ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?

ಅರೆಸ್ಟ್ ಆಗಿಬಿಡ್ತಾರಾ ಜಾರಕಿಹೊಳಿ? ಮಾಜಿ ಸಚಿವರಿಗೆ ನಿಜಕ್ಕೂ ಬಂಧನ ಭೀತಿ ಎದುರಾಗಿಬಿಡ್ತಾ? ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿಯಲ್ಲಿದ್ದ ಯುವತಿ ದೂರು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಜಾರಕಿಹೊಳಿ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿದೆ.

ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?
ರಮೇಶ್ ಜಾರಕಿಹೊಳಿ
Follow us
| Updated By: ganapathi bhat

Updated on:Apr 05, 2022 | 1:13 PM

ಬೆಂಗಳೂರು: ಅರೆಸ್ಟ್ ಆಗಿಬಿಡ್ತಾರಾ ಜಾರಕಿಹೊಳಿ? ಮಾಜಿ ಸಚಿವರಿಗೆ ನಿಜಕ್ಕೂ ಬಂಧನ ಭೀತಿ ಎದುರಾಗಿಬಿಡ್ತಾ? ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿಯಲ್ಲಿದ್ದ ಯುವತಿ ದೂರು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಜಾರಕಿಹೊಳಿ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿದೆ. ದೂರಿನ ಆಧಾರದಲ್ಲಿ ಹೇಗಿರಲಿದೆ ಎಸ್‌ಐಟಿ ಮುಂದಿನ ನಡೆ ಎಂಬ ಬಗ್ಗೆ ಟಿವಿ9 ತನಿಖೆಯ ಮುಂದಿನ ಹಾದಿಯ ಸ್ಪಷ್ಟ ಚಿತ್ರಣ ತೆರೆದಿಡುತ್ತಿದೆ.

ಸದ್ಯಕ್ಕೆ ರಮೇಶ್ ಜಾರಕಿಹೊಳಿ ಅರೆಸ್ಟ್ ಸಾಧ್ಯತೆ ಕಡಿಮೆಯಾಗಿದೆ. ಯಾಕಂದ್ರೆ ಈ ರೀತಿ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ಅಗತ್ಯ. ಸಂತ್ರಸ್ತ ಮಹಿಳೆಯ ವೈದ್ಯಕೀಯ ಪರೀಕ್ಷೆ ಆಗಲೇಬೇಕು. ಆನಂತರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ಬಹುಮುಖ್ಯವಾಗಿರುತ್ತದೆ. ಸಿಆರ್‌ಪಿಸಿ 164 ಪ್ರಕಾರ ಸಂತ್ರಸ್ತೆ ಹೇಳಿಕೆ ದಾಖಲಿಸಬೇಕು.

ಸಂತ್ರಸ್ತೆಯ ದೂರು, FIR ದಾಖಲು ಬಳಿಕ ಮುಂದೇನು? ಮೊದಲು ಠಾಣೆಯಿಂದ ಎಸ್‌ಐಟಿಗೆ ಕೇಸ್ ವರ್ಗಾವಣೆಯಾಗುತ್ತದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಮೂವರು ಮಹಿಳಾ ACPಗಳು ಇದ್ದು, ಎಸಿಪಿ ಶ್ರೇಣಿ ಮಹಿಳಾ ಅಧಿಕಾರಿ ಈ ತನಿಖೆಗೆ ನೇಮಕವಾಗಬೇಕು. ಸಂತ್ರಸ್ತೆಗೆ ನೋಟಿಸ್ ನೀಡಿ ಎಸಿಪಿ ತನಿಖೆ ಆರಂಭಿಸಲಿದ್ದಾರೆ. ಮೂರು ಮೂರು ದಿನ ಅಂತರದಲ್ಲಿ 3 ಬಾರಿ ನೋಟಿಸ್ ನೀಡಿ ಕೇಸ್‌ ಪ್ರಗತಿ ಬಗ್ಗೆ ನಿರಂತರವಾಗಿ ಕೋರ್ಟ್‌ಗೆ ಮಾಹಿತಿ ನೀಡಲಿದ್ದಾರೆ. SIT ಅಧಿಕಾರಿಗಳು ಕೇಸ್‌ ಡೈರಿ ಫೈಲ್ ಮಾಡಲಿದ್ದಾರೆ.

ರಮೇಶ ಜಾರಕಿಹೊಳಿ ನಿವಾಸಕ್ಕೆ ಬಾಲಚಂದ್ರ ಜಾರಕಿಹೊಳಿ ಭೇಟಿ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿಯನ್ನು ಸಹೋದರ ಬಾಲಚಂದ್ರ ಜಾರಕಿಹೊಳಿ ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ರಮೇಶ್ ನಿವಾಸಕ್ಕೆ ಬಾಲಚಂದ್ರ ಜಾರಕಿಹೊಳಿ ಬಂದು ಮಾತುಕತೆ ನಡೆಸಿದ್ದಾರೆ. ದೂರು ಸಂಬಂಧ ಜಾರಕಿಹೊಳಿ ಬ್ರದರ್ಸ್ ಮಾತುಕತೆ ಮಾಡಿದ್ದಾರೆ. ಮುಂದಿನ ನಡೆ ಬಗ್ಗೆಯೂ ಜಾರಕಿಹೊಳಿ ಬ್ರದರ್ಸ್ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು

ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ? ರಮೇಶ್ ಜಾರಕಿಹೊಳಿ ಸವಾಲ್

Published On - 4:15 pm, Fri, 26 March 21

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ