಗಳ ಹೇಳಿಕೆ ಪಡೆಯುವಾಗ ಕಾಂಗ್ರೆಸ್ ಪದಾಧಿಕಾರಿ ಯಾಕೆ ಉಪಸ್ಥಿತರಿದ್ದರು? ಇದು ಕಾನೂನು ಬಾಹಿರ ಪ್ರಕ್ರಿಯೆ: ಸಿಡಿ ಸಂತ್ರಸ್ತೆಯ ತಂದೆಯಿಂದ ಆರೋಪ

Published On - 8:09 pm, Wed, 31 March 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!