AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ಥ ಯುವತಿ ಯಾವುದೇ ಹೇಳಿಕೆಯನ್ನು ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ: ವಕೀಲ ಸೂರ್ಯ ಮುಕುಂದರಾಜ್​

Advocate Surya Mukundaraj: ಸಿಡಿ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್​ ಮತ್ತು ಮಂಜುನಾಥ್​ ಅವರು ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ಥ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಪ್ರಕರಣದಲ್ಲಿ ಆಕೆ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ ಎಂದು ಹೇಳಿದ್ದಾರೆ.

ಸಂತ್ರಸ್ಥ ಯುವತಿ ಯಾವುದೇ ಹೇಳಿಕೆಯನ್ನು ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ: ವಕೀಲ  ಸೂರ್ಯ ಮುಕುಂದರಾಜ್​
ಸಿಡಿ ಪ್ರಕರಣದಲ್ಲಿ ಸಂತ್ರಸ್ಥ ಯುವತಿ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ- ವಕೀಲರಾದ ಮುಕುಂದರಾಜ್​ ಮತ್ತು ಜಗದೀಶ್
ಸಾಧು ಶ್ರೀನಾಥ್​
|

Updated on:Apr 12, 2021 | 3:15 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕಿಂಗ್ ಪಿನ್​ಗಳಾದ ನರೇಶ್ ಗೌಡ ಮತ್ತು ಶ್ರವಣ್ ಅವರು ತನ್ನನ್ನು ಹನಿಟ್ರ್ಯಾಪ್​ ಆಗಿ ಬಳಸಿಕೊಂಡಿದ್ದಾರೆ ಎಂದು ಸಿಡಿ ಸಂತ್ರಸ್ಥೆಯು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಎದುರು ಇಂದು ಹಾಜರಾಗಿ ಸ್ಫೋಟಕ ಹೇಳಿದ್ದಳು ಎಂದು ವರದಿಯಾಗಿತ್ತು. ಆದರೆ ಸಿಡಿ ಯುವತಿ ವಕೀಲರಾದ ಸೂರ್ಯ ಮುಕುಂದರಾಜ್, ಜಗದೀಶ್​ ಮತ್ತು ಮಂಜುನಾಥ್​ ಅವರು ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ಥ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಪ್ರಕರಣದಲ್ಲಿ ಆಕೆ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ ಎಂದು ಹೇಳಿದ್ದಾರೆ.

ಇನ್ನು ಕೆಲವೇ ಹೊತ್ತಿನಲ್ಲಿ ಯುವತಿ ಕಡೆಯಿಂದ ಸ್ಪಷ್ಟನೆ ಸಿಗುತ್ತದಾ?

ಸಂತ್ರಸ್ಥ ಯುವತಿ ಇಂದು ಎಸ್​ಐಟಿ ಎದುರು ಹಾಜರಾಗಿ ವಾಟ್ಸಪ್ ಚಾಟಿಂಗ್ ಮಾಹಿತಿ ನೀಡಬೇಕಿತ್ತು. ಹೀಗಾಗಿ ಆಡುಗೋಡಿ ಎಸ್​ಐಟಿ ಕಚೇರಿಗೆ ತೆರಳಿದ್ದಳು. ಆ ಸಂದರ್ಭದಲ್ಲಿ ಯಾವುದೇ ರೀತಿಯ ವ್ಯತಿರಿಕ್ತ ಹೇಳಿಕೆಯನ್ನು ನೀಡಿಲ್ಲ. ಉಲ್ಟಾ ಹೊಡೆದಿಲ್ಲಾ. ಖುದ್ದಾಗಿ ಆಕೆಯನ್ನು ಮಾತನಾಡಿಸಿಕೊಂಡು ಬಂದಿರುವುದಾಗಿ ಸಿಡಿ ಲೇಡಿ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದೆಲ್ಲ ಹೈಡ್ರಾಮ. ಸಂತ್ರಸ್ಥ ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ.ಅದೆಲ್ಲಾ ಊಹಾಪೋಹ. ಎಸ್​ಐಟಿ ಅಧಿಕಾರಿಗಳೇ ಇಂತಹ ಮಾಹಿತಿಯನ್ನು ಸೋರಿಕೆ ಮಾಡಿರಬಹುದು ಎಂದು ಯುವತಿ ಪರ ವಕೀಲರು ಹೇಳಿದ್ದು, ಕೆಲವೇ ಹೊತ್ತಿನಲ್ಲಿ ಯುವತಿಯ ಕಡೆಯಿಂದ ಈ ಬಗ್ಗೆ ಖಚಿತ ಮಾಹಿತಿ ಒದಗಿಸಲಾಗುವುದು. ಜನಕ್ಕೆ ಸ್ಪಷ್ಟ ಚಿತ್ರಣ ನೀಡಲಾಗುವುದು. ಇಂತಹ ಸುದ್ದಿಗಳಿಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿಯೂ ಆದ ವಕೀಲ ಸೂರ್ಯ ಮುಕುಂದರಾಜ್ ತಿಳಿಸಿದ್ದಾರೆ.

ಕುತೂಹಲದ ಸಂಗತಿಯೆಂದರೆ ಈ ಮಧ್ಯೆ, ಎಸ್​ಐಟಿ ತನಿಖಾಧಿಕಾರಿಗಳು ಯುವತಿಯ ಇಚ್ಛೆಯಂತೆ ಆಕೆಯ ಬದಲಾದ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್​ ಎದುರು ದಾಖಲಿಸಲು ನ್ಯಾಯಾಧೀಶರ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದಬಂದಿದೆ. ಅದರಂತೆ ಜಡ್ಜ್​ ಸಮಯ ನೋಡಿಕೊಂಡು ಯುವತಿಯನ್ನು ಹಾಜರುಪಡಿಸಿ, ಹೇಳಿಕೆ ದಾಖಲಿಸುವ ಪ್ರಯತ್ನ ನಡೆದಿದೆ.

ಇದನ್ನು ಓದಿ: ಕಿಂಗ್ ಪಿನ್ಸ್ ನರೇಶ್, ಶ್ರವಣ್ ವಿರುದ್ಧ ಸಿಡಿ ಲೇಡಿ ಸ್ಫೋಟಕ ಹೇಳಿಕೆ; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬ್ಲಾಸ್ಟಿಂಗ್ ಟ್ವಿಸ್ಟ್

Published On - 2:31 pm, Mon, 12 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!