AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಿಂದ ಬೆಂಗಳೂರಿಗೆ ಯುವತಿ ಅಪಹರಣ ಪ್ರಕರಣ ವರ್ಗಾವಣೆ

ರಮೇಶ್​ ಜಾರಕಿಹೊಳಿ ಸಿಡಿ ಸುದ್ದಿಸ್ಫೋಟ ಪ್ರಕರಣದಲ್ಲಿ ಯುವತಿಯ ತಂದೆ ನೀಡಿದ್ದ ಅಪಹರಣದ ದೂರಿನ ಪ್ರಕರಣವನ್ನು ಬೆಳಗಾವಿಯ ಎಪಿಎಂಸಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ಬೆಂಗಳೂರಿನ ಆರ್​.ಟಿ.ನಗರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ಯುವತಿ ಅಪಹರಣ ಪ್ರಕರಣ ವರ್ಗಾವಣೆ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on: Mar 18, 2021 | 4:21 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಸುದ್ದಿಸ್ಫೋಟ ಪ್ರಕರಣದಲ್ಲಿರುವ ಸಂತ್ರಸ್ತೆ ಎನ್ನಲಾದ ಯುವತಿಯ ತಂದೆ ನೀಡಿದ್ದ ಅಪಹರಣದ ದೂರಿನ ಪ್ರಕರಣವನ್ನು ಬೆಳಗಾವಿಯ ಎಪಿಎಂಸಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ಬೆಂಗಳೂರಿನ ಆರ್​.ಟಿ.ನಗರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ಪೊಲೀಸ್ ಮಹಾನಿರ್ದೇಶಕರ ನಿರ್ದೇಶನದ ಮೇರೆಗೆ ಈ ಕ್ರಮಕೈಗೊಳ್ಳಲಾಗಿದೆ. ಆರ್​.ಟಿ.ನಗರ ಪೊಲೀಸರು ಈ ಪ್ರಕರಣವನ್ನು ಎಸ್​ಐಟಿಗೆ ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಬೆಳಗಾವಿ ಎಪಿಎಂಸಿ ಠಾಣೆಯಿಂದ ಪ್ರಕರಣದ ಕಡತ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಅವರ ಕಚೇರಿ ತಲುಪಿತು. ಕಡತವನ್ನು ಪರಿಶೀಲಿಸಿದ ನಂತರ ಆರ್​.ಟಿ.ನಗರ ಠಾಣೆಯ ಇನ್​ಸ್ಪೆಕ್ಟರ್ ಅಶ್ವತ್ಥ ಗೌಡ ಅವರಿಗೆ ಡಿಸಿಪಿ ಕಡತವನ್ನು ಹಸ್ತಾಂತರಿಸಲಿದ್ದಾರೆ.

ಸಂತ್ರಸ್ತೆ ಎನ್ನಲಾದ ಯುವತಿಯ ತಂದೆ ಮಾರ್ಚ್​ 16ರಂದು ಬೆಳಗಾವಿಯ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಐಪಿಸಿ 363, 368, 343, 346, 354, 506 ಸೆಕ್ಷನ್​ಗಳಡಿ ದೂರು ದಾಖಲಿಸಿಕೊಳ್ಳಲಾಗಿತ್ತು. ಬೆಂಗಳೂರಿನ ಹಾಸ್ಟೆಲ್​ನಲ್ಲಿದ್ದಾಗ ನನ್ನ ಮಗಳನ್ನು ಅಪಹರಿಸಿ, ಹೆದರಿಸಿ, ಕಿರುಕುಳ ಕೊಟ್ಟು ಅಶ್ಲೀಲ ಸಿಡಿ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.

ಮಾಜಿ ಪತ್ರಕರ್ತ ನರೇಶ್​ ಗೌಡ ಊರಿನಲ್ಲಿ ಪೊಲೀಸರ ಶೋಧ

ಶಾಸಕ ರಮೇಶ್​ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪತ್ರಕರ್ತ ನರೇಶ್ ಗೌಡ ಪತ್ತೆಹಚ್ಚಲು ಎಸ್​ಐಟಿ ಅಧಿಕಾರಿಗಳು ಶಿರಾ ಹಾಗೂ ಭುವನಹಳ್ಳಿಯಲ್ಲಿ ಎಸ್​ಐಟಿಯಿಂದ ಶೋಧ ನಡೆಸುತ್ತಿದ್ದಾರೆ. ಸ್ಥಳೀಯರು ಹಾಗೂ ಸ್ನೇಹಿತರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. 3 ತಿಂಗಳ ವ್ಯವಹಾರ, ಹಣ ವಹಿವಾಟು ಬಗ್ಗೆ ಮಫ್ತಿಯಲ್ಲಿಯೇ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:

ರಮೇಶ್​ ಜಾರಕಿಹೊಳಿ ‘ಸಿಡಿ’ ಮಾಸ್ಟರ್​ ಮೈಂಡ್​ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ

ರಮೇಶ್​ ಜಾರಕಿಹೊಳಿ ‘ಸಿಡಿ’ ಮಾಸ್ಟರ್​ ಮೈಂಡ್​ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್