AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿಯ ಭದ್ರತೆಗಾಗಿ 8 ಸಿಬ್ಬಂದಿಗಳ ವಿಶೇಷ ಮಹಿಳಾ ತಂಡ ರಚನೆ; ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ ಸಂಭವ

ಸರ್ಕಾರಿ ಗೆಜೆಟ್ ಆದೇಶವಿಲ್ಲದೇ ಎಸ್ಐಟಿ ರಚಿಸಲಾಗಿದೆ. ಸದಾಶಿವನಗರ, ಕಬ್ಬನ್​ಪಾರ್ಕ್ ಪೊಲೀಸರೇ ತನಿಖೆ ನಡೆಸಬೇಕು. ಈ ಬಗ್ಗೆ ನಿರ್ದೇಶನ ನೀಡುವಂತೆ ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಲಾಗಿದೆ.

ಸಿಡಿ ಲೇಡಿಯ ಭದ್ರತೆಗಾಗಿ 8 ಸಿಬ್ಬಂದಿಗಳ ವಿಶೇಷ ಮಹಿಳಾ ತಂಡ ರಚನೆ; ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ ಸಂಭವ
ಸಿಡಿಯಲ್ಲಿರುವ ಯುವತಿ ಮತ್ತು ವಕೀಲ ಜಗದೀಶ್
Follow us
guruganesh bhat
|

Updated on:Mar 29, 2021 | 4:49 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಲಯ ಅನುಮತಿ ನೀಡಿದೆ. ಕೆಲವೇ ಹೊತ್ತಿನಲ್ಲಿ ಯುವತಿ ಎಸಿಎಂಎಂ ನ್ಯಾಯಾಲಯಕ್ಕೆ ಯುವತಿ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಸಿಡಿ ಲೇಡಿಯ ಭದ್ರತೆಗಾಗಿ ಓರ್ವ ಮಹಿಳಾ ಸಬ್ ಇನ್ಸ್ಪೆಕ್ಟರ್ ಸೇರಿದಂತೆ 8 ಮಹಿಳಾ ಪೊಲೀಸರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಯುವತಿ ವಿಚಾರಣೆಗೆ ಹಾಜರಾಗಲು ಭದ್ರತೆಯ ಕುರಿತು ಅಪಸ್ವರವೆತ್ತಿದ್ದ ಕಾರಣ, ಸೂಕ್ತ ಭದ್ರತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಯುವತಿ ಹೇಳಿದಲ್ಲಿ ತೆರಳಿ ಭದ್ರತೆ ನೀಡಲು, ಹೇಳಿಕೆ ದಾಖಲಿಸಲು ವಿಶೇಷ ತಂಡ ಸಿದ್ಧವಾಗಿದೆ ಎನ್ನಲಾಗಿದೆ. ಒಂದು ವೇಳೆ ಆಕೆಯೇ ನೇರವಾಗಿ ಹಾಜರಾದರೂ ಮಹಿಳಾ ಸಿಬ್ಬಂದಿಗಳನ್ನೇ ಹೊಂದಿರುವ ವಿಶೇಷ ತನಿಖಾ ತಂಡ ಭದ್ರತೆ ಒದಗಿಸಲಿದೆ. ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ  ಸಂಭವ ಹೆಚ್ಚಿರುವ ಕಾರಣ ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ಹೆಚ್ಚಿಸಲಾಗಿದೆ.

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ಹಿನ್ನೆಲೆಯಲ್ಲಿ ಎಸ್ಐಟಿ ರದ್ದು ಕೋರಿ ಹೈಕೋರ್ಟ್​ಗೆ ವಕೀಲೆ ಗೀತಾ ಮಿಶ್ರಾ ಎಂಬುವವರು ಪಿಐಎಲ್ ಸಲ್ಲಿಸಲಿದ್ದಾರೆ. ಸರ್ಕಾರಿ ಗೆಜೆಟ್ ಆದೇಶವಿಲ್ಲದೇ ಎಸ್ಐಟಿ ರಚಿಸಲಾಗಿದೆ. ಸದಾಶಿವನಗರ, ಕಬ್ಬನ್​ಪಾರ್ಕ್ ಪೊಲೀಸರೇ ತನಿಖೆ ನಡೆಸಬೇಕು. ಈ ಬಗ್ಗೆ ನಿರ್ದೇಶನ ನೀಡುವಂತೆ ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕಾಲ್​ ಬಗ್ಗೆ ಗೊತ್ತಿಲ್ಲ ಎಂದು ಜಾರಿಕೊಂಡ ಜಾರಕಿಹೊಳಿಗೆ, ಕಾಲ್​ ಡಿಟೈಲ್ಸ್​ ತೋರಿಸಿ ಶಾಕ್​ ಕೊಟ್ಟ ಎಸ್​ಐಟಿ ಅಧಿಕಾರಿಗಳು

ಸಿಡಿ ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ನಲಪಾಡ್ ಹ್ಯಾರಿಸ್ ಬಂಧನ

Published On - 4:44 pm, Mon, 29 March 21

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ