AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?

ಅರೆಸ್ಟ್ ಆಗಿಬಿಡ್ತಾರಾ ಜಾರಕಿಹೊಳಿ? ಮಾಜಿ ಸಚಿವರಿಗೆ ನಿಜಕ್ಕೂ ಬಂಧನ ಭೀತಿ ಎದುರಾಗಿಬಿಡ್ತಾ? ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿಯಲ್ಲಿದ್ದ ಯುವತಿ ದೂರು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಜಾರಕಿಹೊಳಿ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿದೆ.

ದೂರಿನ ಬೆನ್ನಲ್ಲೇ ಅರೆಸ್ಟ್ ಆಗಿಬಿಡ್ತಾರಾ ರಮೇಶ್ ಜಾರಕಿಹೊಳಿ? ಎಸ್​ಐಟಿ ಮುಂದಿನ ನಡೆ ಏನು?
ರಮೇಶ್ ಜಾರಕಿಹೊಳಿ
TV9 Web
| Edited By: |

Updated on:Apr 05, 2022 | 1:13 PM

Share

ಬೆಂಗಳೂರು: ಅರೆಸ್ಟ್ ಆಗಿಬಿಡ್ತಾರಾ ಜಾರಕಿಹೊಳಿ? ಮಾಜಿ ಸಚಿವರಿಗೆ ನಿಜಕ್ಕೂ ಬಂಧನ ಭೀತಿ ಎದುರಾಗಿಬಿಡ್ತಾ? ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿಯಲ್ಲಿದ್ದ ಯುವತಿ ದೂರು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಜಾರಕಿಹೊಳಿ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿದೆ. ದೂರಿನ ಆಧಾರದಲ್ಲಿ ಹೇಗಿರಲಿದೆ ಎಸ್‌ಐಟಿ ಮುಂದಿನ ನಡೆ ಎಂಬ ಬಗ್ಗೆ ಟಿವಿ9 ತನಿಖೆಯ ಮುಂದಿನ ಹಾದಿಯ ಸ್ಪಷ್ಟ ಚಿತ್ರಣ ತೆರೆದಿಡುತ್ತಿದೆ.

ಸದ್ಯಕ್ಕೆ ರಮೇಶ್ ಜಾರಕಿಹೊಳಿ ಅರೆಸ್ಟ್ ಸಾಧ್ಯತೆ ಕಡಿಮೆಯಾಗಿದೆ. ಯಾಕಂದ್ರೆ ಈ ರೀತಿ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ಅಗತ್ಯ. ಸಂತ್ರಸ್ತ ಮಹಿಳೆಯ ವೈದ್ಯಕೀಯ ಪರೀಕ್ಷೆ ಆಗಲೇಬೇಕು. ಆನಂತರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ಬಹುಮುಖ್ಯವಾಗಿರುತ್ತದೆ. ಸಿಆರ್‌ಪಿಸಿ 164 ಪ್ರಕಾರ ಸಂತ್ರಸ್ತೆ ಹೇಳಿಕೆ ದಾಖಲಿಸಬೇಕು.

ಸಂತ್ರಸ್ತೆಯ ದೂರು, FIR ದಾಖಲು ಬಳಿಕ ಮುಂದೇನು? ಮೊದಲು ಠಾಣೆಯಿಂದ ಎಸ್‌ಐಟಿಗೆ ಕೇಸ್ ವರ್ಗಾವಣೆಯಾಗುತ್ತದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಮೂವರು ಮಹಿಳಾ ACPಗಳು ಇದ್ದು, ಎಸಿಪಿ ಶ್ರೇಣಿ ಮಹಿಳಾ ಅಧಿಕಾರಿ ಈ ತನಿಖೆಗೆ ನೇಮಕವಾಗಬೇಕು. ಸಂತ್ರಸ್ತೆಗೆ ನೋಟಿಸ್ ನೀಡಿ ಎಸಿಪಿ ತನಿಖೆ ಆರಂಭಿಸಲಿದ್ದಾರೆ. ಮೂರು ಮೂರು ದಿನ ಅಂತರದಲ್ಲಿ 3 ಬಾರಿ ನೋಟಿಸ್ ನೀಡಿ ಕೇಸ್‌ ಪ್ರಗತಿ ಬಗ್ಗೆ ನಿರಂತರವಾಗಿ ಕೋರ್ಟ್‌ಗೆ ಮಾಹಿತಿ ನೀಡಲಿದ್ದಾರೆ. SIT ಅಧಿಕಾರಿಗಳು ಕೇಸ್‌ ಡೈರಿ ಫೈಲ್ ಮಾಡಲಿದ್ದಾರೆ.

ರಮೇಶ ಜಾರಕಿಹೊಳಿ ನಿವಾಸಕ್ಕೆ ಬಾಲಚಂದ್ರ ಜಾರಕಿಹೊಳಿ ಭೇಟಿ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿಯನ್ನು ಸಹೋದರ ಬಾಲಚಂದ್ರ ಜಾರಕಿಹೊಳಿ ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ರಮೇಶ್ ನಿವಾಸಕ್ಕೆ ಬಾಲಚಂದ್ರ ಜಾರಕಿಹೊಳಿ ಬಂದು ಮಾತುಕತೆ ನಡೆಸಿದ್ದಾರೆ. ದೂರು ಸಂಬಂಧ ಜಾರಕಿಹೊಳಿ ಬ್ರದರ್ಸ್ ಮಾತುಕತೆ ಮಾಡಿದ್ದಾರೆ. ಮುಂದಿನ ನಡೆ ಬಗ್ಗೆಯೂ ಜಾರಕಿಹೊಳಿ ಬ್ರದರ್ಸ್ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು

ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ? ರಮೇಶ್ ಜಾರಕಿಹೊಳಿ ಸವಾಲ್

Published On - 4:15 pm, Fri, 26 March 21

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ