AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಗ್ಯಾಂಗ್, ಡಿಕೆ ಶಿವಕುಮಾರ್ ಅವರಿಂದ ನಮ್ಮ ಮಗಳ ರಕ್ಷಿಸಿ; ಮಗಳ ಪ್ರಾಣಕ್ಕೇ ಅಪಾಯವಿದೆ: ಎಸ್​ಐಟಿ ಎದುರು ಕಣ್ಣೀರಾದ ಯುವತಿಯ ತಂದೆ-ತಾಯಿ

ಸಿಡಿ ಕಿಂಗ್‌ ಪಿನ್‌ಗಳ ವಿರುದ್ಧ ಸಿಡಿಯಲ್ಲಿದ್ದ ಯುವತಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್‌ಐಟಿ ವಿಚಾರಣೆ ವೇಳೆ ಪೋಷಕರು ಆಕ್ರೋಶ ಹೊರಜಾಕಿದ್ದಾರೆ.

ಸಿಡಿ ಗ್ಯಾಂಗ್, ಡಿಕೆ ಶಿವಕುಮಾರ್ ಅವರಿಂದ ನಮ್ಮ ಮಗಳ ರಕ್ಷಿಸಿ; ಮಗಳ ಪ್ರಾಣಕ್ಕೇ ಅಪಾಯವಿದೆ: ಎಸ್​ಐಟಿ ಎದುರು ಕಣ್ಣೀರಾದ ಯುವತಿಯ ತಂದೆ-ತಾಯಿ
ಡಿ.ಕೆ. ಶಿವಕುಮಾರ್ ಹಾಗೂ ಸಿಡಿಯಲ್ಲಿದ್ದ ಯುವತಿ
TV9 Web
| Edited By: |

Updated on:Apr 05, 2022 | 1:11 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಬಿರುಸಿನ ಬೆಳವಣಿಗೆಗಳಾಗುತ್ತಿದೆ. ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಲಿಖಿತ ದೂರು ನೀಡಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಎಸ್​ಐಟಿ ಕೈಗೆತ್ತಿಕೊಂಡಿದೆ. ಎಸ್​ಐಟಿ ಮುಂದೆ ಯುವತಿ ಪೋಷಕರು ಹೇಳಿದ್ದೇನು ಎಂಬ ಬಗ್ಗೆ ಉನ್ನತ ಮೂಲಗಳ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.

ಸಿಡಿ ಕಿಂಗ್‌ ಪಿನ್‌ಗಳ ವಿರುದ್ಧ ಸಿಡಿಯಲ್ಲಿದ್ದ ಯುವತಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್‌ಐಟಿ ವಿಚಾರಣೆ ವೇಳೆ ಪೋಷಕರು ಆಕ್ರೋಶ ಹೊರಜಾಕಿದ್ದಾರೆ. ಮಗಳು ಹೊರಗೆ ಬಾರದಂತೆ ಅವರು ಚಿತ್ರಹಿಂಸೆ ನೀಡಿದ್ದಾರೆ. ಇತ್ತೀಚೆಗೆ ನಮ್ಮನ್ನು ಸಂಪರ್ಕಿಸಿದ್ದರು ಎಂದು SIT ಮುಂದೆ ಕಣ್ಣೀರಿಡುತ್ತಾ ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಮಗಳ ರಕ್ಷಣೆ ನಾನೇ ಮಾಡಿಕೊಳ್ಳುತ್ತೇನೆ. ದೇಶ ಸೇವೆ ಮಾಡಿದ್ದ ನನಗೆ ಮಗಳ ರಕ್ಷಣೆ ಗೊತ್ತು ಎಂದು ಸಿಡಿ ಯುವತಿ ತಂದೆ ತಿಳಿಸಿದ್ದಾರೆ. ಸಿಡಿ ಗ್ಯಾಂಗ್‌, ಡಿಕೆಶಿ ವಿರುದ್ಧ ಕೆಲವೊಂದು ಸಾಕ್ಷ್ಯ ಸಮೇತ ಪೋಷಕರು ಆಪಾದನೆ ಮಾಡಿದ್ದಾರೆ. ಮಗಳನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಕಣ್ಣೀರಾಗಿದ್ದಾರೆ.

ಡಿ.ಕೆ.ಶಿವಕುಮಾರ್ ವಿರುದ್ಧ ಕೈತೋರಿಸಿದ್ರಾ ಪೋಷಕರು? ಎಸ್‌ಐಟಿ ಮುಂದೆ ವಿಚಾರಣೆ ವೇಳೆ ಡಿಕೆಶಿ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸಂತ್ರಸ್ತ ಯುವತಿ ತಂದೆ, ತಾಯಿ, ತಮ್ಮಂದಿರಿಂದ ಡಿ.ಕೆ. ಶಿವಕುಮಾರ್, ಡಿ.ಕೆ. ಶಿವಕುಮಾರ್ ಕಡೆಯವರ ಪ್ರಸ್ತಾಪವಾಗಿದೆ. ಡಿ.ಕೆ. ಶಿವಕುಮಾರ್ ಹಾಗೂ ಅವರ ಕಡೆಯವರು ಇದ್ದಾರೆ ಎಂದು ಯುವತಿ ಹೇಳುತ್ತಿದ್ದಳು. ಎಲ್ಲಿದ್ದೀಯಾ ಎಂದಾಗ ಗೊತ್ತಾಗ್ತಿಲ್ಲವೆಂದು ಅಸಹಾಯಕತೆ ತೋರಿದ್ದಳು. ‘ಅವಳಿಗೆ ಡಿಕೆಶಿ ಕಡೆಯವರೇ ಚಿತ್ರಹಿಂಸೆ ನೀಡಿರಬಹುದು’ ಎಂದು ಸಂತ್ರಸ್ತೆಯ ಪೋಷಕರು ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಎಸ್​ಐಟಿಗೆ ಆಡಿಯೋ-ವಿಡಿಯೋ ಸಾಕ್ಷ್ಯಗಳ ಸಲ್ಲಿಕೆ ಸಾಧ್ಯತೆ ಇದೆ. ಮಧ್ಯಾಹ್ನ 12 ಗಂಟೆಯಿಂದ, ಯುವತಿ ತಂದೆ, ತಾಯಿ ಹಾಗೂ ಸಹೋದರರಿಂದ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಸಿಡಿ ಗ್ಯಾಂಗ್, ಡಿಕೆಶಿ ಕಡೆಯವರಿಂದ ನಮ್ಮ ಮಗಳನ್ನು ರಕ್ಷಿಸಿ. ನಮ್ಮ ಮಗಳ ಪ್ರಾಣಕ್ಕೇ ಅಪಾಯವಿದೆ ಎಂದು ವಿಚಾರಣೆ ವೇಳೆ ಯುವತಿಯ ತಂದೆ-ತಾಯಿ ಅಲವತ್ತುಕೊಂಡಿದ್ದಾರೆ. ಈ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.\

ಇದನ್ನೂ ಓದಿ: ಸಿಡಿ ಪ್ರಕರಣ ರಾಷ್ಟ್ರಮಟ್ಟದಲ್ಲಿ ರಾಜ್ಯದ ನಾಚಿಕೆ ಪಡುವ ಸ್ಥಿತಿ ನಿರ್ಮಿಸಿದೆ; ನೈತಿಕ ನೆಲೆಗಟ್ಟಿನಲ್ಲಿ ವ್ಯಾಖ್ಯಾನಿಸಿದ ಜೆಡಿಎಸ್

ಆಡಿಯೋ ಮತ್ತು ವಿಡಿಯೋದಲ್ಲಿ ಇರುವುದು ನಮ್ಮ ಮಗಳೇ ಎಂದ ಪೋಷಕರು ; ರಮೇಶ್​ ಜಾರಕಿಹೊಳಿಗೆ ಕಂಟಕ ಹೆಚ್ಚಾಯ್ತು..

Published On - 3:48 pm, Sat, 27 March 21

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು