AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? – ಸಿದ್ದರಾಮಯ್ಯ

Ramesh Jarkiholi: ಸಿಡಿಯನ್ನು ಸಿಬಿಐ ತನಿಖೆಗಾದ್ರೂ ಕೊಡಲಿ ಬೇರೆ ಯಾವುದಕ್ಕಾದ್ರೂ ಕೊಡಲಿ ಆದರೆ, ಮೊದಲು ರಾಜೀನಾಮೆ ಕೊಡಿಸಲಿ ಎಂದು ಹೇಳಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಚಲೋ ಎಂದಿರಿವ ವಿಚಾರದ ಬಗ್ಗೆ ಮಾತನಾಡಿ, ಆತ ಸತ್ಯ ಹೇಳಿದ್ದಾನೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? - ಸಿದ್ದರಾಮಯ್ಯ
ರಮೇಶ್​ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ
Skanda
|

Updated on: Mar 03, 2021 | 12:54 PM

Share

ರಮೇಶ್​ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾನ‌ ಮರ್ಯಾದೆ ಇದ್ದರೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ. ಹಿಂದೆ‌ ಹೆಚ್.ವೈ.ಮೇಟಿ ಪ್ರಕರಣದಲ್ಲೂ ಇದೇ ರೀತಿ ಆಗಿತ್ತು. ಆಗಲೂ ನಕಲಿ ಸಿಡಿ ಅಂತಾ ಹೇಳಲಾಗಿತ್ತು. ಆದರೂ ನಾವು ಕೂಡಲೇ ರಾಜೀನಾಮೆ ಪಡೆದಿದ್ದೆವು. ಇವರಿಗೆ ಮಾನ ಮರ್ಯಾದೆ ಇಲ್ಲ. ಸಿಡಿಯನ್ನು ಸಿಬಿಐ ತನಿಖೆಗಾದ್ರೂ ಕೊಡಲಿ ಬೇರೆ ಯಾವುದಕ್ಕಾದ್ರೂ ಕೊಡಲಿ ಆದರೆ, ಮೊದಲು ರಾಜೀನಾಮೆ ಕೊಡಿಸಲಿ ಎಂದು ಹೇಳಿದ್ದಾರೆ. ಜೊತೆಗೆ, ‘ಸಿದ್ದರಾಮಯ್ಯ ಚಲೋ’ ಎಂದು ಸಿಡಿಯಲ್ಲಿ ಯುವತಿ ಜೊತೆ ಮಾತನಾಡುತ್ತಾ, ರಮೇಶ್​ ಜಾರಕಿಹೊಳಿ ಹೇಳಿರುವ ವಿಚಾರದ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ‘ಆತ ಸತ್ಯ’ ಹೇಳಿದ್ದಾನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೈತ್ರಿ ಸರ್ಕಾರ ಬೀಳಿಸಿದವರು ಇದಕ್ಕೆ ಉತ್ತರಿಸಬೇಕು. ಇಂತಹ ವಿಷಯಗಳಿಟ್ಟುಕೊಂಡು ನಾನು ರಾಜಕೀಯ ಮಾಡಲ್ಲ. ಆದರೆ, ರಾಜಕೀಯ ವ್ಯಕ್ತಿಗಳ ಈ ರೀತಿ ನಡುವಳಿಕೆ ಸರಿಯಲ್ಲ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಯಡಿಯೂರಪ್ಪ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ವೆಂಕಟರಾವ್ ನಾಡಗೌಡ ಸಹ ಮಾತನಾಡಿ, ಸಿಡಿ ನಿಜವೋ ಸುಳ್ಳೋ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತಿರುತ್ತದೆ. ಆದರೆ ಈಗ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಒಂದು ವೇಳೆ ಅದು ಸುಳ್ಳು ಅನ್ನೋದಾದ್ರೆ ನಂತರ ಅವರು ಮತ್ತೆ ಸಚಿವರಾಗಬಹುದು. ಹೀಗಾಗಿ ಈಗ ರಾಜೀನಾಮೆ ನೀಡುವುದೇ ಉತ್ತಮ ಎಂದಿದ್ದಾರೆ. ಈ ಸಂಬಂಧ ಜೆಡಿಎಸ್ ನಿಲುವೇನು ಎಂಬುದು ನನಗೆ ಗೊತ್ತಿಲ್ಲ. ನಾಳೆ ಪಕ್ಷದ ಪ್ರಮುಖರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದ್ದಾರೆ.

ಈ ನಡುವೆ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ರಮೆಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಹೋದರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?