AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ವಿಚಾರಣೆ ಬಳಿಕ ಪೊಲೀಸ್ ಭದ್ರತೆಯೊಂದಿಗೆ ಬೆಳಗಾವಿಗೆ ಮರಳಿದ ಸಿಡಿ ಯುವತಿ ಪೋಷಕರು

ಪೊಲೀಸ್ ಭದ್ರತೆಯೊಂದಿಗೆ ಯುವತಿ ಪೋಷಕರು ಬೆಳಗಾವಿಗೆ ತೆರಳಿದ್ದಾರೆ. ಸಿಡಿ ಲೇಡಿ ಪೋಷಕರಿಗೆ ಎಸ್​ಕಾರ್ಟ್​ ಭದ್ರತೆ ನೀಡಲಾಗಿದೆ. ಇನ್ಸ್​ಪೆಕ್ಟರ್​ ಪರಮೇಶ್ವರ್​ ಮತ್ತು ಇಬ್ಬರು ಕಾನ್​ಸ್ಟೇಬಲ್ ನೆರವಿನೊಂದಿಗೆ ಅವರು ಬೆಳಗಾವಿಗೆ ಮರಳಿದ್ದಾರೆ.

ಎಸ್​ಐಟಿ ವಿಚಾರಣೆ ಬಳಿಕ ಪೊಲೀಸ್ ಭದ್ರತೆಯೊಂದಿಗೆ ಬೆಳಗಾವಿಗೆ ಮರಳಿದ ಸಿಡಿ ಯುವತಿ ಪೋಷಕರು
ಸಿಡಿ ಯುವತಿಯ ಕುಟುಂಬಸ್ಥರು
TV9 Web
| Edited By: |

Updated on:Apr 05, 2022 | 1:10 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ವಿದ್ಯಮಾನಗಳು ಇಂದು (ಮಾರ್ಚ್ 27) ಘಟಿಸಿವೆ. ಸಿಡಿಯಲ್ಲಿದ್ದ ಯುವತಿಯ ಹೆತ್ತವರು ಮತ್ತು ಸಹೋದರ ಎಸ್​ಐಟಿ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮದ ಜೊತೆಗೂ ಮಾತನಾಡಿದ್ದಾರೆ. ಈ ಘಟನೆಯ ಬಳಿಕ ಯುವತಿಯ ಮನೆಯವರು ಬೆಳಗಾವಿಗೆ ಮರಳಿದ್ದಾರೆ.

ಪೊಲೀಸ್ ಭದ್ರತೆಯೊಂದಿಗೆ ಯುವತಿ ಪೋಷಕರು ಬೆಳಗಾವಿಗೆ ತೆರಳಿದ್ದಾರೆ. ಸಿಡಿ ಲೇಡಿ ಪೋಷಕರಿಗೆ ಎಸ್​ಕಾರ್ಟ್​ ಭದ್ರತೆ ನೀಡಲಾಗಿದೆ. ಇನ್ಸ್​ಪೆಕ್ಟರ್​ ಪರಮೇಶ್ವರ್​ ಮತ್ತು ಇಬ್ಬರು ಕಾನ್​ಸ್ಟೇಬಲ್ ನೆರವಿನೊಂದಿಗೆ ಅವರು ಬೆಳಗಾವಿಗೆ ಮರಳಿದ್ದಾರೆ.

ಎಸ್​ಐಟಿ ವಿಚಾರಣೆ ಬಳಿಕ ಬೆಳಗಾವಿಗೆ ಹೊರಟಿರುವ ಯುವತಿ ಪೋಷಕರು ಈಗ ನೆಲಮಂಗಲ ಬಿಟ್ಟು ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ತಲುಪಿದ್ದಾರೆ ಎಂದು ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್​ ವಿಚಾರವಾಗಿ ಸಿಡಿ ಲೇಡಿಯ ಪೋಷಕರು ಸುದ್ದಿಗೋಷ್ಠಿ ನಡೆಸಿದ್ದರು. SIT ಟೆಕ್ನಿಕಲ್ ವಿಂಗ್​ನಲ್ಲಿ ಯುವತಿ ಪೋಷಕರು ಸುದ್ದಿಗೋಷ್ಠಿ ನಡೆಸಿದ್ದರು. ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ, ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಒಬ್ಬ ಹೆಣ್ಣುಮಗಳನ್ನ ಇಟ್ಟುಕೊಂಡು ರಾಜಕಾರಣ ಮಾಡ್ತಿದ್ದಾರೆ ಎಂದು ಸಂತ್ರಸ್ತೆ ಸಹೋದರ ಹೇಳಿದ್ದರು.

ಮಾರ್ಚ್ 2ರಂದು ಸಿಡಿ ಪ್ರಕರಣ ಬೆಳಕಿಗೆ ಬಂದಾಗ ನನ್ನ ಅಕ್ಕನ ಜೊತೆ ಮೊಬೈಲ್​ನಲ್ಲಿ ಚರ್ಚಿಸಿದ್ದ ಆಡಿಯೋ ವೈರಲ್​ ಆಗಿದೆ. ನನ್ನ ಅಕ್ಕನ ಮೊಬೈಲ್​ ಸ್ವಿಚ್​​ಆಫ್​ ಆಗಿತ್ತು. ನಮ್ಮ ಅಕ್ಕನನ್ನು ತಂದು ಕೊಡುವಂತೆ ಯುವತಿ ಸಹೋದರ ಮನವಿ ಮಾಡಿದ್ದಾರೆ. ಮಾರ್ಚ್ 2ನೇ ತಾರೀಖು ಡಿಕೆಶಿ ನಿವಾಸದ ಬಳಿ ತೆರಳಿದ್ದಳು. ನಮ್ಮ ಅಕ್ಕ ಡಿ.ಕೆ.ಶಿವಕುಮಾರ್​ ಮನೆ ಮನೆ ಬಳಿ ತೆರಳಿದ್ದಳು ಎಂದು ಸಿಡಿ ಲೇಡಿ ಸಹೋದರ ಹೇಳಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 7:55 pm, Sat, 27 March 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ